ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರದಾನ ಸಮಾರಂಭಕ್ಕೆ ರಜನಿಕಾಂತ್ ಗೆ ಆಹ್ವಾನ

Public TV
1 Min Read
FotoJet 114

ವೆಂಬರ್ 1ರಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ತಮಿಳು ಸಿನಿಮಾ ರಂಗದ ಖ್ಯಾತ ನಟ, ಕನ್ನಡಿಗ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅತಿಥಿಗಳಾಗಿ ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಇಬ್ಬರೂ ನಟರಿಗೆ ಆಹ್ವಾನ ನೀಡಲಾಗಿದೆಯಂತೆ.

Puneeth 5

ರಜನಿಕಾಂತ್ (Rajinikanth) ಬೆಂಗಳೂರಿನಲ್ಲಿ ಹುಟ್ಟು ಬೆಳೆದವರು. ತಮಿಳು ಸಿನಿಮಾ ರಂಗದಲ್ಲಿ ಹೆಸರು ಮಾಡಿದರೂ, ಇವತ್ತಿಗೂ ಕರ್ನಾಟಕದೊಂದಿಗೆ ನಂಟು ಇಟ್ಟುಕೊಂಡಿದ್ದಾರೆ. ಆಗಾಗ್ಗೆ ಬೆಂಗಳೂರಿಗೂ ಬಂದು ಹೋಗುತ್ತಾರೆ. ಜ್ಯೂನಿಯರ್ ಎನ್.ಟಿ.ಆರ್  (Jr. N.T.R) ತಾಯಿ ಕೂಡ ಕರ್ನಾಟಕದವರು. ಹಾಗಾಗಿ ಈ ಇಬ್ಬರನ್ನೂ ಅತಿಥಿಯಾಗಿ ಕರೆದಿದ್ದಾರಂತೆ. ಬರುವ ಕುರಿತು ಈಗಲೇ ಖಚಿತತೆ ಇಲ್ಲದಿದ್ದರೂ, ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

Puneeth 4 1

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಇಂಥದ್ದೊಂದು ಗೌರವಕ್ಕೆ ಈ ಮೊದಲು ಡಾ.ರಾಜ್ ಕುಮಾರ್ ಕೂಡ ಪಾತ್ರರಾಗಿದ್ದಾರೆ. ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಈ ಇಬ್ಬರೂ ಪಾತ್ರರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *