ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ಜಿಲ್ಲಾಸ್ಪತ್ರೆಯ 15 ವೈದ್ಯರು ಗೈರು

Public TV
1 Min Read
Ramanagara Hospital 1

ರಾಮನಗರ: ಜಿಲ್ಲಾಸ್ಪತ್ರೆಯ 15 ವೈದ್ಯರು ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ಕರ್ತವ್ಯಕ್ಕೆ ಗೈರಾಗಿದ್ದಾರೆ.

ಮಹಾಮಾರಿ ಕಿಲ್ಲರ್ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ನಿನ್ನೆಯಷ್ಟೇ ಆರೋಗ್ಯ ಸಚಿವ ಬಿ.ಶ್ರೀರಾಮುಲು ರಾಮನಗರದಲ್ಲಿ ವೈದ್ಯರು ಯಾರೂ ಸಹ ಕರ್ತವ್ಯಕ್ಕೆ ಗೈರಾಗಬೇಡಿ ಎಂದು ಮನವಿ ಮಾಡಿದ್ದರು. ಆದ್ರೆ ಇಂದು ಬರೋಬ್ಬರಿ 15 ಜನ ಜಿಲ್ಲಾಸ್ಪತ್ರೆಯ ವೈದ್ಯರು ಕರ್ತವ್ಯಕ್ಕೆ ಗೈರಾಗುವ ಮೂಲಕ ಬೇಜವ್ದಾರಿತನ ತೋರಿದ್ದಾರೆ.

RMG DOCTORS LEAVE

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 26 ಜನ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಕೇವಲ 8 ಜನ ವೈದ್ಯರು ಮಾತ್ರವೇ ಕರ್ತವ್ಯಕ್ಕೆ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದರೇ, ಮೂರು ಜನ ರಾತ್ರಿ ಪಾಳಿಗೆ ಸಹಿ ಮಾಡಿದ್ದಾರೆ. ಆದ್ರೆ ಮಧ್ಯಾಹ್ನವಾದರೂ ಕೇವಲ ಐದಾರು ವೈದ್ಯರು ಮಾತ್ರ ಕರ್ತವ್ಯದಲ್ಲಿದ್ದಾರೆ.

RMG DOCTORS LEAVE

ಕೆಲವು ವೈದ್ಯರು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಮನೆಗೆ ಹೋಗಿದ್ದರೆ, 15 ಜನ ವೈದ್ಯರು ಕರ್ತವ್ಯಕ್ಕೆ ಹಾಜರಾಗದೇ ಉದ್ದಟತನ ತೋರಿದ್ದಾರೆ. ಆರೋಗ್ಯ ಸಚಿವರೇ ಕೈ ಮುಗಿದು ಮನವಿ ಮಾಡಿದ್ರು ಸಹ ವೈದ್ಯರು ಕರ್ತವ್ಯಕ್ಕೆ ಹಾಜರಾಗದೇ ಬೇಜವಾಬ್ದಾರಿತನ ತೋರಿದ್ದಾರೆ.

Ramanagara Hospital 4

ಇನ್ನೂ ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾಸ್ಪತ್ರೆಯ ಸರ್ಜನ್ ಗೂ ಸಹ ಯಾವುದೇ ಮಾಹಿತಿ ಇರಲಿಲ್ಲ. ಈ ಬಗ್ಗೆ ಪ್ರಶ್ನಿಸಿದ ಬಳಿಕ ಜಿಲ್ಲಾ ಸರ್ಜನ್ ಡಾ.ಪದ್ಮಾ ರವರು ಕರ್ತವ್ಯಕ್ಕೆ ಹಾಜರಾಗದ ವೈದ್ಯರ ಮಾಹಿತಿ ಪಡೆದು ಕೂಡಲೇ ನೋಟಿಸ್ ನೀಡಲಾಗುವುದು. ಅಲ್ಲದೇ ಶಿಸ್ತು ಕ್ರಮ ಜರುಗಿಸಲು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *