ಕನ್ನಡದ ಹೆಸರಾಂತ ನಟ ರಕ್ಷಿತ್ ಶೆಟ್ಟಿ (Rakshit Shetty) ಸಾಲು ಸಾಲು ಚಿತ್ರಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೂ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಲ್ಲಿ ರಕ್ಷಿತ್ ನೆಲೆಸಿದ್ರೂ ಹುಟ್ಟೂರಿನ ನಂಟನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ.
ಶನಿವಾರ ಮತ್ತು ಭಾನುವಾರ ಬೆಂಗಳೂರಿನಿಂದ ಬಿಡುವು ತೆಗೆದುಕೊಂಡು ಅವರು ತಮ್ಮ ಹುಟ್ಟೂರಿಗೆ ಹೋಗಿದ್ದರು. ದೈವ ದೇವರು ಊರಿನ ಉತ್ಸವ ಹಬ್ಬದಲ್ಲಿ ಅವರು ಭಾಗಿಯಾಗಿದ್ದರು. ದೈವ ದೇವರು ಅಂದ್ರೆ ಮಿಸ್ ಮಾಡಿಕೊಳ್ಳೋದೇ, ಅಷ್ಟಮಿ ಬಂದ್ರೆ ತಪ್ಪದೆ ಅವರು ಊರಲ್ಲಿ ಹಾಜರಾಗ್ತಾರೆ.
ಈ ನಡುವೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ (Babbuswamy) ದೈವದ (Daiva) ನೇಮೋತ್ಸವದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಭಾಗಿಯಾಗಿದ್ದಾರೆ. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ ನೇಮೋತ್ಸವದಲ್ಲಿ ಭಾಗವಹಿಸಿ, ಕೆಲಕಾಲ ದೈವಸ್ಥಾನದ ಕಾರ್ಯಕ್ರಮದಲ್ಲಿ ಪ್ರಸಾದ ಸ್ವೀಕರಿಸಿದರು.