Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

Karnataka

ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

Public TV
Last updated: August 15, 2019 9:48 am
Public TV
Share
3 Min Read
RA 1
SHARE

ಶ್ರಾವಣ ಮಾಸ ಬಂತೆಂದರೆ ಸಾಲು ಸಾಲಾಗಿ ಹಬ್ಬಗಳು ಬರುತ್ತವೆ. ಮೊದಲಿಗೆ ವರಮಹಾಲಕ್ಷ್ಮಿ ಹಬ್ಬ ಬರುತ್ತದೆ. ನಂತರ ಬರುವುದೇ ಸಂಬಂಧವನ್ನು ಬೆಸೆಯುವ ಬಾಂಧವ್ಯದ ಹಬ್ಬ ರಾಖಿ ಹಬ್ಬವಾಗಿದೆ. ಸೋದರ ಮತ್ತು ಸೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ.

ಹೌದು…ಅಣ್ಣ-ತಂಗಿಯ ಬಂಧನಕ್ಕೆ ಬೆಲೆ ಕಟ್ಟಲಾಗದು. ಮನೆಯಲ್ಲಿ ಅಣ್ಣ ಅಥವಾ ತಮ್ಮನಿಗೆ ತಂಗಿ ಅಥವಾ ಅಕ್ಕ ಯಾವಾಗಲೂ ಬೆಂಬಲವಾಗಿ ನಿಲ್ಲುವರು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸುತ್ತಾರೆ. ಅಣ್ಣನ ಕೈಗೆ ತಂಗಿ ರಾಖಿ ಕಟ್ಟುವ ಮೂಲಕ ತಂಗಿ ಅಣ್ಣ ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುತ್ತಾನೆ ಎಂಬ ನಂಬಿಕೆ ಇಟ್ಟುಕೊಂಡಿರುತ್ತಾಳೆ.

RA 4

ರಕ್ಷಾ ಬಂಧನ ಹಬ್ಬವನ್ನು ರಾಷ್ಟ್ರದೆಲ್ಲೆಡೆಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುತ್ತಾಳೆ. ಅದನ್ನೇ ರಾಖಿ ಎಂದು ಕರೆಯುತ್ತಾರೆ. ಈ ದಾರವನ್ನು ಕಟ್ಟುವ ವೇಳೆ ತಂಗಿ ತನ್ನ ಅಣ್ಣನಿಗೆ ದೀರ್ಘಾಯುಷ್ಯ, ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾಳೆ.

ಇದಕ್ಕೆ ಪ್ರತಿಯಾಗಿ ಸಹೋದರನು ಕೂಡ ತನ್ನ ಸಹೋದರಿಯನ್ನು ಯಾವುದೇ ಕಷ್ಟದ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆಯನ್ನು ನೀಡುತ್ತಾನೆ. ಅಷ್ಟೇ ಅಲ್ಲದೇ ತನ್ನ ಪ್ರೀತಿಯ ತಂಗಿಗೆ ಇಷ್ಟವಾಗಿರುವ ಉಡುಗೊರೆ ನೀಡುತ್ತಾನೆ. ರಕ್ಷಾಬಂಧನ ಎಂಬುದರಲ್ಲಿ ಎರಡು ಪದಗಳಿವೆ, ಒಂದು ರಕ್ಷಾ ಮತ್ತು ಬಂಧನ. ರಕ್ಷಾ ಎಂದರೆ ರಕ್ಷಣೆ ಮತ್ತು ಬಂಧನ ಎಂದರೆ ಬಂಧವೆಂದರ್ಥ. ಅಣ್ಣ-ತಂಗಿ ಇಬ್ಬರು ಪರಸ್ಪರ ಹಂಚಿಕೊಳ್ಳುವ ಪ್ರೀತಿ ಯಾವತ್ತೂ ಕೊನೆಗೊಳ್ಳದು.

RA 3

ರಾಖಿ ಕಟ್ಟುವುದು: ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು, ನೆತ್ತಿಯ ಮೇಲೆ ಅಕ್ಕಿ ಅಥವಾ ಅಕ್ಷತೆಯನ್ನು ಹಾಕಬೇಕು. ಬಳಿಕ ಅಣ್ಣಿನಿಗೆ ಆರತಿ ಬೆಳಗಬೇಕು. ಕೊನೆಯಲ್ಲಿ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು. ತಂಗಿ ರಾಖಿ ಕಟ್ಟಿದ ನಂತರ ಅಣ್ಣ ಪ್ರೀತಿಯ ಸಹೋದರಿಗೆ ಉಡುಗೊರೆ ಕೊಡುತ್ತಾನೆ.

ರಕ್ಷಾ ಬಂಧನದ ಹಿನ್ನೆಲೆ:
ಪ್ರತಿಯೊಂದು ಹಬ್ಬಕ್ಕೂ ಪುರಾಣದಲ್ಲಿ ತನ್ನದೇ ಆದ ಹಿನ್ನೆಲೆ ಇತಿಹಾಸವನ್ನು ಹೊಂದಿರುತ್ತವೆ. ಅದೇ ರೀತಿ ರಕ್ಷಾ ಬಂಧನಕ್ಕೂ ಕೂಡ ಅನೇಕ ಇತಿಹಾಸಗಳಿವೆ. ಭಗವಾನ್ ಕೃಷ್ಣನು ಶಿಶುಪಾಲನನ್ನು ಕೊಲ್ಲಲು ತನ್ನ ಸುದರ್ಶನ ಚಕ್ರವನ್ನು ಬಳಸುತ್ತಾನೆ. ಈ ವೇಳೆ ಆತನ ಕೈ ಬೆರಳಿಗೆ ಗಾಯವಾಗುತ್ತದೆ. ಎಲ್ಲರೂ ಕೈಬೆರಳಿಗೆ ಕಟ್ಟಲು ಬಟ್ಟೆಯನ್ನು ತರಲು ಹೋಗುತ್ತಾರೆ. ಆದರೆ ದ್ರೌಪದಿ ತನ್ನ ಸೀರೆಯ ಒಂದು ತುಂಡನ್ನು ಕತ್ತರಿಸಿ ರಕ್ತ ಸುರಿಯುತ್ತಿರುವ ಕೃಷ್ಣನ ಕೈಗೆ ಕಟ್ಟುತ್ತಾಳೆ. ಇದಕ್ಕೆ ಪ್ರತಿಫಲವನ್ನು ನೀಡಿದ ಶ್ರೀಕೃಷ್ಣ ಹಸ್ತಿನಾಪುರದ ಅರಮನೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ಎಳೆದಾಗ ಅದು ಎಳೆದಷ್ಟು ಉದ್ದವಾಗುವಂತೆ ಮಾಡಿ ದ್ರೌಪದಿಯ ಮಾನ ಕಾಪಾಡಿದನು.

RA 5

ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದ್ದಳು. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಭರವಸೆ ನೀಡುತ್ತಾನೆ.

ಇನ್ನೊಂದು ಕಥೆಯೆಂದರೆ, ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮೀ ದೇವಿಗೆ ಇದು ಇಷ್ಟವಾಗುವುದಿಲ್ಲ. ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾಳೆ. ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮೀ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ಹೀಗೆ ರಕ್ಷಾ ಬಂಧನಕ್ಕೆ ತನ್ನದೆ ಆದ ಹಿನ್ನೆಲೆಯನ್ನು ಹೊಂದಿದೆ.

RA 2

ಮಹತ್ವ:
ರಕ್ಷಾಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಅನುಬಂಧವನ್ನು ಹೆಚ್ಚಿಸುತ್ತದೆ. ಈ ಹಬ್ಬದ ಮೂಲಕ ದೂರದಲ್ಲಿರುವ ಕುಟುಂಬ ಸದಸ್ಯರನ್ನು ಹತ್ತಿರಕ್ಕೆ ತರುತ್ತದೆ. ಬಲಗೈಗೆ ಕಟ್ಟಿಕೊಳ್ಳುವ ಈ ಪವಿತ್ರ ದಾರವಾದ ರಾಖಿಯು ಪ್ರತಿಯೊಬ್ಬರಿಗೂ ಪ್ರಪಂಚದ ಐಹಿಕ ಸುಖ ಭೋಗಗಳಿಗೆ ಮರುಳಾಗದಿರುವಂತೆ ನೆನಪಿಸುತ್ತದೆ. ರಾಖಿಯನ್ನು ಕಟ್ಟುವ ಸೋದರಿಯು ತನ್ನ ಸೋದರನಲ್ಲಿ ತನ್ನ ಧಾರ್ಮಿಕ ನಂಬಿಕೆ ಮತ್ತು ಹಂಬಲಗಳನ್ನು ಕಾಣುತ್ತಾಳೆ. ಸದಾ ಆತನ ಶ್ರೇಯಸ್ಸನ್ನು ಕೋರಿ ಕಟ್ಟುವ ಈ ರಾಖಿಯು ಒಂದು ನಿಷ್ಕಲ್ಮಶವಾದ ಪ್ರೀತಿಯ ಸಂಕೇತವಾಗಿದೆ. ಈ ಬಂಧನ ಆಕೆಯ ಭರವಸೆ, ನಂಬಿಕೆ ಹಾಗೂ ಶಕ್ತಿಯನ್ನು ಸೋದರನಿಗೆ ನೆನಪು ಮಾಡಿಕೊಡುತ್ತದೆ.

TAGGED:brotherPublic TVRakhiraksha bandhansisterಪಬ್ಲಿಕ್ ಟಿವಿರಕ್ಷಾ ಬಂಧನರಾಖಿಸಹೋದರಸಹೋದರಿ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
17 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
24 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
2 hours ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?