ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಜ.22 ರ ವರೆಗೆ ಸರ್ಕಾರಿ ಬಸ್ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಲು ಸೂಚಿಸಲಾಗಿದೆ.
ಉತ್ತರ ಪ್ರದೇಶ (Uttar Pradesh) ಸಾರಿಗೆ ಇಲಾಖೆಯು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಯುಪಿಎಸ್ಆರ್ಟಿಸಿ) ಬಸ್ಗಳಲ್ಲಿ ಜನವರಿ 22 ರವರೆಗೆ ರಾಮ ಭಜನೆಗಳನ್ನು ಪ್ರಸಾರ ಮಾಡಲು ಸೂಚನೆ ನೀಡಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು, ಅಯೋಧ್ಯೆಯಲ್ಲಿನ ಮಹಾಮಸ್ತಕಾಭಿಷೇಕ ಸಮಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಜನವರಿ 14 ರಿಂದ ಅಯೋಧ್ಯೆಯ ದೇವಾಲಯಗಳಲ್ಲಿ ಭಜನೆ, ರಾಮಾಯಣ ಮತ್ತು ರಾಮಚರಿತಮಾನಗಳ ಪಠಣ ಮತ್ತು ಸುಂದರಕಾಂಡದಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ದೇಶನ ನೀಡಿದ್ದಾರೆ.
ಜನವರಿ 22 ಕ್ಕಾಗಿ ಸಾರಿಗೆ ಇಲಾಖೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯ ಪ್ರಕಾರ, ಎಲ್ಲಾ ಪ್ರಯಾಣಿಕ ವಾಹನಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಇರಬೇಕು. ಪ್ರಯಾಣಿಕರಲ್ಲಿ ಭಕ್ತಿ ಭಾವ ಮೂಡಿಸಲು ಬಸ್ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಬೇಕು. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ
ಬಸ್ ಚಾಲಕರಿಂದ ಸುರಕ್ಷಿತ ಚಾಲನೆ, ಸಂಚಾರ ನಿಯಮಗಳ ಅನುಸರಣೆ, ಪ್ರಯಾಣಿಕರೊಂದಿಗೆ ಸರಿಯಾದ ನಡವಳಿಕೆ, ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸುವುದು, ಶುಚಿತ್ವ ಕಾಪಾಡುವುದು, ನಿಗದಿತ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸದೇ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಲಕ್ನೋ ಮತ್ತು ಅಯೋಧ್ಯೆ, ಗೋರಖ್ಪುರ ಮತ್ತು ಅಯೋಧ್ಯೆ, ಸುಲ್ತಾನ್ಪುರ ಮತ್ತು ಅಯೋಧ್ಯೆ ನಡುವೆ ಪ್ರಯಾಣಿಸುವ ಪ್ರವಾಸಿಗರಿಗೆ ಸಹಾಯ ಮಾಡಲು ಸಾರಿಗೆ ಇಲಾಖೆಯು ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. ಇದನ್ನೂ ಓದಿ: ರಾಮ ಮಾಂಸಹಾರಿಯಲ್ಲ, ವನವಾಸದಲ್ಲಿ ಹಣ್ಣುಗಳನ್ನು ಸ್ವೀಕರಿಸುತ್ತಿದ್ದ: ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು