ಅಯೋಧ್ಯೆ: ರಾಮಮಂದಿರ (Ayodhya Ram Mandir) ಥೀಮ್ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ (Banaras Saree) ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ. ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಸೀರೆಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಲೋಹ್ತಾ ಕೊರುಟಾದ ನಿವಾಸಿ ಸರ್ವೇಶ್ ಕುಮಾರ್ ಶ್ರೀವಾಸ್ತವ ಅವರು ಈ ಬನಾರಸಿ ಸೀರೆಗಳನ್ನು ವಿಶೇಷ ನೇಯ್ಗೆ ಕಲೆಯೊಂದಿಗೆ ಸಿದ್ಧಪಡಿಸುತ್ತಿದ್ದಾರೆ. ಸರ್ವೇಶ್ ಪ್ರಕಾರ, ಪ್ರಸ್ತುತ ಈ ಸೀರೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಇಟಲಿ, ಸಿಂಗಾಪುರ ಹೊರತುಪಡಿಸಿ ಗುಜರಾತ್, ಮಹಾರಾಷ್ಟ್ರ, ಬೆಂಗಳೂರು ಹಾಗೂ ಚೆನ್ನೈನಿಂದ ವಿಶೇಷ ಆರ್ಡರ್ಗಳು ಬಂದಿವೆ. ಇತ್ತೀಚೆಗಷ್ಟೇ ಅವರು ರಾಮಮಂದಿರ ವಿನ್ಯಾಸವಿರುವ ಸೀರೆಯನ್ನು ಇಟಲಿಗೆ ಕಳುಹಿಸಿದ್ದಾರೆ. ಈ ಬನಾರಸಿ ಸೀರೆಯಲ್ಲಿ ರಾಮಮಂದಿರ ಹಾಗೂ ಸೀರೆಯ ಕೊನೆಯಲ್ಲಿ ಸರಯೂ ವಿನ್ಯಾಸವನ್ನು ಮಾಡಲಾಗಿದೆ.
ಪ್ಯೂರ್ ರೇಷ್ಮೆಯಿಂದ ಮಾಡಿದ ಸೀರೆಯ ಸಂಪೂರ್ಣ ಕೆಲಸವನ್ನು ಕೈಮಗ್ಗದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಇದನ್ನು ತಯಾರಿಸಲು ಎರಡು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ. 18 ಮಂದಿ ಕುಶಲಕರ್ಮಿಗಳು ಒಂದು ಸೀರೆಯನ್ನು ಸಿದ್ಧಪಡಿಸುತ್ತಾರೆ. ಒಂದು ಸೀರೆಯ ಬೆಲೆ 35 ಸಾವಿರ ರೂಪಾಯಿಗಳಿವೆ. ಸೀರೆಯಂತೆ ದುಪ್ಪಟ್ಟಾಗಳನ್ನು ಕೂಡ ಮಾಡಿದ್ದಾರೆ. ದುಪ್ಪಟ್ಟಾದ ಎರಡೂ ಬದಿಯಲ್ಲಿ ರಾಮಮಂದಿರದ ವಿನ್ಯಾಸವನ್ನು ಮಾಡಿದ್ದಾರೆ. ಒಂದು ದುಪ್ಪಟ್ಟಾ ಬೆಲೆ 50 ಸಾವಿರ ರೂಪಾಯಿ ಇದ್ದು, ಇದನ್ನು ತಯಾರಿಸಲು ಮೂರು ತಿಂಗಳು ಬೇಕಾಗುತ್ತದೆ ಎಂದು ಸರ್ವೇಶ್ ಹೇಳಿದರು. ಇದನ್ನೂ ಓದಿ: ಮೋದಿ ನಾಸಿಕ್ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್ಗೂ ಏನು ಸಂಬಂಧ?
ಐಡಿಯಾ ಬಂದಿದ್ದು ಹೇಗೆ..?: ಸೀರೆಯನ್ನು ವಿನ್ಯಾಸಗೊಳಿಸಿದ ನೇಹಾ ಶ್ರೀವಾಸ್ತವ ಅವರು ಇದರ ಐಡಿಯಾ ಹೇಗೆ ಬಂತು ಎಂಬುದನ್ನು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಸಂದರ್ಭದಲ್ಲಿ ಅಯೋಧ್ಯೆ ವಿನ್ಯಾಸವನ್ನು ಸೀರೆ ಮೇಲೆ ಹಾಕುವ ಆಲೋಚನೆ ಬಂತು. 15 ದಿನಗಳ ಪ್ರಯತ್ನದ ನಂತರ ವಿನ್ಯಾಸವನ್ನು ಸಿದ್ಧಪಡಿಸಲಾಗಿದೆ ಎಂದರು . ಕಲಾ ತಜ್ಞರ ಪ್ರಕಾರ, ಉಚಾಂಟ್ ವೀವರ್ ಕಲೆಯು ರಾಮಾಯಣ ಕಾಲದ ಕಲೆಯಾಗಿದ್ದು, ಸೂಜಿಯ ಸಹಾಯದಿಂದ ನೇಯಲಾಗುತ್ತದೆ.
ಪ್ರಧಾನಿ ತಾಯಿ, ಮೋದಿ ಚಿತ್ರವೂ ಇದೆ: ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಚಿತ್ರಗಳನ್ನೂ ಸೀರೆಯ ಮೇಲೆ ಬಿಡಿಸಲಾಗಿದೆ. ಸರ್ವೇಶ್ ಅವರು ಈ ಸೀರೆಯನ್ನು ಪ್ರಧಾನಿಯವರ ತಾಯಿಗೆ ಉಡುಗೊರೆಯಾಗಿ ನೀಡಲು ಬಯಸಿದ್ದಾರೆ.