ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇದೀಗ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ನಲ್ಲಿದ್ದಾರೆ. ಶನಿವಾರ ಫೆ.18ರಂದು ತಲೈವಾ ಶಿವರಾತ್ರಿ ಹಬ್ಬವನ್ನು ಚಿಕ್ಕಬಳ್ಳಾಪುರದ ಆದಿಯೋಗಿಯಲ್ಲಿ ಆಚರಣೆ ಮಾಡಿದ್ದರು. ಈಗ ಬೆಂಗಳೂರಿಗೆ ಬಂದಿದ್ದಾರೆ.
ಮೂರು ದಿನಗಳ ಶೂಟಿಂಗ್ಗಾಗಿ ನಟ ರಜನಿಕಾಂತ್ (Rajanikanth) ಮಂಗಳೂರಿಗೆ ಬಂದಿಳಿದಿದ್ದರು. ಈ ವೇಳೆ ಶಿವಣ್ಣ ಕೂಡ ಸಾಥ್ ನೀಡಿದ್ದರು. ಮಂಗಳೂರಿನ ಶೂಟಿಂಗ್ ಮುಗಿಸಿಕೊಂಡು ಅವರು ನೇರವಾಗಿ ಬೆಂಗಳೂರಿಗೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮದ ಬಳಿ ಇರುವ ಇಶಾ ಫೌಂಡೇಶನ್ಗೆ ಭೇಟಿ ನೀಡಿ ಆದಿಯೋಗಿಯ (Adiyogi) ದರ್ಶನ ಪಡೆದ ಬಳಿಕ ಇದೀಗ ಪತ್ನಿ ಲತಾ ಜೊತೆ ರಜನಿಕಾಂತ್ ಆರ್ಟ್ ಆಫ್ ಲಿವಿಂಗ್ನಲ್ಲಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್
ರಜನಿಕಾಂತ್ ಯಾವಾಗಲೂ ಹೀಗೆ ಅನಿರೀಕ್ಷಿತ ಭೇಟಿ ಕೊಡುತ್ತಲೇ ಇರುತ್ತಾರೆ. ಆಧ್ಯಾತ್ಮಿಕ ಜೀವಿಯೂ ಆಗಿರುವ ಅವರು ಅನೇಕ ದೇವಸ್ಥಾನಗಳಿಗೆ ಹೀಗೆ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹಿಮಾಲಯಕ್ಕೆ ಅವರು ಆಗಾಗ್ಗೆ ಹೋಗುತ್ತಾರೆ. ಅದರಲ್ಲೂ ಐಶ್ವರ್ಯಾ- ಧನುಷ್ (Aishwarya- Dhanush) ಡಿವೋರ್ಸ್ ನಂತರ ರಜನಿಕಾಂತ್ ಮಗಳ ಜೀವನ್ ಬಗ್ಗೆ ಚಿಂತೆಯಲ್ಲಿದ್ದಾರೆ. ಹಾಗಾಗಿ ಸಿನಿಮಾ ಜೊತೆಗೆ ಟೆಂಪಲ್ ರನ್ ಅಂತಾ ತಲೈವಾ ಬ್ಯುಸಿಯಾಗಿದ್ದಾರೆ. ಸದ್ಯ ಆರ್ಟ್ ಆಫ್ ಲಿವಿಂಗ್ನಲ್ಲಿ (Art Of Living) ಪತ್ನಿ ಜೊತೆ ಕುಳಿತಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k