Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

Districts

ಡಿಕೆಶಿ ಅನುಪಸ್ಥಿತಿಯಲ್ಲಿ ಮೊದಲ ಚುನಾವಣೆ- ಜೈಲಿನಲ್ಲಿದ್ದರೂ ಕಮ್ಮಿಯಾಗದ ಡಿಕೆ ಬ್ರದರ್ಸ್ ಹವಾ

Public TV
Last updated: October 15, 2019 8:52 pm
Public TV
Share
2 Min Read
DK Brothers
SHARE

– ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆ

ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅನುಪಸ್ಥಿತಿಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಚುನಾವಣೆ ನಡೆದಿದ್ದು, ಅವರ ಬೆಂಬಲ ಅಭ್ಯರ್ಥಿಯೇ ಆಯ್ಕೆಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ಹವಾ ಜಿಲ್ಲೆಯಲ್ಲಿ ಕಡಿಮೆಯಾಗಿಲ್ಲ ಎಂಬುದು ನಿರೂಪಿತವಾಗಿದೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 10 ತಿಂಗಳ ಅವಧಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗಾದಿಗಾಗಿ ಮಂಗಳವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ್ದ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ತಾಲೂಕು ಹೊಸದುರ್ಗ ಕ್ಷೇತ್ರದ ಸದಸ್ಯ ಎಚ್.ಬಸಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇವರನ್ನು ಹೊರತು ಪಡಿಸಿ ಮತ್ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ರಾಮನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಚ್.ಬಸಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಘೋಷಿಸಿದರು. ಇದನ್ನೂ ಓದಿ: 100 ರೂ. ಇದ್ದ ಆಸ್ತಿ ಮೌಲ್ಯ ಈಗ 1 ಸಾವಿರಕ್ಕೆ ಏರಿಕೆಯಾಗಿದೆ, ಅಕ್ರಮ ಹೇಗೆ ಆಗುತ್ತೆ – ಸಿಂಘ್ವಿ ಪ್ರಶ್ನೆ

RMR

ಮೊದಲ ಬಾರಿಗೆ ಗೈರು:
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರು ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಚುನಾವಣೆ ನಡೆದರೂ ಹಾಜರಾಗುತ್ತಿದ್ದರು. ಆದರೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಇದೇ ಮೊದಲ ಬಾರಿಗೆ ಗೈರಾಗಿದರು. ಹೀಗಾಗಿ ಚುನಾವಣೆಗೆ ಆಸಕ್ತಿ ತೋರದ ಡಿ.ಕೆ ಸಹೋದರರ ಬೆಂಬಲಿಗರು ಸಹ ಸಪ್ಪೆ ಮೊರೆ ಹಾಕಿಕೊಂಡಿದ್ದರು.

ಚುನಾವಣಾ ಪ್ರಕ್ರಿಯೆಯಲ್ಲಿ 22 ಸದಸ್ಯರ ಪೈಕಿ 20 ಸದಸ್ಯರು ಹಾಜರಿದ್ದರು. ದೊಡ್ಡಾಲಹಳ್ಳಿ ಕ್ಷೇತ್ರದ ಸದಸ್ಯ ಶಿವಕುಮಾರ್ ಮತ್ತು ಮಳೂರು ಕ್ಷೇತ್ರದ ಸದಸ್ಯ ಸಿ.ಪಿ.ರಾಜೇಶ್ ಗೈರಾಗಿದ್ದರು. ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

RMR A

ಸದಸ್ಯರಲ್ಲಿ ಯಾವುದೇ ಬಿನ್ನಾಭಿಪ್ರಾಯ ಇಟ್ಟುಕೊಳ್ಳದೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅಧ್ಯಕ್ಷರಾಗಿ ಕೆಲಸ ಮಾಡಿರುವವರ ಸಹಕಾರ ಪಡೆದು ಸಂಸದ ಡಿ.ಕೆ.ಸುರೇಶ್ ಮತ್ತು ನಾಲ್ಕು ತಾಲೂಕಿನ ಶಾಸಕರ ಮಾರ್ಗದರ್ಶನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷ ಬಸಪ್ಪ ಭರವಸೆ ನೀಡಿದರು.

ಡಿಕೆ ಬ್ರದರ್ಸ್ ಇಲ್ಲದೇ ನಮ್ಮಲ್ಲಿ ನಗು ಹೋಗಿದೆ. ಅವರಿಲ್ಲದೇ ಅಧಿಕಾರ ಸ್ವೀಕರಿಸೋಕು ಮನಸ್ಸಿರಲಿಲ್ಲ. ಅಲ್ಲದೇ ಅವರು ಕಷ್ಟದಲ್ಲಿರುವಾಗ ಅಧಿಕಾರ ನಮಗೆ ಮುಖ್ಯವಾಗಿರಲಿಲ್ಲ. ಆದರೆ ಅವರೇ ಈ ಮುನ್ನ ನೀಡಿದ್ದ ಸೂಚನೆ ಮೇರೆಗೆ ಅಧಿಕಾರ ಸ್ವೀಕರಿಸಲಾಗಿದೆ. ಅಧಿಕಾರಕ್ಕಾಗಿ ಅವರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕೆಲಸವನ್ನೂ ಯಾರೂ ಮಾಡಿಲ್ಲ. ಇಂತಹ ಸಮಯದಲ್ಲಿ ಅವರ ಬಳಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ನಾಯಕರು, ಪ್ರಮುಖ ಮುಖಂಡರೆಲ್ಲ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಬಸಪ್ಪ ತಿಳಿಸಿದರು.

RMR B

ಜಿಲ್ಲಾ ಪಂಚಾಯತ್ ಬಲಾಬಲ:
22 ಸದಸ್ಯರ ಸಂಖ್ಯಾಬಲ ಹೊಂದಿರುವ ರಾಮನಗರ ಜಿಲ್ಲಾ ಪಂಚಾಯತ್‍ಗೆ 2016ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‍ನ 16 ಮತ್ತು ಜೆಡಿಎಸ್‍ನ 6 ಸದಸ್ಯರು ಗೆಲವು ಸಾಧಿಸಿದ್ದವು. ಕುದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಎ.ಮಂಜು ಅವರು 2018ರ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾದ ಹಿನ್ನಲೆ ಇವರಿಂದ ತೆರವಾಗಿದ್ದ ಸ್ಥಾನಕ್ಕೆ ಅಣ್ಣೇಗೌಡ ಅವಿರೋಧವಾಗಿ ಆಯ್ಕೆ ಯಾಗಿದ್ದರು. ಪ್ರಸ್ತುತ ಜಿಲ್ಲಾ ಪಂಚಾಯಿತ್‍ನಲ್ಲಿ ಕಾಂಗ್ರೆಸ್‍ನ 16, ಜೆಡಿಎಸ್‍ನ 5 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.

 

TAGGED:d k shivakumarD.K.SureshPublic TVramanagaraZilla Panchayat President Electionಜಿಲ್ಲಾ ಪಂಚಾಯತ್ಡಿ.ಕೆ.ಶಿವಕುಮಾರ್ಡಿ.ಕೆ.ಸುರೇಶ್ಪಬ್ಲಿಕ್ ಟಿವಿರಾಮನಗರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

ISI Module tasked with installing CCTVs outside military sites busted 11 arrested
Crime

ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌

Public TV
By Public TV
2 minutes ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾರಣ

Public TV
By Public TV
13 minutes ago
NASA Artemis 2
Latest

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Public TV
By Public TV
39 minutes ago
Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
58 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
8 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?