ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜಾತಕದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ ಮಹಾಯೋಗ ಇದೆ ಅಂತ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಈ ಭವಿಷ್ಯವಾಣಿ ನುಡಿದಿದ್ದಾರೆ. ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪರ ಜಾತಕದಲ್ಲಿ ಮಹಾಯೋಗ ಇದೆ. ಈ ಮಹಾಯೋಗದ ಪ್ರಕಾರ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಅಕ್ಟೋಬರ್ ಎರಡನೇ ವಾರದ ಅಪೂರ್ವ ಘಟ್ಟದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಯೋಗ ಇದೆ ಎಂದರು. ಶ್ರೀಗಳಿಂದ ಹಿತನುಡಿ ಹೊರಬರುತಿದ್ದಂತೆ ಸಮಾರಂಭದಲ್ಲಿ ನೆರೆದವರು ಚಪ್ಪಾಳೆ ಸುರಿಮಳೆಗೈದಿದ್ದಾರೆ.