ಕಲಬುರಗಿ: ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಮನೆಯಲ್ಲೂ ಅಕ್ಕ-ತಂಗಿಯರು ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ ಎಂದು ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಲಂಚ-ಮಂಚದ ಸರ್ಕಾರ ಹೇಳಿಕೆ ವಿಚಾರವನ್ನು ತೀವ್ರವಾಗಿ ಖಂಡಿಸಿದ ಅವರು, ನಮ್ಮ ಮನೆಯಲ್ಲಿ ಅಕ್ಕ ತಂಗಿಯರು ಜಾಬ್ಗೆ ಹೋಗಿದ್ದಾರೆ ಅವರೇನು ಮಂಚ ಏರಿ ಹೋಗಿದ್ದಾರಾ? ನಿಮ್ಮ ಮನೆಯಲ್ಲೂ ಅಕ್ಕ ತಂಗಿಯರು ಜಾಬ್ಗೆ ಹೋಗಿದ್ದಾರೆ ಅವರೂ ಮಂಚ ಏರಿ ಹೋಗಿದ್ದಾರಾ? ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈ ರೀತಿಯ ಹೇಳಿಕೆಗಳು ಶೋಭೆ ತರುವುದಿಲ್ಲ. ಲಂಚದ ಬಗ್ಗೆ ಮಾತನಾಡುತ್ತಾರೆ ಸರಿ, ಆದರೆ ಮಂಚದ ಬಗ್ಗೆ ಮಾತನಾಡಿ ರಾಜ್ಯದ ಮಹಿಳೆಯರ ಗೌರವ ತೆಗೆಯುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ
ಪ್ರಿಯಾಂಕ್ ಖರ್ಗೆ ಅವರು ಸಹ ಒಬ್ಬ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದರು. ಅವರ ಮನೆಯಲ್ಲೂ ಸಹ ಅಕ್ಕ-ತಂಗಿಯರು ಇದ್ದಾರೆ. ಅವರು ಕೂಡ ಮಂಚ ಹತ್ತಿ ನೌಕರಿಗೆ ಹೋಗಿದ್ದಾರಾ? ಮಾತಾಡಬೇಕಾದರೆ ನಾಲಿಗೆ ಮೇಲೆ ಹಿಡಿತ ಇರಲಿ. ಮಂಚ ಹತ್ತಿ ನೌಕರಿಗೆ ಹೋಗಿರುವ ಒಂದೇ ಒಂದು ಉದಾಹರಣೆ ಕೊಡಲಿ. ಬಾಯಿಮಾತಿಗೆ ಏನೇನೋ ಮಾತನಾಡಿದರೆ ಸರಿ ಇರುವುದಿಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ಪ್ರಿಯಾಂಕ್ ಅಗೌರವ ತೋರಿದ್ದಾರೆ. ಈ ರೀತಿಯ ಹೇಳಿಕೆ ಕುಟುಂಬಗಳಲ್ಲಿ ಬಿರುಕು ಮೂಡಿಸುತ್ತವೆ. ಇಂತಹ ನೀಚ ಮಾತು ಹೇಳುವುದು ಅವರಿಗೆ ಗೌರವತರಲ್ಲ. ಹೆಣ್ಣು ಮಕ್ಕಳನ್ನು ಗೌರವದಿಂದ ನೋಡಿ ಎಂದು ಗುಡುಗಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು, ಪ್ರಚಾರದ ಗೀಳಿಗಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಅವರು ಈಗಲೇ ರಾಜ್ಯದ ಮಹಿಳೆಯರ ಕ್ಷಮೆ ಕೇಳಲಿ. ಸರ್ಕಾರದ ಬಗ್ಗೆ ಮಾತಾಡಲು ಅವರ ಬಳಿ ಏನು ಉಳಿದಿಲ್ಲ. ಅದಕ್ಕಾಗಿ ಈ ರೀತಿ ಕೀಳು ಮಟ್ಟದ ಹೇಳಿಕೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಿಯೋ ಬಿಡುಗಡೆ ಮಾಡಲಿದೆ ಕಡಿಮೆ ಬೆಲೆಯ 5G ಫೋನ್ – ಬೆಲೆ ಎಷ್ಟು? ಗುಣ ವೈಶಿಷ್ಟ್ಯಗಳು ಏನು?