ಕೊಲ್ಹಾಪುರ ಮಹಾಲಕ್ಷ್ಮಿ ಪಾದ ಮುಟ್ಟಿ ಹೇಳ್ತೀನಿ ನಾನು ಟಿಕೆಟ್ ಬೇಡಿಲ್ಲ : ರಮೇಶ್ ಜಾರಕಿಹೊಳಿ

Public TV
1 Min Read
Ramesh Jarkiholi 1

ಬೆಳಗಾವಿ: ಕೊಲ್ಹಾಪುರ ಮಹಾಲಕ್ಷ್ಮಿ ಪಾದ ಮುಟ್ಟಿ ಹೇಳುತ್ತೇನೆ ನಾನು ಟಿಕೆಟ್ ಬೇಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಡಿಸೆಂಬರ್ 10 ರಂದು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಆಗಮಿಸಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಕೊಲ್ಹಾಪುರದ ಮಹಾಲಕ್ಷ್ಮಿ ಪಾದಮುಟ್ಟಿ ಹೇಳುತ್ತೇನೆ ನಾನು ಸಹೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಎರಡನೇ ಟಿಕೆಟ್ ಬೇಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್

Ramesh Jarkiholi 1 1

ಮಹಾಂತೇಶ್ ಕವಟಗಿಮಠ ಮೊದಲ ಸುತ್ತಿನಲ್ಲಿ ಗೆಲ್ಲಿಸಲು ಸಂಕಲ್ಪ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಏನು ಮಾಡಬೇಕೋ ಎಲ್ಲಾ ಮಾಡುತ್ತೇವೆ. ನವೆಂಬರ್ 29 ರಂದು ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ ಮನವೊಲಿಸುತ್ತೇನೆ. ಕಾಂಗ್ರೆಸ್ ಸೋಲಿಸಲು ಏನು ತಯಾರಿ ಮಾಡಬೇಕು ತಯಾರಿ ಮಾಡಿಕೊಳ್ಳುತ್ತೇವೆ. ವಿವೇಕರಾವ ಪಾಟೀಲ್ ಆದಷ್ಟು ಬೇಗ ಬಿಜೆಪಿ ಸೇರುತ್ತಾರೆ. ಎರಡು ವೋಟ್ ಇದ್ದು ಒಂದು ಲಖನ್ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *