ಬೆಳಗಾವಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರ ಮೇಲೆ ಐಟಿ ಇಲಾಖೆ ಕಣ್ಣಿಟ್ಟಿದ್ದು, ಗೋಕಾಕ್ ಕ್ಷೇತ್ರದ ಗ್ರಾಮಗಳಲ್ಲಿ ಐಟಿ ದಾಳಿ ನಡೆಸಿದೆ.
9 ಗ್ರಾಮಗಳಲ್ಲಿ 165 ಜನರಿಗೆ ಐಟಿ ನೋಟಿಸ್ ಜಾರಿ ಮಾಡಿದ್ದು, ರಾತ್ರೋರಾತ್ರಿ ಸ್ಥಳೀಯ ಮುಖಂಡರು ಊರು ಬಿಟ್ಟು ಪರಾರಿಯಾಗಿದ್ದಾರೆ. ಗುಜನಾಳ, ಅಕ್ಕತಂಗೇರಹಾಳ್, ಅಂಕಲಗಿ, ಮದವಾಲ್, ದಾಸನಟ್ಟಿ, ಕುಂದರಗಿ, ಮಲ್ಲಾಪೂರ ಗ್ರಾಮದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
- Advertisement 2
- Advertisement 3
ಶಾಸಕರ ಬೆಂಬಲಿಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 1500 ಎಕರೆ ಜಮೀನು, 200ಕ್ಕೂ ಹೆಚ್ಚು ಟ್ರ್ಯಾಕ್ಟರ್ ಸೇರಿದಂತೆ ಆಸ್ತಿ ದಾಖಲಾತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ರಮೇಶ್ ಜಾರಕಿಹೊಳಿ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಮೇಶ್ ಜಾರಕಿಹೊಳಿ ಅಜ್ಞಾತವಾಸಿಯಾಗಿದ್ದಾರೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv