Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

Districts

ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

Public TV
Last updated: October 15, 2019 8:52 pm
Public TV
Share
2 Min Read
DK Brothers
SHARE

– ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆ

ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅನುಪಸ್ಥಿತಿಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಚುನಾವಣೆ ನಡೆದಿದ್ದು, ಅವರ ಬೆಂಬಲ ಅಭ್ಯರ್ಥಿಯೇ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ಹವಾ ಜಿಲ್ಲೆಯಲ್ಲಿ ಕಡಿಮೆಯಾಗಿಲ್ಲ ಎಂಬುದು ನಿರೂಪಿತವಾಗಿದೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 10 ತಿಂಗಳ ಅವಧಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗಾದಿಗಾಗಿ ಮಂಗಳವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ್ದ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ತಾಲೂಕು ಹೊಸದುರ್ಗ ಕ್ಷೇತ್ರದ ಸದಸ್ಯ ಎಚ್.ಬಸಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇವರನ್ನು ಹೊರತು ಪಡಿಸಿ ಮತ್ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ರಾಮನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಘೋಷಿಸಿದರು. ಇದನ್ನೂ ಓದಿ: 100 ರೂ. ಇದ್ದ ಆಸ್ತಿ ಮೌಲ್ಯ ಈಗ 1 ಸಾವಿರಕ್ಕೆ ಏರಿಕೆಯಾಗಿದೆ, ಅಕ್ರಮ ಹೇಗೆ ಆಗುತ್ತೆ – ಸಿಂಘ್ವಿ ಪ್ರಶ್ನೆ

RMR

ಮೊದಲ ಬಾರಿಗೆ ಗೈರು:
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರು ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಚುನಾವಣೆ ನಡೆದರೂ ಹಾಜರಾಗುತ್ತಿದ್ದರು. ಆದರೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಇದೇ ಮೊದಲ ಬಾರಿಗೆ ಗೈರಾಗಿದರು. ಹೀಗಾಗಿ ಚುನಾವಣೆಗೆ ಆಸಕ್ತಿ ತೋರದ ಡಿ.ಕೆ ಸಹೋದರರ ಬೆಂಬಲಿಗರು ಸಹ ಸಪ್ಪೆ ಮೊರೆ ಹಾಕಿಕೊಂಡಿದ್ದರು.

ಚುನಾವಣಾ ಪ್ರಕ್ರಿಯೆಯಲ್ಲಿ 22 ಸದಸ್ಯರ ಪೈಕಿ 20 ಸದಸ್ಯರು ಹಾಜರಿದ್ದರು. ದೊಡ್ಡಾಲಹಳ್ಳಿ ಕ್ಷೇತ್ರದ ಸದಸ್ಯ ಶಿವಕುಮಾರ್ ಮತ್ತು ಮಳೂರು ಕ್ಷೇತ್ರದ ಸದಸ್ಯ ಸಿ.ಪಿ.ರಾಜೇಶ್ ಗೈರಾಗಿದ್ದರು. ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

RMR A

ಸದಸ್ಯರಲ್ಲಿ ಯಾವುದೇ ಬಿನ್ನಾಭಿಪ್ರಾಯ ಇಟ್ಟುಕೊಳ್ಳದೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅಧ್ಯಕ್ಷರಾಗಿ ಕೆಲಸ ಮಾಡಿರುವವರ ಸಹಕಾರ ಪಡೆದು ಸಂಸದ ಡಿ.ಕೆ.ಸುರೇಶ್ ಮತ್ತು ನಾಲ್ಕು ತಾಲೂಕಿನ ಶಾಸಕರ ಮಾರ್ಗದರ್ಶನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷ ಬಸಪ್ಪ ಭರವಸೆ ನೀಡಿದರು.

ಡಿಕೆ ಬ್ರದರ್ಸ್ ಇಲ್ಲದೇ ನಮ್ಮಲ್ಲಿ ನಗು ಹೋಗಿದೆ. ಅವರಿಲ್ಲದೇ ಅಧಿಕಾರ ಸ್ವೀಕರಿಸೋಕು ಮನಸ್ಸಿರಲಿಲ್ಲ. ಅಲ್ಲದೇ ಅವರು ಕಷ್ಟದಲ್ಲಿರುವಾಗ ಅಧಿಕಾರ ನಮಗೆ ಮುಖ್ಯವಾಗಿರಲಿಲ್ಲ. ಆದರೆ ಅವರೇ ಈ ಮುನ್ನ ನೀಡಿದ್ದ ಸೂಚನೆ ಮೇರೆಗೆ ಅಧಿಕಾರ ಸ್ವೀಕರಿಸಲಾಗಿದೆ. ಅಧಿಕಾರಕ್ಕಾಗಿ ಅವರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕೆಲಸವನ್ನೂ ಯಾರೂ ಮಾಡಿಲ್ಲ. ಇಂತಹ ಸಮಯದಲ್ಲಿ ಅವರ ಬಳಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ನಾಯಕರು, ಪ್ರಮುಖ ಮುಖಂಡರೆಲ್ಲ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಬಸಪ್ಪ ತಿಳಿಸಿದರು.

RMR B

ಜಿಲ್ಲಾ ಪಂಚಾಯತ್ ಬಲಾಬಲ:
22 ಸದಸ್ಯರ ಸಂಖ್ಯಾಬಲ ಹೊಂದಿರುವ ರಾಮನಗರ ಜಿಲ್ಲಾ ಪಂಚಾಯತ್‍ಗೆ 2016ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‍ನ 16 ಮತ್ತು ಜೆಡಿಎಸ್‍ನ 6 ಸದಸ್ಯರು ಗೆಲವು ಸಾಧಿಸಿದ್ದವು. ಕುದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಎ.ಮಂಜು ಅವರು 2018ರ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾದ ಹಿನ್ನಲೆ ಇವರಿಂದ ತೆರವಾಗಿದ್ದ ಸ್ಥಾನಕ್ಕೆ ಅಣ್ಣೇಗೌಡ ಅವಿರೋಧವಾಗಿ ಆಯ್ಕೆ ಯಾಗಿದ್ದರು. ಪ್ರಸ್ತುತ ಜಿಲ್ಲಾ ಪಂಚಾಯಿತ್‍ನಲ್ಲಿ ಕಾಂಗ್ರೆಸ್‍ನ 16, ಜೆಡಿಎಸ್‍ನ 5 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.

 

TAGGED:d k shivakumarD.K.SureshPublic TVramanagaraZilla Panchayat President Electionಜಿಲ್ಲಾ ಪಂಚಾಯತ್ಡಿ.ಕೆ.ಶಿವಕುಮಾರ್ಡಿ.ಕೆ.ಸುರೇಶ್ಪಬ್ಲಿಕ್ ಟಿವಿರಾಮನಗರ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
3 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
3 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
3 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
3 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?