ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

Public TV
2 Min Read
SUPREME COURT

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ ಅವರು ಗುರುವಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ. ಎ.ಜಿ.ಪೆರಾರಿವಾಲನ್ ಅವರಂತೆ ತನ್ನನ್ನೂ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಹ ಅಪರಾಧಿಯಾಗಿದ್ದ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನು ನಳಿನಿ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೂ ಮೊದಲು ನಳಿನಿ ಅವರು ಬಿಡುಗಡೆ ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಇದನ್ನೂ ಓದಿ: ಎಲ್ಲರೂ ಮನುಷ್ಯರೇ: ರಾಜೀವ್ ಗಾಂಧಿ ಹಂತಕನ ಪ್ರತಿಕ್ರಿಯೆ

rajiv gandhi killer

ಅರ್ಜಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್, ಸಂವಿಧಾನದ 142ನೇ ಪರಿಚ್ಛೇದದ ಅಡಿಯಲ್ಲಿ ಸುಪ್ರೀಂ ಕೋರ್ಟ್ ಹೊಂದಿರುವ ವಿಶೇಷ ಅಧಿಕಾರಗಳನ್ನು ತಾನು ಹೊಂದಿಲ್ಲ. ಆದ್ದರಿಂದ 2022ರ ಮೇ ತಿಂಗಳಲ್ಲಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ನಂತೆ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ, ಮತ್ತೊಬ್ಬ ಸಹ ಅಪರಾಧಿ ಪಿ.ರವಿಚಂದ್ರನ್ ಕೂಡ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಇದೀಗ 30 ವರ್ಷಗಳಿಂದ ಜೈಲಿನಲ್ಲಿರುವ ರವಿಚಂದ್ರನ್ ಅವರು ಔಪಚಾರಿಕ ಬಿಡುಗಡೆಗಾಗಿ ತಮ್ಮ ಪ್ರಕರಣವು ಮುಕ್ತಾಯಗೊಳ್ಳುವವರೆಗೆ ಮಧ್ಯಂತರ ಜಾಮೀನು ಕೋರಿದ್ದಾರೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆಪ್ರಕರಣ: ನನ್ನ ಮಗಳೂ ಬಿಡುಗಡೆ ಆಗ್ತಾಳೆಂಬ ನಂಬಿಕೆಯಿದೆ ಎಂದ ನಳಿನಿ ತಾಯಿ

Rajiv Gandhis killer Perarivalan

ಪೆರಾರಿವಾಲನ್ ಬಿಡುಗಡೆಯನ್ನು ಉಲ್ಲೇಖಿಸಿ ತಮ್ಮ ಮನವಿ ಸಲ್ಲಿಸುವುದಾದರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಹೈಕೋರ್ಟ್ ಹೇಳಿತ್ತು. ಮೇ 18 ರಂದು, ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ತನಗೆ ನೀಡಿರುವ ಪರಮಾಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿತ್ತು.

ಪೆರಾರಿವಾಲನ್ ಬಿಡುಗಡೆಯ ನಂತರ, ರವಿಚಂದ್ರನ್ ಅವರು ತನ್ನನ್ನೂ ಸೇರಿದಂತೆ ಉಳಿದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಪತ್ರ ಕಳುಹಿಸಿದ್ದರು. ರಾಜ್ಯಪಾಲರು ಮೂರು ವರ್ಷಗಳಿಂದ ಬಿಡುಗಡೆಯ ಕಡತಗಳನ್ನು ಪರಿಗಣಿಸದೆ ಇರಿಸಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ ಎಂದು ಖಂಡಿಸಿದ್ದರು. ಇದನ್ನೂ ಓದಿ: ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

ಸೆಪ್ಟೆಂಬರ್ 2018ರಲ್ಲಿ ತಮಿಳುನಾಡು ಸರ್ಕಾರ ಮಾಡಿದ ಶಿಫಾರಸಿನ ಆಧಾರದ ಮೇಲೆ ಜೈಲಿನಿಂದ ಅವಧಿಪೂರ್ವ ಬಿಡುಗಡೆಗಾಗಿ ಪೆರಾರಿವಾಲನ್ ಅವರ ಮನವಿಯನ್ನು ಪುರಸ್ಕರಿಸಿ, ಸುಪ್ರೀಂ ಕೋರ್ಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ಆದರೆ ಇತರ ಆರು ಅಪರಾಧಿಗಳು ಜೈಲಿನಲ್ಲಿದ್ದಾರೆ.

ರವಿಚಂದ್ರನ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ ಮೇಲ್ಮನವಿಯಲ್ಲಿ ಪೆರಾರಿವಾಲನ್ ಅವರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಮೇ 21, 1991ರ ರಾತ್ರಿ ತಮಿಳುನಾಡಿನ ಪೆರಂಬದೂರಿನಲ್ಲಿ ಚುನಾವಣಾ ರ‍್ಯಾಲಿ ವೇಳೆ ಧನು ಎಂದು ಗುರುತಿಸಲ್ಪಟ್ಟ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಗಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *