Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

Bengaluru City

ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

Public TV
Last updated: April 4, 2022 5:13 pm
Public TV
Share
3 Min Read
ramlingareddy
SHARE

ಬೆಂಗಳೂರು: ಬಿಜೆಪಿ ಹಾಗೂ ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ಮಸೀದಿಗಳ ಧ್ವನಿವರ್ಧಕ ನಿಷೇಧ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಒಂದು ಕಡೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದರು. ಇದನ್ನೂ ಓದಿ: ಸಕಾಲ ಯೋಜನೆಯಲ್ಲಿ ಶೀಘ್ರವೇ ತತ್ಕಾಲ್ ಸೇವೆ- ಬಿ.ಸಿ. ನಾಗೇಶ್

mosque loudspeakers

ಇದೆಲ್ಲವನ್ನು ಮರೆಮಾಚಲು ಹಿಜಬ್, ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ನಿಷೇಧ, ಹಲಾಲ್ ಕಟ್ ವಿಚಾರ ತೆಗೆದಿದ್ದು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರವನ್ನು ಎತ್ತಿದ್ದಾರೆ. ಇದು ಇಂದು ನಿನ್ನೆಯ ಉದ್ಭವಿಸಿರುವ ವಿಚಾರವಲ್ಲ. ಬಹಳ ಹಿಂದೆಯೇ ಚರ್ಚೆಗೆ ಬಂದಿದೆ. ಈ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ನಂತರ ಮಾಲಿನ್ಯ ನಿಯಂತ್ರಣ ಮಂಡಳಿಯು ಧ್ವನಿವರ್ಧಕಗಳ ಶಬ್ಧದ ಪ್ರಮಾಣಕ್ಕೆ ಮಿತಿ ಹೇರಿ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

web bjp logo 1538503012658

ಅದರ ಪ್ರಕಾರ ಕೈಗಾರಿಕಾ ಪ್ರದೇಶಗಳಲ್ಲಿ ಮಸೀದಿ ಇದ್ದರೆ ಹಗಲು ವೇಳೆ 75 ಡಿಸೆಬಲ್ ವರೆಗೂ ರಾತ್ರಿ ವೇಳೆ 70ರಷ್ಟು ಇಡಬಹುದು. ವಾಣಿಜ್ಯ ಪ್ರದೇಶಗಳಲ್ಲಿ ಹಗಲು ವೇಳೆ 65 ಹಾಗೂ ರಾತ್ರಿ 55ರ ಪ್ರಮಾಣದಲ್ಲಿ ಇಡಬಹುದು. ವಸತಿ ಪ್ರದೇಶಗಳಲ್ಲಿ ಹಗಲು ವೇಳೆ 55 ಹಾಗೂ ರಾತ್ರಿ ವೇಳೆ 45ರಷ್ಟು, ಆಸ್ಪತ್ರೆಗಳಿರುವ ನಿಶ್ಯಬ್ಧ ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ 50 ಹಾಗೂ ರಾತ್ರಿ ವೇಳೆ 40ರಷ್ಟು ಡಿಸೆಬಲ್ ನಷ್ಟು ಧ್ವನಿವರ್ಧಕ ಹಾಕಬಹುದು ಎಂದು ನಮ್ಮ ಸರ್ಕಾರವೇ ಆದೇಶ ಹೊರಡಿಸಿತ್ತು ಎಂದು ಹೇಳಿದರು. ಇದನ್ನೂ ಓದಿ: ಹೊರಟ್ಟಿ ಬಿಜೆಪಿಗೆ ಬಂದರೆ ಸ್ವಾಗತ: ಶಿವರಾಮ್ ಹೆಬ್ಬಾರ್

ಇದು ಕೇವಲ ಮಸೀದಿಗಳಿಗೆ ಮಾತ್ರವಲ್ಲ ಸಭೆ, ಸಮಾರಂಭಗಳಲ್ಲಿ ಯಾರಿಗೂ ತೊಂದರೆ ಆಗಬಾರದು. ಈ ಮಾನದಂಡದ ಅಡಿಯಲ್ಲಿ ಧ್ವನಿವರ್ಧಕ ಹಾಕಲು ಕಾನೂನಿನ ಅಡಿಯಲ್ಲಿ ಅವಕಾಶ ನೀಡಿದ್ದು, ಇದನ್ನು ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಈ ಹಿಂದೆ ಅನೇಕರಿಗೆ ಇಂತಹ ವಿಚಾರವಾಗಿ ನೋಟಿಸ್ ನೀಡಲಾಗಿದೆ. ಈಗ ಬಹುತೇಕ ಕಡೆಗಳಲ್ಲಿ ಮೈಕ್‍ಗಳಿಗೆ ಈ ಪ್ರಮಾಣದಲ್ಲಿ ಶಬ್ಧ ಹೆಚ್ಚಾಗಿ ಬಾರದಂತೆ ಮಾಡಲಾಗಿದೆ ಎಂದರು.

petrol

ಕೆಲವರು ರಾಜಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಾನದಂಡ ವಿಧಿಸಿ ಅನುಮತಿ ನೀಡಿದೆ. ಬಿಜೆಪಿಯವರು ಸಂವಿಧಾನಕ್ಕಿಂತ ದೊಡ್ಡವರಾಗಿದ್ದರೆ ಅವರು ಹೇಳಿದಂತೆ ಕೇಳಬೇಕಾಗುತ್ತದೆ. ಬಿಜೆಪಿಯವರು ಕೇವಲ ಇಲ್ಲಿಗೆ ನಿಲ್ಲಿಸುವುದಿಲ್ಲ. ಇಂತಹ ಇನ್ನು ಅನೇಕ ಭಾವನಾತ್ಮಕ ವಿಚಾರಗಳನ್ನು ಹುಡುಕಿ ಚರ್ಚೆಗೆ ತರುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಇಂತಹ ಪ್ರಯತ್ನಗಳು ಮುಂದುವರಿಯಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷವಾಗಿ ಕಾಂಗ್ರೆಸ್ ಸರಿಯಾಗಿ ಧ್ವನಿ ಎತ್ತುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಾಧ್ಯಮಗಳು ನಾವು ಎತ್ತುವ ಧ್ವನಿಯನ್ನು ಸರಿಯಾಗಿ ಜನರಿಗೆ ತೋರಿಸಿದರೆ ಸಾಕು. ನಾವು, ನಮ್ಮ ನಾಯಕರು ಹೇಳುವುದಕ್ಕೆ ಒತ್ತು ನೀಡಿದರೆ, ನಮ್ಮ ಧ್ವನಿ ಗೊತ್ತಾಗಲಿದೆ. ನಾವು ಸರ್ಕಾರದ ಜನ ವಿರೋಧಿ ಕೆಲಸಗಳನ್ನು ಪ್ರಶ್ನಿಸುತ್ತಿದ್ದು, ಮಾಧ್ಯಮಗಳು ನಮಗೆ ಪ್ರಚಾರ ನೀಡಬೇಕು ಅಷ್ಟೇ. ಉದಾಹರಣೆಗೆ 2ಜಿ ಹಾಗೂ ಕಲ್ಲಿದ್ದಲು ವಿಚಾರದಲ್ಲಿ ಹಗರಣ ನಡೆಯದಿದ್ದರೂ ಹಗರಣ ನಡೆದಿದೆ ಎಂದು ಮಾಧ್ಯಮಗಳು ದೊಡ್ಡ ಪ್ರಮಾಣದ ಪ್ರಚಾರ ಕೊಟ್ಟವು. ಅದರ ಹೋರಾಟದಿಂದ ಕೇಜ್ರಿವಾಲ್ ಮುಖ್ಯಮಂತ್ರಿ ಆದರು, ಕಿರಣ್ ಬೇಡಿ ರಾಜ್ಯಪಾಲರಾಗಿದ್ದಾರೆ. ಅಣ್ಣಾ ಹಜಾರೆ ಅವರು ಪತ್ತೆ ಇಲ್ಲ, ಬಾಬಾ ರಾಮ್ ದೇವ್ ಅವರೆಲ್ಲ ಹೋರಾಟ ಮಾಡಿದ್ದರು ಎಂದರು.

BRIBE

2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ತನಿಖೆ ಮಾಡಿದಾಗ ಯಾರಿಗೂ ಶಿಕ್ಷೆ ಆಗಲಿಲ್ಲ. ಕಾರಣ ಯಾವುದೇ ಹಗರಣ ನಡೆದಿರಲಿಲ್ಲ ಎಂದು ಉತ್ತರಿಸಿದರು. ಏರಿಕೆ ಹೆಚ್ಚಾಗುತ್ತಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದರು.

TAGGED:bengalurubjpMosque loudspeaker bansRamalinga reddyಬಿಜೆಪಿಬೆಂಗಳೂರುಮಸೀದಿಗಳ ಧ್ವನಿವರ್ಧಕ ನಿಷೇಧರಾಮಲಿಂಗಾರೆಡ್ಡಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
6 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
27 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
55 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?