Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

Ayodhya Ram Mandir

ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

Public TV
Last updated: January 8, 2024 4:54 pm
Public TV
Share
3 Min Read
AYODHYA MANTRAKSHATE
SHARE

ಅಯೋಧ್ಯೆ: ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ಕೆಲವೇ ಕೆಲವು ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಯೋಧ್ಯೆಯಿಂದ ಮಂತ್ರಾಕ್ಷತೆ ಪ್ರತಿ ಊರಿಗೂ ತಲುಪುತ್ತಿದೆ. ಈ ಮಂತ್ರಾಕ್ಷತೆಯು ಪ್ರತೀ ಮನೆಗೂ ತಲುಪಿಸುವ ಜವಾಬ್ದಾರಿಯನ್ನು ಸ್ವಯಂ ಸೇವಕರು ವಹಿಸಿಕೊಂಡಿದ್ದಾರೆ. ಅಂತೆಯೇ ಹಲವೆಡೆ ಮಂತ್ರಾಕ್ಷತೆಯನ್ನು (Ayodhya Mantrakashate) ತಲುಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಹಾಗಿದ್ರೆ ಮಂತ್ರಾಕ್ಷತೆ ಅಂದ್ರೆ ಏನು? ಅದರ ಮಹತ್ವ ಏನು? ಮಂತ್ರಾಕ್ಷತೆ ಸ್ವೀಕರಿಸಿದ ಬಳಿಕ ಏನು ಮಾಡಬೇಕು ಎಂಬುದರ ಬಗ್ಗೆ ಡೀಟೈಲ್ಸ್ ಇಲ್ಲಿದೆ.

Ayodhya Ram Templ

ರಾಮ ಮಂತ್ರಾಕ್ಷತೆ ಅಂದ್ರೆ ಏನು?: ಹಿಂದೂ ಧರ್ಮದಲ್ಲಿ ಅಕ್ಕಿ ಅಥವಾ ಅಕ್ಷತೆಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ನಾವು ಯಾವುದೇ ದೇವರ ಸನ್ನಿಧಾನಕ್ಕೆ ಭೇಟಿ ನೀಡಿದರೂ ಅಲ್ಲಿ ಮಂತ್ರಾಕ್ಷತೆಯನ್ನು ಪ್ರಸಾದದ ರೂಪದಲ್ಲಿ ಹಾಗೂ ದೇವರ ಆಶೀರ್ವಾದದ ರೂಪದಲ್ಲಿ ನೀಡಲಾಗುತ್ತದೆ. ಎಲ್ಲಾ ಶುಭಕಾರ್ಯಗಳಿಗೂ ಅಕ್ಷತೆಯನ್ನು ಬಳಕೆ ಮಾಡುತ್ತಾರೆ. ಈ ಸಂದರ್ಭದಲ್ಲಿ ಬಳಸುವ ಅಕ್ಷತೆಯಲ್ಲಿ ಲಕ್ಷಾಂತರ ಜನರ ಆಶೀರ್ವಾದ, ಪ್ರಾರ್ಥನೆ ಇರುತ್ತದೆ. ವೇದಗಳಲ್ಲಿ ಉಲ್ಲೇಖವಾಗುವ ಅಕ್ಷತೆಯನ್ನೇ ಇಲ್ಲೂ ಬಳಸಲಾಗಿದೆ. ಆದರೆ ರಾಮನ ಹೆಸರಿನೊಂದಿಗೆ ಅಕ್ಕಿಯನ್ನು ಪ್ರತಿ ಮನೆ ಮನೆಗೂ ತಲುಪಿಸುತ್ತಿರುವುದಕ್ಕೆ ರಾಮಮಂತ್ರಾಕ್ಷತೆ ಎಂದು ಕರೆಯಲಾಗುತ್ತದೆ.

AYODHYA 1 1

ಯಾಕಿಷ್ಟು ಮಹತ್ವ?: ಅಯೋಧ್ಯೆ ರಾಮ ಮಂದಿರದಿಂದ ಆಗಮಿಸಿರುವ ರಾಮ ಮಂತ್ರಾಕ್ಷತೆ ಪ್ರತೀ ಹಿಂದೂಗಳ ಮನೆಗೆ ತಲುಪಿ, ರಾಮನಲ್ಲಿದ್ದಂತಹ 16 ಸಾತ್ವಿಕ ಗುಣಗಳು ಪ್ರತೀ ಹಿಂದೂವಿನಲ್ಲಿ ಬರುವಂತಾಗಲಿ ಅನ್ನೋ ಆಶಯವೂ ಇದೆ. ಜೊತೆಗೆ ರಾಮ ಮಂತ್ರಾಕ್ಷತೆಯು ಸುಖ, ನೆಮ್ಮದಿ ಹಾಗೂ ಅಭಿವೃದ್ಧಿಯ ಸಂಕೇತವೂ ಆಗಿದೆ. ಇದಕ್ಕೂ ಶುಭ ಕಾರ್ಯಕ್ರಮದಲ್ಲಿ ಬಳಸುವ ಅಕ್ಷತೆಗೂ ವ್ಯತ್ಯಾಸವಿದೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

ayodhya mantrakshte dharwad 1

ವಿತರಣೆ ಮಾಡುವುದು ಹೇಗೆ?: ಕಾರ್ಯಕರ್ತರು ಮನೆಮನೆಗೆ ತೆರಳಿ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ವಿತರಿಸುವ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯ ಜೊತೆಗೆ ರಾಮ ಮಂದಿರದ ಭಾವಚಿತ್ರ ಇರಬೇಕು. ಶುಭ್ರ ವಸ್ತ್ರ ಧರಿಸಬೇಕು. ಮನೆಯ ಹೊರಗಡೆ ನಿಂತು ಮಂತ್ರಾಕ್ಷತೆ ನೀಡಬಾರದು. ರಾಮನ ಜಪ ಮಾಡುತ್ತಾ ಮನೆ ಒಳಗಡೆ ಹೋಗಿ ಮಂತ್ರಾಕ್ಷತೆಯ ಮಹತ್ವದ ಬಗ್ಗೆ ಮನೆ ಮಂದಿಗೆ ತಿಳಿಸಿಕೊಡಬೇಕು. ಜೊತೆಗೆ ಮಂತ್ರಾಕ್ಷತೆ ಸ್ವೀಕರಿಸುವ ಮನೆಯವರು ಕೂಡ ಸ್ನಾನ ಮಾಡಿ, ಶುಭ್ರವಾದ ಬಟ್ಟೆ ಧರಿಸಿ ಭಕ್ತಿಯಿಂದ ತೆಗೆದುಕೊಳ್ಳಬೇಕು.

Ayodhya Lite 2

ಮಂತ್ರಾಕ್ಷತೆ ಸಿಕ್ಕಿದ ಬಳಿಕ ಏನು ಮಾಡಬೇಕು?: ಅಯೋಧ್ಯೆಯ ಮಂತ್ರಾಕ್ಷತೆ ಈಗಾಗಲೇ ಹಲವು ಮನೆಗಳಿಗೆ ತಲುಪಿದ್ದು, ಇನ್ನೂ ಕೆಲವೆಡೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಮಂತ್ರಾಕ್ಷತೆ ಸಿಕ್ಕಿದ ಕೂಡಲೇ ಅದನ್ನು ಉಪಯೋಗಿಸುವಂತಿಲ್ಲ. ಬದಲಾಗಿ ಜನವರಿ 22 ರವರೆಗೆ ತಮ್ಮ ತಮ್ಮ ಮನೆಯ ದೇವರ ಕೋಣೆಯಲ್ಲಿ ಇಡಬೇಕು. ನಾವು ಪ್ರತಿನಿತ್ಯ ದೇವರಿಗೆ ಪೂಜೆ ಮಾಡುವಾಗ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸಬೇಕು. ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮನ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಮಂತ್ರಾಕ್ಷತೆಗೆ ದಿವ್ಯ ಶಕ್ತಿ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ. ಆ ನಂತರ ಮಂತ್ರಾಕ್ಷತೆಯನ್ನು ಬಳಸಬೇಕು.

ಹೇಗೆಲ್ಲಾ ಮಂತ್ರಾಕ್ಷತೆಯನ್ನು ಬಳಸಬಹುದು?
1. ಊಟದ ಅಕ್ಕಿ ಜೊತೆ ಸೇರಿಸಿ, ಬೇಯಿಸಿ ಅನ್ನ ಮಾಡಿ ಸೇವಿಸಬಹುದು.
2. ಮನೆಯಲ್ಲಿ ಪಾಯಸ ಮಾಡಿ ಅದರ ಜೊತೆಯೂ ಸೇವಿಸಬಹುದು
3. ದೇವರ ಕೋಣೆಯಲ್ಲಿಯೂ ಇಟ್ಟುಕೊಳ್ಳಬಹುದು.
4. ಮನೆಯ ಮುಂದಿನ ಬಾಗಿಲಿನ ಮೇಲೆ ಬಿಳಿ ಬಟ್ಟೆಯಲ್ಲಿ ಕಟ್ಟಿ ಇಟ್ಟುಕೊಳ್ಳಬಹುದು.
5. ಮಂತ್ರಾಕ್ಷತೆಯನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಹಣ, ಚಿನ್ನ ಇಡುವ ಕಪಾಟು ಅಥವಾ ಗೋಡ್ರೇಜ್‍ನಲ್ಲಿಯೂ ಇಟ್ಟುಕೊಳ್ಳಬಹುದು.
6. ಮನೆಯವರೆಲ್ಲಾ ಹಂಚಿಕೊಂಡು ಶ್ರದ್ಧೆಯಿಂದ ತಲೆಗೆ ಹಾಕಿಕೊಳ್ಳಬಹುದು.

ಇನ್ನು ಮಂತ್ರಾಕ್ಷತೆಯ ಜೊತೆಗೆ ರಾಮಮಂದಿರದ ಒಂದು ಫೋಟೋ ಹಾಗೂ ಅದರ ಹಿನ್ನೆಲೆ ಇರುವ ಕರಪತ್ರವೊಂದು ಸಿಗುತ್ತದೆ. ಇದನ್ನು ಕೂಡ ಶ್ರದ್ಧೆಯಿಂದ ಇಟ್ಟುಕೊಳ್ಳಬೇಕೆಂದು ಮನವಿ ಮಾಡಲಾಗುತ್ತದೆ.

TAGGED:AyodhyabengaluruRam Mandirram mantrakshateಅಯೋಧ್ಯೆಬೆಂಗಳೂರುರಾಮ ಮಂತ್ರಾಕ್ಷತೆರಾಮಮಂದಿರ
Share This Article
Facebook Whatsapp Whatsapp Telegram

Cinema news

darshan vijayalakshmi
ದರ್ಶನ್‌ಗೆ ಬೆನ್ನುನೋವು ಇರೋದು ನಿಜ: ನಟನ ಬದುಕಿನ ಏಳುಬೀಳಿನ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮಾತು
Cinema Latest Sandalwood Top Stories
Ugram Manju
ಸರಳವಾಗಿ ಮದುವೆಯಾಗಲು ರೆಡಿಯಾದ ಉಗ್ರಂ ಮಂಜು
Cinema Latest Sandalwood Top Stories
Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories

You Might Also Like

Cameron Green
Cricket

ಕ್ಯಾಮರೂನ್‌ ಗ್ರೀನ್‌ 25.20 ಕೋಟಿಗೆ ಸೇಲಾದ್ರೂ ಸಿಗೋದು 18 ಕೋಟಿ!

Public TV
By Public TV
2 minutes ago
eshwar Khandre 1
Belgaum

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಇಲ್ಲ: ಖಂಡ್ರೆ ಸ್ಪಷ್ಟನೆ

Public TV
By Public TV
8 minutes ago
Legislative Council 1
Bengaluru City

ಏರ್ಪೋರ್ಟ್ ವಿಚಾರಕ್ಕೆ 3 ಸಚಿವರ ನಡುವೆ ಸದನದಲ್ಲಿ ವಾಗ್ವಾದ

Public TV
By Public TV
15 minutes ago
Raheem Khan
Belgaum

ಶೀಘ್ರವೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್

Public TV
By Public TV
15 minutes ago
Music Mailari
Bagalkot

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮ್ಯೂಸಿಕ್ ಮೈಲಾರಿ ಸೇರಿ 7 ಜನರ ವಿರುದ್ಧ ಪೋಕ್ಸೊ ಕೇಸ್

Public TV
By Public TV
19 minutes ago
Legislative Council
Belgaum

ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ: ಪರಿಷತ್‌ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?