ಬಬ್ಬುಸ್ವಾಮಿ ದೈವಾರಾಧನೆಯಲ್ಲಿ ರಕ್ಷಿತ್ ಶೆಟ್ಟಿ ಭಾಗಿ

Public TV
1 Min Read
Rakshit Shetty

ನ್ನಡದ ಹೆಸರಾಂತ ನಟ ರಕ್ಷಿತ್ ಶೆಟ್ಟಿ (Rakshit Shetty) ಸಾಲು ಸಾಲು ಚಿತ್ರಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೂ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ರಕ್ಷಿತ್ ನೆಲೆಸಿದ್ರೂ ಹುಟ್ಟೂರಿನ ನಂಟನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ.

rakshit shetty 3

ಶನಿವಾರ ಮತ್ತು ಭಾನುವಾರ ಬೆಂಗಳೂರಿನಿಂದ ಬಿಡುವು ತೆಗೆದುಕೊಂಡು ಅವರು ತಮ್ಮ ಹುಟ್ಟೂರಿಗೆ ಹೋಗಿದ್ದರು. ದೈವ ದೇವರು ಊರಿನ ಉತ್ಸವ ಹಬ್ಬದಲ್ಲಿ ಅವರು ಭಾಗಿಯಾಗಿದ್ದರು. ದೈವ ದೇವರು ಅಂದ್ರೆ ಮಿಸ್ ಮಾಡಿಕೊಳ್ಳೋದೇ, ಅಷ್ಟಮಿ ಬಂದ್ರೆ ತಪ್ಪದೆ ಅವರು ಊರಲ್ಲಿ ಹಾಜರಾಗ್ತಾರೆ.

 

ಈ ನಡುವೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ (Babbuswamy) ದೈವದ (Daiva) ನೇಮೋತ್ಸವದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಭಾಗಿಯಾಗಿದ್ದಾರೆ. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ  ಭಾಗವಹಿಸಿ, ಕೆಲಕಾಲ ದೈವಸ್ಥಾನದ ಕಾರ್ಯಕ್ರಮದಲ್ಲಿ ಪ್ರಸಾದ ಸ್ವೀಕರಿಸಿದರು.

Share This Article