ಲಕ್ನೋ: ಉತ್ತರಪ್ರದೇಶದ ರಾಂಪುರ ಸಮೀಪ ಮೀರತ್-ಲಕ್ನೋ ರಾಜ್ಯ ರಾಣಿ ಎಕ್ಸ್ ಪ್ರೆಸ್ ಇಂದು ಹಳಿತಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಹಳಿ ತಪ್ಪಿದ ರೈಲಿನ 8 ಬೋಗಿಗಳು ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿವೆ. ಮುಂದಾಪಾಂಡೆ ಹಾಗೂ ರಾಂಪುರ ರೈಲ್ವೇ ನಿಲ್ದಾಣದ ಮಧ್ಯದಲ್ಲಿ ಈ ಅವಘಡ ಸಂಭವಿಸಿದೆ ಅಂತಾ ಉತ್ತರ ರೈಲ್ವೇ ವಕ್ತಾರ ನೀರಜ್ ಶರ್ಮಾ ತಿಳಿಸಿದ್ದಾರೆ.
ಈ ಬಗ್ಗೆ ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಪ್ರಭು, ಘಟನೆಗೆ ಕಾರಣವೇನೆಂದು ತನಿಖೆ ನಡೆಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ರಕ್ಷಣಾ ಕಾರ್ಯಚರಣೆಗಾಗಿ ಘಟನಾ ಸ್ಥಳಕ್ಕೆ ತೆರಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಲಾಗಿದೆ ಅಂತಾ ಟ್ವೀಟ್ ಮಾಡಿದ್ದಾರೆ.
ಇತ್ತ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆಯಿಂದ ಗಂಭೀರವಗಿ ಗಾಯಗೊಂಡ ಪ್ರತಿಯೊಬ್ಬರಿಗೂ 50,000 ಹಾಗೂ ಸಣ್ಣ-ಪುಟ್ಟ ಗಾಯಗಳಾಗಿರುವವರಿಗೆ 25,000 ರೂ. ಧನಸಹಾಯ ಘೋಷಿಸಿದ್ದಾರೆ. ಇನ್ನು ರೈಲ್ವೇ ಇಲಾಖೆಯಿಂದ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ.
ಘಟನೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.