ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಈ ಹಿಂದೆ ಮಂತ್ರಿಯಾಗಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಮೊದಲು ಇದ್ದಂತವರು, ಇದೀಗ ಪಕ್ಷವನ್ನು ಕೂಡ ಕಟ್ಟುತ್ತಿದ್ದಾರೆ ಅವರನ್ನು ಮತ್ತೆ ಸಚಿವರನ್ನಾಗಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ – ಎಚ್ಡಿಕೆಯ ದ್ವಿಪತ್ನಿತ್ನ ವಿಚಾರ ಪ್ರಸ್ತಾಪಿಸಿ ಕಾಲೆಳೆದ ಬಿಜೆಪಿ
ಹಲವಾರು ರಾಜಕೀಯ ವಿದ್ಯಮಾನಗಳಿಂದ ಜಾರಕಿಹೊಳಿ ಮೇಲೆ ಆರೋಪಗಳು ಬಂದಿತ್ತು. ಈ ಹಿಂದೆ ನಡೆದಂತಹ ಘಟನೆಯ ಬಗ್ಗೆ ನನಗೆ ಗೊತ್ತು ಹಾಗಾಗಿ ನಾನು ಮೊದಲಿನಿಂದಲೂ ಅವರೊಂದಿಗೆ ನಿಂತಿದ್ದೇನೆ. ಇವತ್ತು ಕೂಡ ಅವರನ್ನು ಸಮರ್ಥಿಸಿಕೊಳ್ಳುತ್ತೇನೆ. ರಮೇಶ್ ಜಾರಕಿಹೊಳಿಗೆ ಉನ್ನತ ಸ್ಥಾನ ಕೊಟ್ರೆ ನಮ್ಮದು ಸ್ವಾರ್ಥವಿದೆ, ಅವರು ಮಂತ್ರಿ ಆದರೆ ನಮ್ಮ ಕ್ಷೇತ್ರದ ಕೆಲಸಗಳು ಆಗುತ್ತವೆ. ಅದಕ್ಕೆ ವರಿಷ್ಠರಲ್ಲಿ ಸಹ ವಿನಂತಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಆಶಾಭಾವನೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ 94ನೇ ಹುಟ್ಟಹಬ್ಬದ ಕೋರಿಕೆ ನೆರವೇರಿಸಿದ ಎಸ್.ಟಿ.ಸೋಮಶೇಖರ್