ಬೈಕ್, ಸರಗಳ್ಳರ ಬಂಧನ- ದ್ವಿಚಕ್ರ ವಾಹನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Public TV
1 Min Read
Magadi Police

ರಾಮನಗರ: ಮಾಗಡಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಮತ್ತು ಚಿನ್ನದ ಸರ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿ ಗ್ರಾಮದ ಸಂಜಯ್‍ಕುಮಾರ್ (23), ಕೆಬ್ಬಳ್ಳಿಯ ಕೀರ್ತಿ(23), ಬನ್ನಿಕುಪ್ಪೆಯ ಆನಂದ ಗಿರಿ(20) ಬಂಧಿತ ಆರೋಪಿಗಳು. ಆರೋಪಿತರಿಂದ ಮೂರು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳು ಒಟ್ಟು 4.03 ಲಕ್ಷ ಬೆಲೆಬಾಳುತ್ತವೆ. ಒಟ್ಟು 5 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.

ಮಾಗಡಿಯ ಕೆಂಪೇಗೌಡ ಸರ್ಕಲ್ ನಲ್ಲಿ ಪಿಎಸ್‍ಐ ಟಿ.ವೆಂಕಟೇಶ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾಗ ಖಾಸಗಿ ಬಸ್ ನಿಲ್ದಾಣದ ಕಡೆಯಿಂದ ಮೋಟಾರ್ ಸೈಕಲ್‍ನಲ್ಲಿ ಇಬ್ಬರು ಬಂದಿದ್ದು, ಅವರನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಈ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *