Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೆಕ್ಕಿ ಕೊಲೆ ಕೇಸ್ – ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೆಕ್ಕಿ ಕೊಲೆ ಕೇಸ್ – ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಬಂಧನ

Bengaluru City

ಟೆಕ್ಕಿ ಕೊಲೆ ಕೇಸ್ – ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಬಂಧನ

Public TV
Last updated: January 12, 2026 12:06 pm
Public TV
Share
2 Min Read
Ramamurthy Nagar Techie Murder Case
SHARE

– ತಲೆದಿಂಬಿನಿಂದ ಉಸಿರುಗಟ್ಟಿಸಿ, ಬಳಿಕ ಬೆಂಕಿ ಹಚ್ಚಿ ಪರಾರಿಯಾಗಿದ್ದ 18ರ ಯುವಕ

ಬೆಂಗಳೂರು: ಇಲ್ಲಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು. ಇದನ್ನೂ ಓದಿ: ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ UDR (ಅಸ್ವಾಭಾವಿಕ ಸಾವು) ದಾಖಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು, ಆ ಮೊಬೈಲ್‌ನ ಟವರ್ ಲೊಕೇಷನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದ ಮನೆ ತೋರಿಸಿತ್ತು. ಆಗ ಪೊಲೀಸರು ತಕ್ಷಣ ಆರೋಪಿ ಕರ್ನಲ್ ಕುರಯ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

ಘಟನೆ ನಡೆದ ದಿನ ಆಗಿದ್ದೇನು?
ಜ.3ರ ರಾತ್ರಿ ಘಟನೆ ನಡೆದಿದ್ದು, ಜ.5ರಂದು ಬೆಳಕಿಗೆ ಬಂದಿದೆ. ಘಟನೆ ನಡೆದ ದಿನ ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ವಾಸಿಸುತ್ತಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿತ್ತು. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು.

ಟೆಕ್ಕಿ ಶರ್ಮಿಳಾನ್ನು ಕೊಲೆ ಮಾಡಿದ ಆರೋಪಿ ಕೇರಳ ಮೂಲದ ಹದಿನೆಂಟು ವರ್ಷದ ಕರ್ನಲ್ ಕುರಯ್. ಶರ್ಮಿಳಾ ಹಾಗೂ ಆರೋಪಿ ಅಕ್ಕಪಕ್ಕದ ನಿವಾಸಿಗಳು. ಮೃತ ಶರ್ಮಿಳಾಗಿಂದ ಆರೋಪಿ 16 ವರ್ಷ ಚಿಕ್ಕವನು. ಸಾಮಾನ್ಯವಾಗಿ ಆರೋಪಿ ಕರ್ನಲ್ ಎದುರು ಬಂದಾಗ ಶರ್ಮಿಳಾ ಸ್ಮೈಲ್‌ ಕೊಟ್ಟು ಮಾತನಾಡಿಸುತ್ತಿದ್ದಳು. ಇದನ್ನೇ ಪ್ರೀತಿ ಎಂದುಕೊಂಡಿದ್ದ ಆರೋಪಿ ಆಕೆಯನ್ನು ನಿಜವಾಗಿಯೂ ಪ್ರೀತಿಸಲು ಆರಂಭಿಸಿದ್ದ. ಘಟನೆ ನಡೆದ ದಿನ ರಾತ್ರಿ ಆರೋಪಿ ಮನೆಯ ಟೆರೇಸ್ ಮೂಲಕ ಶರ್ಮಿಳಾ ಪ್ಲಾಟ್‌ಗೆ ಬಂದಿದ್ದ. ಮನೆಯ ಒಳಗೆ ಬಂದವನೇ ಏಕಾಏಕಿ ಶರ್ಮಿಳಾ ಜೊತೆಗೆ ಅನುಚಿತ ವರ್ತನೆ ತೋರಲು ಶುರುಮಾಡಿದ್ದ. ಗಾಬರಿಯಾದ ಶರ್ಮಿಳಾ ಆತನನ್ನು ತಳ್ಳಿ ಕಿರುಚಾಡಿದ್ದಳು. ಇದರಿಂದ ಕೋಪಗೊಂಡ ಆರೋಪಿ ಹಲ್ಲೆ ಮಾಡಿ, ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ವಿಜ್ಞಾನ ವಿದ್ಯಾರ್ಥಿಯಾಗಿದ್ದ ಆರೋಪಿ ಬೆಂಕಿಯಲ್ಲಿ ಸುಟ್ಟರೇ ಸಾಕ್ಷ್ಯ ಉಳಿಯಲ್ಲ ಎಂದು ಭಾವಿಸಿ ದಿಂಬು, ಬೆಡ್‌ಶೀಟ್, ಕೃತ್ಯದ ವೇಳೆ ಬಳಸಿದ ಎಲ್ಲ ವಸ್ತುಗಳನ್ನ ರೂಂನಲ್ಲಿ ಹಾಕಿ ಬೆಂಕಿ ಹಚ್ಚಿದ್ದ. ಬಳಿಕ ಹೋಗುವಾಗ ಶರ್ಮಿಳಾ ಫೋನ್ ತೆಗೆದುಕೊಂಡು ನಾನು ಸಿಕ್ಕಿ ಹಾಕಿಕೊಳ್ಳಲು ಸಾಧ್ಯವೇ ಇಲ್ಲ ಎಂದುಕೊಂಡು ಎಸ್ಕೇಪ್ ಆಗಿದ್ದ. ಘಟನೆಯಾದ ಬಳಿಕ ಹತ್ಯೆಗೂ ನನಗೂ ಏನು ಸಂಬಂಧವಿಲ್ಲದಂತೆ ಡ್ರಾಮಾ ಮಾಡಿದ್ದ. ಶರ್ಮಿಳಾ ಮನೆಯ ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಫೋನ್ ಕಾಲ್ ಪರಿಶೀಲನೆ ಮಾಡಿದಾಗ ಎಲ್ಲಿಯೂ ಆರೋಪಿಯ ಸುಳಿವು ಇರಲಿಲ್ಲ. ಆದರೆ ಶರ್ಮಿಳಾ ಫೋನ್ ತನ್ನ ಬಳಿಯೇ ಇಟ್ಟುಕೊಂಡಿದ್ದ. ಘಟನೆಯಾದ ಮೂರು ದಿನದ ಬಳಿಕ ಫೋನ್ ಆನ್ ಮಾಡಿ ತನ್ನ ಸಿಮ್ ಹಾಕಿದ್ದಾನೆ. ಫೋನ್ ಆನ್ ಆಗುತ್ತಿದ್ದಂತೆ ಆಕ್ಟೀವ್ ಆದ ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.ಇದನ್ನೂ ಓದಿ: ಬೆಂಗಳೂರು | ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?

 

TAGGED:bengaluruFire accidentRamamurthy Nagartechieಟೆಕ್ಕಿಬೆಂಕಿ ಅವಘಡಬೆಂಗಳೂರುರಾಮಮೂರ್ತಿ ನಗರ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

income tax returns
Latest

ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Public TV
By Public TV
15 minutes ago
MB Patil 1
Bengaluru City

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ

Public TV
By Public TV
22 minutes ago
rupee budget
Latest

Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದು ಎಲ್ಲಿಗೆ?

Public TV
By Public TV
34 minutes ago
Vijayapura RowdySheeter murder
Crime

ಹಣ, ಹೆಣ್ಣಿಗಾಗಿ ಕೊಲೆ ಶಂಕೆ – ಕತ್ತು ಕೊಯ್ದು ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
41 minutes ago
Tejasvi Surya
Latest

ಇದು ದೂರದರ್ಶಿ ಬಜೆಟ್: ತೇಜಸ್ವಿ ಸೂರ್ಯ

Public TV
By Public TV
47 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?