ಸಿಎಂ ರಿಲೀಫ್ ಫಂಡ್‍ಗೆ 2 ಕೋಟಿ ರೂ. ದೇಣಿಗೆ ನೀಡಿದ ಕೋರೆ

Public TV
1 Min Read
BSY Kore A

ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್‍ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಭಾಕರ್ ಕೋರೆ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ 2 ಕೋಟಿ ರೂ. ಚೆಕ್ ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ, ಶಾಸಕ ಮಹಾಂತೇಶ ಕವಟಗಿಮಠ ಇದ್ದರು. ಇದನ್ನೂ ಓದಿ:  ಕೊರೊನಾಗೆ ಆಂಟಿಬಾಡಿ ಸಿದ್ಧ – ಭಾರೀ ಪ್ರಮಾಣದಲ್ಲಿ ಉತ್ಪಾದನೆಗೆ ಮುಂದಾದ ಇಸ್ರೇಲ್

ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನ 20 ಜನರಿಗೆ ಸೋಂಕು ತಗುಲಿದೆ. ಈವರೆಗೂ 693 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 29 ಮಂದಿ ಮೃತಪಟ್ಟರೆ, 354 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 309 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗೋವಾದಲ್ಲಿ ಸಿಲುಕಿದ್ದ ಹತ್ತು ಸಾವಿರ ಮಂದಿ ಕರ್ನಾಟಕಕ್ಕೆ ವಾಪಸ್

Share This Article
Leave a Comment

Leave a Reply

Your email address will not be published. Required fields are marked *