– ಜಾತಿಗಣತಿ ವರದಿ ಪುನರ್ವಿಮರ್ಶೆ ಆಗ್ಬೇಕು, ಅಧಿಕಾರಿಗಳು ಮನೆಮನೆಗೆ ಭೇಟಿ ಕೊಡಬೇಕು
ಚಿಕ್ಕಮಗಳೂರು: ಜಾತಿಗಣತಿ ವರದಿ (Caste Census Report) ತಯಾರು ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅಧಿಕಾರ ಇರುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸರಿಯಾದ ಮಾಹಿತಿ ಕೆಲವೊಂದು ಸೂಚನೆಗಳನ್ನು ನೀಡಬೇಕು ಎಂದು ಬಾಳೆಹೊನ್ನೂರಿನ (Balehonnur) ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಹೇಳಿದರು.
ತರಾತುರಿ ಜಾತಿಗಣತಿ, ವರದಿ ಮಂಡನೆಯ ಕುರಿತು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ರಂಭಾಪುರೀ ಪೀಠದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸರ್ಕಾರ ಯಾವುದೋ ಒಂದು ಜಾತಿಯನ್ನು ತುಷ್ಟೀಕರಣ ಮಾಡಲು ಜಾತಿಗಣತಿಗೆ ಮುಂದಾಗಿದೆ. ಹತ್ತಾರು ವರ್ಷಗಳಿಂದ ಜಾತಿಗಣತಿ ವರದಿ ನೆನೆಗುದಿಗೆ ಬಿದ್ದಿತ್ತು. ಜಾತಿಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಸಂಘ ವಿರೋಧಿಸಿದೆ. ಸರ್ಕಾರ ಜಾತಿಗಣತಿ ವರದಿಯನ್ನು ಪಾರದರ್ಶಕವಾಗಿ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದ್ದಕ್ಕೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ: ಡಿ.ಕೆ ಶಿವಕುಮಾರ್
ಸರ್ಕಾರದ ಮೂಗಿನ ನೇರಕ್ಕೆ ಜಾತಿಗಣತಿ ವರದಿ ತಯಾರಾಗಿದೆ. ಜಾತಿಗಣತಿ ವರದಿ ಪುನರ್ವಿಮರ್ಶೆ ಆಗಬೇಕು. ಅಧಿಕಾರಿಗಳು ಮನೆಮನೆಗೆ ಭೇಟಿ ಕೊಡಬೇಕು. ಜಾತಿಗಣತಿ ವರದಿ ಬಗ್ಗೆ ಈಗಾಗಲೇ ಹಲವರು ಆತಂಕ ಹೊರಹಾಕಿದ್ದಾರೆ. ಜನರ ಭಾವನೆಯನ್ನು ಅರಿತು ಪಾರದರ್ಶಕತೆಯಿಂದ, ಮನೆಮನೆಗೆ ಭೇಟಿ ಕೊಟ್ಟು ಅಧಿಕಾರಿಗಳು ವರದಿ ತಯಾರಿಸಬೇಕು ಎಂದರು. ಇದನ್ನೂ ಓದಿ: ವಕ್ಫ್ ಕಾಯ್ದೆಗೆ ವಿರೋಧ, ಬಂಗಾಳ ಧಗಧಗ – 150ಕ್ಕೂ ಹೆಚ್ಚು ಮಂದಿ ಬಂಧನ
ಆಡಳಿತ ಪಕ್ಷದ ಅನೇಕ ಶಾಸಕರು ಈ ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದವರು ಜಾತಿಗಣತಿ ವರದಿಯನ್ನು ಬಹಿಷ್ಕಾರ ಮಾಡಿದ್ದಾರೆ. ಮುಖ್ಯಮಂತ್ರಿಗಳು ಪುನರ್ ಪರಿಶೀಲನೆ ನಡೆಸಿ, ಜಾತಿಗಣತಿ ವರದಿಗೆ ಮುಂದಾದರೆ ಜನರಿಗೆ ಒಳಿತಾಗಲಿದೆ. ಇಲ್ಲವಾದರೆ ಜಾತಿ ಸಂಕಷ್ಟಕ್ಕೆ ಕಾರಣವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಇತ್ಯರ್ಥ ಆಗಿರೋ ಅತ್ಯಾಚಾರ ಪ್ರಕರಣದ ಲಿಸ್ಟ್ ಕೇಳಿದ ವಿದ್ಯಾರ್ಥಿನಿ – ತಡಬಡಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ
ಈ ಜಾತಿಗಣತಿ ವರದಿಯನ್ನು ಸಾರಾಸಗಟಾಗಿ ಬಹಿಷ್ಕರಿಸಿ, ತಿರಸ್ಕಾರ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೆಲವೊಂದು ಜಾತಿಗೆ ಮೀಸಲು ನೀಡಬೇಕೆನ್ನುವುದು ಸರ್ಕಾರಕ್ಕೆ ಇದೆ. ಆದರೆ ಸಂವಿಧಾನದ ಆಶಯದಂತೆ ಜಾತಿಗಣತಿ ವರದಿ ವಿಚಾರದಲ್ಲಿ ಹೆಜ್ಜೆ ಇಡಬೇಕು. ಸಂವಿಧಾನದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ ನೀಡಬೇಕೆನ್ನುವುದನ್ನು ಉಲ್ಲೇಖವಿದೆ ಎನ್ನುವುದರ ಮೂಲಕ ರಾಜ್ಯ ಸರ್ಕಾರದ ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿದರು.