Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

Districts

ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

Public TV
Last updated: August 29, 2022 12:24 pm
Public TV
Share
2 Min Read
ramanagara
SHARE

ರಾಮನಗರ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. ಇಂದು ನಡೆಯ ಬೇಕಿದ್ದ ತರಗತಿಯನ್ನ ಶನಿವಾರ ಪೂರ್ಣ ದಿನ ನಡೆಸುವುದಾಗಿ ತಿಳಿಸಿದ್ದಾರೆ.

ramanagara 1

ರಾಮನಗರ ಜಿಲ್ಲೆಯಾದ್ಯಂತ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ ರೈಲ್ವೆ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು, ರೈಲ್ವೆ ಪ್ಲಾಟ್ ಫಾಂ ತುಂಬಾ ಮಳೆ ನೀರು ತುಂಬಿ ಹರಿಯುತ್ತಿದೆ. ರೈಲು ಬರಲು ಹಳಿ ಕಾಣದಂತೆ ನೀರು ತುಂಬಿರುವ ಹಿನ್ನೆಲೆ ಪ್ರತಿನಿತ್ಯ ಬೆಂಗಳೂರು ಮೈಸೂರಿಗೆ ಓಡಾಡುವ ನೂರಾರು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

ramanagara 2

ಭಾರೀ ಮಳೆಯಿಂದಾಗಿ ರಾಮನಗರದಲ್ಲಿರುವ ಆರ್ಕೇಶ್ವರ ಕಾಲೋನಿ ಸಂಪೂರ್ಣ ಜಲಾವೃತವಾಗಿದ್ದು, ಕಾಲೋನಿಯಲ್ಲಿರುವ ಮುಕ್ಕಾಲು ಭಾಗ ಮಳೆಯಿಂದ ಮುಳುಗಡೆಯಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು, ಬೈಕ್, ಕಾರು ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮೂಡಿದೆ. ವರುಣನ ಆರ್ಭಟಕ್ಕೆ ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಇರುವ ಅರ್ಕಾವತಿ ನದಿಯಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಹಸುವೊಂದು ಕೊಚ್ಚಿ ಹೋಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ವೈದ್ಯಕೀಯ ಉಪಕರಣಗಳು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

ಮತ್ತೊಂದೆಡೆ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ ನಡಸುತ್ತಿದ್ದು, ಕೆಲ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ರಾಮನಗರ ಸಮೀಪದ ಸಂಗಬಸವನ ದೊಡ್ಡಿ ಬಳಿ ವಾಹನ ಮುಳುಗಡೆಯಾಗಿರುವ ಹಿನ್ನೆಲೆ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಎದುರಾಗಿದೆ.

ಧಾರಾಕಾರ ಮಳೆಗೆ ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ನೀರು ತುಂಬಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗುತ್ತಿಲ್ಲ, ಸಹಾಯವಾಣಿಯನ್ನೂ ತೆರೆದಿಲ್ಲ ಎಂದು ಕಿಡಿಕಾರಿದ್ದಾರೆ. ಸದ್ಯ ಜೆಸಿಬಿ ಮೂಲಕ ರಸ್ತೆ ಸರಿಪಡಿಸಿ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿದ್ದಾರೆ.

ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪ್ಪಟ್ಟಣದ ರೇಷ್ಮೆ ಮಾರುಕಟ್ಟೆಯ ಮುಂಭಾಗದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚನ್ನಪಟ್ಟಣದ ತಟ್ಟಿಗೆರೆ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದ ಕಾರಣ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bangalore-Mysuru Highwayfloodrainramanagaraschool-collegeಪ್ರವಾಹಬೆಂಗಳೂರು-ಮೈಸೂರು ಹೆದ್ದಾರಿಮಳೆರಾಮನಗರಶಾಲಾ ಕಾಲೇಜು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
40 minutes ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
52 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
2 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
2 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
2 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?