ಬಿಜೆಪಿಯವರು ಹಿಟ್ಲರ್ ವಂಶಸ್ಥರು: ರಾಮಲಿಂಗಾರೆಡ್ಡಿ

Public TV
1 Min Read
RAMALINGA REDDY

ಚಿಕ್ಕಬಳ್ಳಾಪುರ: ಬಿಜೆಪಿಯವರು ಕೆಟ್ಟವರು, ಹಿಟ್ಲರ್ ವಂಶಸ್ಥರು ಅವರು ಸರಿ ಇಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.

bjP

ಸೋನಿಯಾಗಾಂಧಿ ಇಡಿ ವಿಚಾರಣೆ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವೇಳೆ ಬಿಜೆಪಿಯವರಿಗೆ ಒಳ್ಳೇ ಕೆಲಸ ಮಾಡೋ ಅಭ್ಯಾಸವಿಲ್ಲ. ಬೇರೆಯವರನ್ನು ಒಳ್ಳೆಯದು ಮಾಡೋದಕ್ಕೂ ಅವರು ಬಿಡೋದಿಲ್ಲ. ರಾಜ್ಯ ಹಾಗೂ ದೇಶದಲ್ಲಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದವರು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸಿದ್ದರು: ಎಚ್‍ಡಿಕೆ

ಈ ದೇಶದಲ್ಲಿ ಯಾವುದೇ ವಿರೋಧ ಪಕ್ಷ ಇರಬಾರದು ಎಂಬುದೇ ಬಿಜೆಪಿಯ ಕುತಂತ್ರ. ಸುಳ್ಳು ಪ್ರಕರಣ ದಾಖಲಿಸಿ ವಿಪಕ್ಷಗಳನ್ನು ಕುಗ್ಗಿಸುವ ಯತ್ನ ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಶಾಸಕರ ಖರೀದಿ ಮಾಡಿ ಅಧಿಕಾರ ಹಿಡಿದವರು ಬಿಜೆಪಿಯವರು. ಇಂತವರು ನೀತಿ ಮಾತುಗಳನ್ನು ಹೇಳಲು ಯೋಗ್ಯರಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಅಪಕೀರ್ತಿ ತರಲು ಮೋದಿ ಯತ್ನಿಸುತ್ತಿದ್ದಾರೆ: ಡಿಕೆಶಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *