Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್

Cinema

ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್

Public TV
Last updated: September 11, 2025 12:42 pm
Public TV
Share
3 Min Read
ramesh aravinds daiji teaser unveiled 1
SHARE

ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ ನಟ ರಮೇಶ್ ಅರವಿಂದ್ (Ramesh Aravind) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ ದೈಜಿ (Daiji) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ (Teaser) ಬಿಡುಗಡೆ ನಂತರ ದೈಜಿ ಚಿತ್ರತಂಡದವರು ಮಾಧ್ಯಮದವರ ಜೊತೆಗೆ ಮಾತನಾಡಿದರು.

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ರವಿ ಕಶ್ಯಪ್, ಹತ್ತು ವರ್ಷಗಳ ಹಿಂದೆ ನಾನು, ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಈ ಚಿತ್ರದ ಬಗ್ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ಇದು ವಿದೇಶದಲ್ಲಿ ನಾನು ಕಂಡಿರುವ ನೈಜ ಘಟನೆ ಆಧರಿತ ಚಿತ್ರ. ಇದನ್ನು ನಾನು ಅಂದುಕೊಂಡಂತೆ ತೆರೆಗೆ ತಂದಿರುವ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಧನ್ಯವಾದ. ಇನ್ನೂ ಯಾವುದೇ ಹಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲದಂತೆ ಮೂಡಿಬಂದಿರುವ ನಮ್ಮ ದೈಜಿ ಚಿತ್ರವನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ತರುತ್ತೇವೆ ಎಂದರು.

ಸಂಖ್ಯಾಶಾಸ್ತ್ರದ ಪ್ರಕಾರ ಮೂರು ಅಂಕಿಗೂ, ನನಗೂ ಹಾಗೂ ಈ ಚಿತ್ರಕ್ಕೂ ನಂಟಿದೆ. ಹೇಗೆಂದರೆ, ಇದು ನನ್ನ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಅವರು ನಾಯಕರಾಗಿ ನಟಿಸಿರುವ ಮೂರನೇ ಸಿನಿಮಾ. ನಟಿ ರಾಧಿಕಾ ನಾರಾಯಣ್ ಅವರ ಜೊತೆಗೂ ಮೂರನೇ ಸಿನಿಮಾ. ನನ್ನ ಹಾಗೂ ನಿರ್ಮಾಪಕರ ಮೂರನೇ ಕಾಂಬಿನೇಶನ್ ನ ಚಿತ್ರವೂ ಹೌದು.(ಒಂದು ಕಿರುಚಿತ್ರ). ಹೇಗೆ ಮೂರರ ನಂಟನ್ನು ಸಾಕಷ್ಟು ಉದಾಹರಿಸಬಲ್ಲೆ. ನಿರ್ಮಾಪಕರು ವಿದೇಶದಲ್ಲಿ ತಾವು ಕಂಡ ನೈಜ ಘಟನೆಯನ್ನು ನನಗೆ ಹೇಳಿದರು. ಅವರು ಹೇಳಿದ ಈ ಕಥೆಯೇ ಈ ಚಿತ್ರಕ್ಕೆ ಸ್ಪೂರ್ತಿ. ನಂತರ ಈ ಕಥೆಗೆ ರಮೇಶ್ ಅರವಿಂದ್ ಅವರೆ ಸೂಕ್ತ ಎನಿಸಿ, ಅವರಿಗೆ ಕಥೆ ಹೇಳಿದಾಗ, ಅವರು ನಟಿಸಲು ಒಪ್ಪಿಕೊಂಡಿದ್ದು ಬಹಳ ಖುಷಿಯಾಯಿತು. ಸೂರ್ಯ ಎಂಬ ಪಾತ್ರದಲ್ಲಿ ರಮೇಶ್ ಅವರು ಕಾಣಿಸಿಕೊಂಡಿದ್ದಾರೆ. ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ ಹಾಗೂ ರಮೇಶ್ ಅವರ ತಮ್ಮನಾಗಿ ನಟ ದಿಗಂತ್ ಗಗನ್ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ದೈಜಿ ಎಂದರೆ ಪ್ರೇತಾತ್ಮಗಳ ದೈವ ಎಂದರ್ಥ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದ್ದು, ವರ್ಷದ ಕೊನೆ ಅಥವಾ ನೂತನ ವರ್ಷದ ಆರಂಭಕ್ಕೆ ದೈಜಿ ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದರು. ಇದನ್ನೂ ಓದಿ:  ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

 

ಹುಟ್ಟು – ಸಾವು ಬಾಳಿನಲ್ಲಿ ಎರಡು ಕೊನೆಗಳು ಎಂಬ ಸಾಲಿದೆ. ಆದರೆ ಇವೆರಡರ ಮಧ್ಯೆ ಏನಿದೆ? ಇವೆರಡರ ಮಧ್ಯೆ ಪ್ರೀತಿ ಇದೆ. ಒಂದು ವೇಳೆ ಸಾವೇ ಕೊನೆಯಾಗದಿದ್ದರೆ ಏನಿರುತ್ತದೆ? ಅದರ ಆಚೆಗೆ ಒಂದು ದುಷ್ಟ ಶಕ್ತಿ ಇರುತ್ತದೆ. ಆ ಶಕ್ತಿ ಈ ಪ್ರೀತಿಯನ್ನು ಹೊತ್ತುಕೊಂಡು ಹೊಗುತ್ತದೆ. ಇದೇ ನಾವು ಸಾಮಾನ್ಯ ಹಾರರ್ ಚಿತ್ರಗಳಲ್ಲಿ ಕಾಣುವುದು. ಆದರೆ ನಿರ್ದೇಶಕ ಆಕಾಶ್ ಶ್ರೀವತ್ಸ ಈ ರೀತಿಯ ಹಾರಾರ್ ಸಿನಿಮಾ ಮಾಡಿಲ್ಲ. ಈವರೆಗೂ ನಾನು ಸಾಕಷ್ಟು ಹಾರರ್ ಸಿನಿಮಾ ನೋಡಿದ್ದೇನೆ. ಆದರೆ ಈ ರೀತಿ ಕಥೆ ನಾನು ನೋಡಿಲ್ಲ. ಅಂತಹ ಚಿತ್ರ ಮಾಡಿದ್ದಾರೆ ನಿರ್ದೇಶಕ ವತ್ಸ ಅವರು. ನಾನು ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ. ಇನ್ನೂ, ನಿರ್ಮಾಪಕ ರವಿ ಕಶ್ಯಪ್ ಅವರ ಸಿನಿಮಾ ಪ್ರೀತಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ರಾಧಿಕಾ ನಾರಾಯಣ್ ಅವರಂತೂ ಮಹಾನಟಿ. ದಿಗಂತ್ ಅವರ ಲವಲವಿಕೆ ನನಗೆ ಬಹಳ ಇಷ್ಟ. ಈ ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. ಆದಷ್ಟು ಬೇಗ ದೈಜಿ ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದು ರಮೇಶ್ ಅರವಿಂದ್ ಹೇಳಿದರು.

ಭೂಮಿ ಪಾತ್ರದಲ್ಲಿ ನಟಿಸಿರುವುದಾಗಿ ನಟಿ ರಾಧಿಕಾ ನಾರಾಯಣ್ ಹಾಗೂ ಗಗನ್ ಪಾತ್ರದಲ್ಲಿ ಅಭಿನಯಿಸಿರುವಿದಾಗಿ ದಿಗಂತ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದರ ದೈಜಿ ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿರುವ ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ.

TAGGED:cinemaDaijiRamesh Aravindteaserಟೀಸರ್ದೈಜಿರಮೇಶ್ ಅರವಿಂದ್ಸಿನಿಮಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
54 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
1 hour ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?