Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ

Cinema

‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ

Public TV
Last updated: August 17, 2024 5:13 pm
Public TV
Share
3 Min Read
Rakkasapuradol 1
SHARE

ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ (Raj B Shetty) ನಾಯಕರಾಗಿ ನಟಿಸುತ್ತಿರುವ ‘ರಕ್ಕಸಪುರದೋಳ್’ (Rakkasapuradol) ಚಿತ್ರದ ಮುಹೂರ್ತ ಸಮಾರಂಭ ನೆಟಕಲ್ಲಪ್ಪ ಸರ್ಕಲ್ ನಲ್ಲಿರುವ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿ, ಶೀರ್ಷಿಕೆ ಅನಾವರಣ ಮಾಡಿದರು. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Rakkasapuradol 3

ಸಾಹಸ ನಿರ್ದೇಶಕರಾಗಿ ಜನಪ್ರಿರಾಗಿರುವ ರವಿವರ್ಮ ಅವರು ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಿ ವಿಲನ್, ಏಕ್ ಲವ್ ಯಾ ,‌ ಕೆಡಿ ಮುಂತಾದ ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದ ರವಿ ಸಾರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಜನಪ್ರಿಯ ನಟ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. ರಕ್ಕಸಪುರದೋಳ್ ಚಿತ್ರ ಚಂದನವನದಲ್ಲಿ ಭರ್ಜರಿ ಯಶಸ್ಸು ಕಾಣಲಿ ಎಂದು ರಕ್ಷಿತ – ಪ್ರೇಮ್ ದಂಪತಿ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ರಕ್ಕಸಪುರದೋಳ್ ಚಿತ್ರದ ಕಥೆ ತುಂಬಾ ಚೆನ್ನಾಗಿದೆ. ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಬೇಕಾಗಿರುವಂತಹ ಕಥೆಯನ್ನು ನಿರ್ದೇಶಕ ರವಿ ಮಾಡಿಕೊಂಡಿದ್ದಾರೆ. ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಿಂದಿನ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದರು ರಾಜ್ ಬಿ ಶೆಟ್ಟಿ.

Rakkasapuradol 4

ಕಳೆದ ಹತ್ತು ವರ್ಷಗಳಿಂದ ಪ್ರೇಮ್ ಸರ್ ಬಳಿ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ. ಪ್ರೇಮ್ ಮತ್ತು ರಕ್ಷಿತ ಅವರಿಗೆ ಧನ್ಯವಾದ. “ರಕ್ಕಸ” ಎಂದರೆ ರಾಕ್ಷಸ. “ಪುರ” ಎಂದರೆ ಊರು. ರಾಕ್ಷಸರೆ ಇರುವ ಊರು ಎಂಬುದು ಈ ಶೀರ್ಷಿಕೆಯ ಅರ್ಥ. ಮನುಷ್ಯನಲ್ಲಿ ಎರಡು ಗುಣಗಳಿರುತ್ತದೆ. ಒಂದು ಒಳ್ಳೆಯದು. ಮತ್ತೊಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು “ರಕ್ಕಸ” ಎನ್ನಬಹುದು. ನಿರ್ಮಾಪಕ ರವಿವರ್ಮ ಹಾಗೂ ನಾಯಕ ರಾಜ್ ಬಿ ಶೆಟ್ಟಿ ಅವರು ಕಥೆ ಮೆಚ್ಚಿಕೊಂಡದ್ದು ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದ‌ರು‌ ನಿರ್ದೇಶಕ ರವಿ ಸಾರಂಗ.

Rakkasapuradol 2

ರವಿ ಸಾರಂಗ ಅವರು ನನಗೆ ಎರಡು ವರ್ಷಗಳ ಪರಿಚಯ ಎಂದು‌ ಮಾತು ಆರಂಭಿಸಿದ ನಿರ್ಮಾಪಕ ಕೆ.ರವಿವರ್ಮ, ಸಾಹಸ ನಿರ್ದೇಶಕನಾಗಿ ನನಗೆ ಎಲ್ಲರೂ ಪ್ರೋತ್ಸಾಹ ನೀಡಿದ್ದೀರಿ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ರವಿ ಸಾರಂಗ ಒಳ್ಳೆಯ ಕಥೆ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಆ ಕಥೆಯನ್ನು ಒಪ್ಪಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ‌ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ,  ಮೋಹನ್ ಬಿ ಕೆರೆ ಕಲಾ ನಿರ್ದೇಶನವಿರುವ ಹಾಗೂ ನರಸಿಂಹ ಜಾಲಹಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ “ರಕ್ಕಸಪುರದೋಳ್” ಚಿತ್ರಕ್ಕೆ ಕ್ರಾಂತಿ ಕುಮಾರ್ ಸಂಭಾಷಣೆ ಬರೆಯತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ರಕ್ಷಿತ – ಪ್ರೇಮ್ ಅವರು ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಒಂದೊಳ್ಳೆ ಚಿತ್ರ ನಿರ್ಮಾಣ ಮಾಡುತ್ತಿರುವ ಖುಷಿಯಿದೆ ಎಂದರು.

ರವಿವರ್ಮ ಅವರು ಸಾಹಸ ನಿರ್ದೇಶಕರಾಗಿ ನನ್ನ ನಿರ್ದೇಶನದ ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ.  ರಾಜ್ ಬಿ ಶೆಟ್ಟಿ ಅವರ ನಟನೆಯನ್ನು ಹತ್ತಿರದಿಂದ ನೋಡಿದ್ದೇನೆ. ಅವರೊಬ್ಬ ಉತ್ತಮ ಕಲಾವಿದ. ಇನ್ನು ರವಿ ಸಾರಂಗ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಇದು ಕನ್ನಡದ “ಆರ್ ಆರ್ ಆರ್” ಚಿತ್ರ. ತ್ರಿಬಲ್ ಆರ್ ತರಹ‌ ಈ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾರೈಸಿದರು. ನಾಯಕಿ ಸ್ವಾತಿಷ್ಟ ಕೃಷ್ಣ,  ನಟ ಬಿ.ಸುರೇಶ್, ನಟಿ ಅರ್ಚನಾ ಕೊಟ್ಟಿಗೆ, ಚಿತ್ರದಲ್ಲಿ ಅಭಿನಯಿಸುತ್ತಿರುವ ಗೌರವ್ ಶೆಟ್ಟಿ, ಸಿದ್ದಣ್ಣ, ಸುಮ, ಅನಿರುದ್ದ್ ಭಟ್, ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಭಾಷಣೆಕಾರ ಕ್ರಾಂತಿ ಕುಮಾರ್ ಹಾಗೂ ನರಸಿಂಹ ಜಾಲಹಳ್ಳಿ ಮುಂತಾದವರು “ರಕ್ಕಸಪುರದೋಳ್” ಚಿತ್ರದ ಕುರಿತು ಮಾತನಾಡಿದರು.

TAGGED:Raj B ShettyRakkasapuradolRavi varmaರಕ್ಕಸಪುರದೋಳ್ರವಿವರ್ಮಾರಾಜ್ ಬಿ.ಶೆಟ್ಟಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
48 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
2 hours ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
2 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
3 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?