ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್

Public TV
1 Min Read
RAJNATH SINGH

ಇಂಫಾಲ್: ಬಂಡಾಯ ಗುಂಪಿನೊಂದಿಗೆ ಸಂವಾದ ನಡೆಸಲು ಬಿಜೆಪಿ ಸಿದ್ಧವಾಗಿದೆ ಎಂದ ಅವರು, ಸರ್ಕಾರದೊಂದಿಗೆ ಮಾತನಾಡಲು ಬಂಡಾಯ ಗುಂಪುಗಳು ಮುಂದೆ ಬರಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಮಣಿಪುರದ ಪ್ರಚಾರದ ವೇಳೆ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳನ್ನು ಕೈಗೊಳ್ಳಲು ಹಿಂಸಾಚಾರವನ್ನು ಶಾಶ್ವತವಾಗಿ ನಿಲ್ಲಿಸಬೇಕು. ಮುಖ್ಯಮಂತ್ರಿ ಬಿರೆನ್ ಸಿಂಗ್ ನಾಯಕತ್ವದಲ್ಲಿ ಮಣಿಪುರದಲ್ಲಿ ಹಿಂಸಾಚಾರವನ್ನು ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದರು.

bjp - congress

ಮಣಿಪುರ ಮಾತ್ರವಲ್ಲದೇ ದೇಶಾದ್ಯಂತ ಕಾಂಗ್ರೆಸ್ ಬಿಜೆಪಿಯ ಎದುರಾಳಿಯಲ್ಲ. ಮಣಿಪುರವು ಭಾರತದಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯವಾಗಲು ಸಾಕಷ್ಟು ಸಾಮಥ್ರ್ಯವನ್ನು ಹೊಂದಿದೆ. ಕಳೆದ 70 ವರ್ಷಗಳಲ್ಲಿ ಮಣಿಪುರ ಹಾಗೂ ಇತರೇ ಈಶಾನ್ಯ ರಾಜ್ಯದಲ್ಲಿ ಹೆಚ್ಚಾಗಿ ಕಾಂಗ್ರೆಸ್‍ನ ಆಳ್ವಿಕೆ ಇತ್ತು. ಆಗ ಕಾಂಗ್ರೆಸ್ ಅಭಿವೃದ್ಧಿ ವಿರೋಧಿ ಮತ್ತು ಈಶಾನ್ಯ ವಿರೋಧಿಯ ಮನಸ್ಥಿತಿಯನ್ನು ಹೊಂದಿದೆ ಎಂದು ನಿರೂಪಿಸಿತ್ತು. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ನಂತರ ಈಶಾನ್ಯ ಭಾಗದ ರಾಜ್ಯದ ಭವಿಷ್ಯ ಬದಲಾಗಿದೆ ಎಂದರು. ಇದನ್ನೂ ಓದಿ: ಹಿಜಬ್‌ ನಮಗೆ ಮುಖ್ಯ – ಕಲಬುರಗಿ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

NARENDRA MODI

ಪ್ರಧಾನಿ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರದಲ್ಲೇ ಮಣಿಪುರಕ್ಕೆ ರೈಲು ಸಂಪರ್ಕ ದೊರಕಿದೆ. ಮಣಿಪುರದ ಅಭಿವೃದ್ಧಿ ಸ್ಥಿತಿಯನ್ನು 15 ವರ್ಷಗಳಲ್ಲಿ ಹೊಸ ಪಥದತ್ತ ಕೊಂಡೊಯ್ಯಲು ಬಿಜೆಪಿ ಬಯಸಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರದಲ್ಲಿ ಮಣಿಪುರದ ಚಹರೆಯೇ ಬದಲಾಗಿದೆ. ಈಶಾನ್ಯ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರಧಾನಿ ಮೋದಿ ಹೊಸ ಮುನ್ನುಡಿ ಬರೆಯಲು ಸಿದ್ಧರಾಗಿದ್ದಾರೆ. ರೈಲು, ರಸ್ತೆ ಮತ್ತು ವಾಯು ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

ಮಣಿಪುರ ಚುನಾವಣೆಯ ಮೊದಲ ಹಂತದ ಮತದಾನ ಫೆ. 28ರಂದು ಮತ್ತು ಎರಡನೇ ಹಂತದ ಮತದಾನ ಮಾರ್ಚ್ 5 ರಂದು ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *