Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

Karnataka

ಬಾಂಧವ್ಯದ ಹಬ್ಬವೇ ರಕ್ಷಾ ಬಂಧನ – ವಿಶೇಷತೆ ಏನು?

Public TV
Last updated: August 15, 2019 9:48 am
Public TV
Share
3 Min Read
RA 1
SHARE

ಶ್ರಾವಣ ಮಾಸ ಬಂತೆಂದರೆ ಸಾಲು ಸಾಲಾಗಿ ಹಬ್ಬಗಳು ಬರುತ್ತವೆ. ಮೊದಲಿಗೆ ವರಮಹಾಲಕ್ಷ್ಮಿ ಹಬ್ಬ ಬರುತ್ತದೆ. ನಂತರ ಬರುವುದೇ ಸಂಬಂಧವನ್ನು ಬೆಸೆಯುವ ಬಾಂಧವ್ಯದ ಹಬ್ಬ ರಾಖಿ ಹಬ್ಬವಾಗಿದೆ. ಸೋದರ ಮತ್ತು ಸೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ.

ಹೌದು…ಅಣ್ಣ-ತಂಗಿಯ ಬಂಧನಕ್ಕೆ ಬೆಲೆ ಕಟ್ಟಲಾಗದು. ಮನೆಯಲ್ಲಿ ಅಣ್ಣ ಅಥವಾ ತಮ್ಮನಿಗೆ ತಂಗಿ ಅಥವಾ ಅಕ್ಕ ಯಾವಾಗಲೂ ಬೆಂಬಲವಾಗಿ ನಿಲ್ಲುವರು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸುತ್ತಾರೆ. ಅಣ್ಣನ ಕೈಗೆ ತಂಗಿ ರಾಖಿ ಕಟ್ಟುವ ಮೂಲಕ ತಂಗಿ ಅಣ್ಣ ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುತ್ತಾನೆ ಎಂಬ ನಂಬಿಕೆ ಇಟ್ಟುಕೊಂಡಿರುತ್ತಾಳೆ.

RA 4

ರಕ್ಷಾ ಬಂಧನ ಹಬ್ಬವನ್ನು ರಾಷ್ಟ್ರದೆಲ್ಲೆಡೆಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ. ಈ ದಿನ ಸೋದರಿಯು ತನ್ನ ಸೋದರನ ಕೈಗೆ ರಕ್ಷೆಯ ದಾರವನ್ನು ಕಟ್ಟುತ್ತಾಳೆ. ಅದನ್ನೇ ರಾಖಿ ಎಂದು ಕರೆಯುತ್ತಾರೆ. ಈ ದಾರವನ್ನು ಕಟ್ಟುವ ವೇಳೆ ತಂಗಿ ತನ್ನ ಅಣ್ಣನಿಗೆ ದೀರ್ಘಾಯುಷ್ಯ, ಆರೋಗ್ಯವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾಳೆ.

ಇದಕ್ಕೆ ಪ್ರತಿಯಾಗಿ ಸಹೋದರನು ಕೂಡ ತನ್ನ ಸಹೋದರಿಯನ್ನು ಯಾವುದೇ ಕಷ್ಟದ ಪರಿಸ್ಥಿತಿಯಲ್ಲೂ ರಕ್ಷಿಸುವ ಭರವಸೆಯನ್ನು ನೀಡುತ್ತಾನೆ. ಅಷ್ಟೇ ಅಲ್ಲದೇ ತನ್ನ ಪ್ರೀತಿಯ ತಂಗಿಗೆ ಇಷ್ಟವಾಗಿರುವ ಉಡುಗೊರೆ ನೀಡುತ್ತಾನೆ. ರಕ್ಷಾಬಂಧನ ಎಂಬುದರಲ್ಲಿ ಎರಡು ಪದಗಳಿವೆ, ಒಂದು ರಕ್ಷಾ ಮತ್ತು ಬಂಧನ. ರಕ್ಷಾ ಎಂದರೆ ರಕ್ಷಣೆ ಮತ್ತು ಬಂಧನ ಎಂದರೆ ಬಂಧವೆಂದರ್ಥ. ಅಣ್ಣ-ತಂಗಿ ಇಬ್ಬರು ಪರಸ್ಪರ ಹಂಚಿಕೊಳ್ಳುವ ಪ್ರೀತಿ ಯಾವತ್ತೂ ಕೊನೆಗೊಳ್ಳದು.

RA 3

ರಾಖಿ ಕಟ್ಟುವುದು: ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು, ನೆತ್ತಿಯ ಮೇಲೆ ಅಕ್ಕಿ ಅಥವಾ ಅಕ್ಷತೆಯನ್ನು ಹಾಕಬೇಕು. ಬಳಿಕ ಅಣ್ಣಿನಿಗೆ ಆರತಿ ಬೆಳಗಬೇಕು. ಕೊನೆಯಲ್ಲಿ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು. ತಂಗಿ ರಾಖಿ ಕಟ್ಟಿದ ನಂತರ ಅಣ್ಣ ಪ್ರೀತಿಯ ಸಹೋದರಿಗೆ ಉಡುಗೊರೆ ಕೊಡುತ್ತಾನೆ.

ರಕ್ಷಾ ಬಂಧನದ ಹಿನ್ನೆಲೆ:
ಪ್ರತಿಯೊಂದು ಹಬ್ಬಕ್ಕೂ ಪುರಾಣದಲ್ಲಿ ತನ್ನದೇ ಆದ ಹಿನ್ನೆಲೆ ಇತಿಹಾಸವನ್ನು ಹೊಂದಿರುತ್ತವೆ. ಅದೇ ರೀತಿ ರಕ್ಷಾ ಬಂಧನಕ್ಕೂ ಕೂಡ ಅನೇಕ ಇತಿಹಾಸಗಳಿವೆ. ಭಗವಾನ್ ಕೃಷ್ಣನು ಶಿಶುಪಾಲನನ್ನು ಕೊಲ್ಲಲು ತನ್ನ ಸುದರ್ಶನ ಚಕ್ರವನ್ನು ಬಳಸುತ್ತಾನೆ. ಈ ವೇಳೆ ಆತನ ಕೈ ಬೆರಳಿಗೆ ಗಾಯವಾಗುತ್ತದೆ. ಎಲ್ಲರೂ ಕೈಬೆರಳಿಗೆ ಕಟ್ಟಲು ಬಟ್ಟೆಯನ್ನು ತರಲು ಹೋಗುತ್ತಾರೆ. ಆದರೆ ದ್ರೌಪದಿ ತನ್ನ ಸೀರೆಯ ಒಂದು ತುಂಡನ್ನು ಕತ್ತರಿಸಿ ರಕ್ತ ಸುರಿಯುತ್ತಿರುವ ಕೃಷ್ಣನ ಕೈಗೆ ಕಟ್ಟುತ್ತಾಳೆ. ಇದಕ್ಕೆ ಪ್ರತಿಫಲವನ್ನು ನೀಡಿದ ಶ್ರೀಕೃಷ್ಣ ಹಸ್ತಿನಾಪುರದ ಅರಮನೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ಎಳೆದಾಗ ಅದು ಎಳೆದಷ್ಟು ಉದ್ದವಾಗುವಂತೆ ಮಾಡಿ ದ್ರೌಪದಿಯ ಮಾನ ಕಾಪಾಡಿದನು.

RA 5

ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದ್ದಳು. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಭರವಸೆ ನೀಡುತ್ತಾನೆ.

ಇನ್ನೊಂದು ಕಥೆಯೆಂದರೆ, ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮೀ ದೇವಿಗೆ ಇದು ಇಷ್ಟವಾಗುವುದಿಲ್ಲ. ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾಳೆ. ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮೀ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ಹೀಗೆ ರಕ್ಷಾ ಬಂಧನಕ್ಕೆ ತನ್ನದೆ ಆದ ಹಿನ್ನೆಲೆಯನ್ನು ಹೊಂದಿದೆ.

RA 2

ಮಹತ್ವ:
ರಕ್ಷಾಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಅನುಬಂಧವನ್ನು ಹೆಚ್ಚಿಸುತ್ತದೆ. ಈ ಹಬ್ಬದ ಮೂಲಕ ದೂರದಲ್ಲಿರುವ ಕುಟುಂಬ ಸದಸ್ಯರನ್ನು ಹತ್ತಿರಕ್ಕೆ ತರುತ್ತದೆ. ಬಲಗೈಗೆ ಕಟ್ಟಿಕೊಳ್ಳುವ ಈ ಪವಿತ್ರ ದಾರವಾದ ರಾಖಿಯು ಪ್ರತಿಯೊಬ್ಬರಿಗೂ ಪ್ರಪಂಚದ ಐಹಿಕ ಸುಖ ಭೋಗಗಳಿಗೆ ಮರುಳಾಗದಿರುವಂತೆ ನೆನಪಿಸುತ್ತದೆ. ರಾಖಿಯನ್ನು ಕಟ್ಟುವ ಸೋದರಿಯು ತನ್ನ ಸೋದರನಲ್ಲಿ ತನ್ನ ಧಾರ್ಮಿಕ ನಂಬಿಕೆ ಮತ್ತು ಹಂಬಲಗಳನ್ನು ಕಾಣುತ್ತಾಳೆ. ಸದಾ ಆತನ ಶ್ರೇಯಸ್ಸನ್ನು ಕೋರಿ ಕಟ್ಟುವ ಈ ರಾಖಿಯು ಒಂದು ನಿಷ್ಕಲ್ಮಶವಾದ ಪ್ರೀತಿಯ ಸಂಕೇತವಾಗಿದೆ. ಈ ಬಂಧನ ಆಕೆಯ ಭರವಸೆ, ನಂಬಿಕೆ ಹಾಗೂ ಶಕ್ತಿಯನ್ನು ಸೋದರನಿಗೆ ನೆನಪು ಮಾಡಿಕೊಡುತ್ತದೆ.

TAGGED:brotherPublic TVRakhiraksha bandhansisterಪಬ್ಲಿಕ್ ಟಿವಿರಕ್ಷಾ ಬಂಧನರಾಖಿಸಹೋದರಸಹೋದರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
48 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
2 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
3 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
3 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?