ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರು ಹೆಮ್ಮಾರಿ ಕೊರೊನಾ ವೈರಸ್ ತಡೆಗೆ 2 ಲಕ್ಷ ಮಾಸ್ಕ್, 17 ಸಾವಿರ ಲೀಟರ್ ಸ್ಯಾನಿಟೈಜರ್ ವಿತರಣೆ ಮಾಡಿದ್ದಾರೆ.
ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಕಿಟ್ ನೀಡಲಾಗಿದೆ. ಡಿ.ಕೆ.ಸಹೋದರರು 200 ಎಂಎಲ್ ಹಾಗೂ 500 ಎಂಎಲ್ ಬಾಟಲ್ಗಳುಳ್ಳ ಒಟ್ಟು 17 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ಹಾಗೂ 2 ಲಕ್ಷ ಮಾಸ್ಕ್ಗಳನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ನಿತ್ಯವೂ 10 ಸಾವಿರ ಜನರಿಗೆ ‘ದಾದಾ’ನಿಂದ ಅನ್ನದಾನ
ಈ ವೇಳೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಯ ಮೂಲಕ ನಗರದ ಪ್ರತಿ ಮನೆಗಳಿಗೆ ಹಾಗೂ ಗ್ರಾಮಗಳಲ್ಲಿ ಕೆಲವು ಕಡೆಗಳಲ್ಲಿ ಸ್ಯಾನಿಟೈಜರ್ ಸ್ಥಳ ನಿರ್ಮಿಸಿ ಸಾರ್ವಜನಿಕರಿಗೆ ಹಾಕುವುದನ್ನು ಮಾಡಲಿ ಎಂದು ತಿಳಿಸಿದರು.