Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಿ, ಉದ್ದೇಶಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗುತ್ತಿದೆ: ರಮೇಶ್ ಕುಮಾರ್

Public TV
Last updated: September 26, 2021 4:36 pm
Public TV
Share
2 Min Read
klr ramesh kumar
SHARE

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಲಾಗಿದೆ. ಉದ್ದೇಶ ಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡಿಕಾರಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಷಕರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ತಮ್ಮಂತೆ ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಆಶಾವಾದ ಇರುತ್ತದೆ. ಈ ಕನಸಿನೊಂದಿಗೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಹೀಗೆ ಫೀಸ್ ಹೆಚ್ಚಾದಾಗ ಈ ರೀತಿ ಕೆಲವರು ಸಂಘಟಿತರಾಗುತ್ತಾರೆ ಎಂದರು.

ದೆಹಲಿಯ ಶಾಲೆಗಳು ಈ ಮಟ್ಟಕ್ಕೆ ಬೆಳೆಯಲು ಮನುಷ್ಯನ ಇಚ್ಛಾಶಕ್ತಿ ಕಾರಣ. ಅಲ್ಲಿನ ಸರ್ಕಾರ ಖಾಸಗಿ ಸಂಸ್ಥೆಗಳನ್ನು ಹೊಂದಿರುವವರನ್ನು ತಮ್ಮೊಂದಿಗೆ ಸೇರಿಸಿಕೊಂಡಿಲ್ಲ. ಆ ಶಕ್ತಿ ಕರ್ನಾಟಕದ ರಾಜಕಾರಣಕ್ಕೆ ಇಲ್ಲ. ನಮಗೆ ಸರ್ಕಾರಿ, ಖಾಸಗಿ ಎಲ್ಲಾ ಸಂಸ್ಥೆಗಳು ಬೇಕು ಎನ್ನುತ್ತಿದ್ದೇವೆ. ದೆಹಲಿಯಲ್ಲಿ ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ತೆಗೆದು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದನ್ನು ನಮ್ಮ ರಾಜ್ಯದಲ್ಲಿ ಜಾರಿಗೊಳಿಸಲು ನಮ್ಮ ರಾಜ್ಯದಲ್ಲಿ ಹಣವಿಲ್ಲವೆಂದಲ್ಲ, ಇಚ್ಛಾಶಕ್ತಿ ಬೇಕು ಎಂದರು. ಇದನ್ನೂ ಓದಿ:  ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

ದೇಶ, ಜನರನ್ನು ಪ್ರೀತಿಸುವ ನಾವು ಒಳ್ಳೆಯ ಬೆಳವಣಿಗೆಗಳನ್ನು ಬೆಂಬಲಿಸಬೇಕು. ಆಗ ಒಳ್ಳೆಯ ಜನ ಪ್ರತಿನಿಧಿಗಳಾಗಲು ಸಾಧ್ಯ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಹುಚ್ಚು ಎಂದು ಮೂದಲಿಸುವವರು ಇದ್ದಾರೆ. ಇಳ್ಳೆಯ ಉದ್ದೇಶ ಇರುವ ಈ ಹುಚ್ಚಿನಲ್ಲಿಯೇ ಇರಲು ನಾನು ಇಷ್ಟಪಡುತ್ತೇನೆ. ಈ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎನ್ನುವ ಭರವಸೆ ನೀಡಲು ಬಂದಿದ್ದೇನೆ. ಈ ಹೋರಾಟವನ್ನು ಬೆಳೆಸಿ ಒಂದು ಹೊಸ ರೂಪ ನೀಡೋಣ. ನಮ್ಮ ನಾಯಕರ ಅಲಕ್ಷ್ಯ ಮನೋಭಾವದಿಂದ ನಮ್ಮ ನೋವುಗಳನ್ನು ಕೇಳಲು ಅವರು ತಯಾರಿಲ್ಲ. ನಾವು ಅವರನ್ನು ಮನುಷ್ಯರನ್ನಾಗಿ ಮಾಡಬೇಕಿದೆ ಎಂದರು.

ನಿಷ್ಕ್ರಿಯಗೊಂಡಿದ್ದ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಶಾಸನಕ್ಕೆ ಮರುಜೀವ ನೀಡಲು ನಾನು ಹೊರಟಾಗ ಎಲ್ಲ ಪಕ್ಷಗಳೂ ವಿರೋಧಮಾಡಿದವು. ನನ್ನ ಸ್ಥಿತಿ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡ ಅಭಿಮನ್ಯುವಿನಂತಾಗಿತ್ತು. ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಲಾಯಿತು. ನಮ್ಮ ಅಹವಾಲು ಇದ್ದದ್ದು ಆ ಶಾಸನದಲ್ಲಿ ಇದ್ದಂತೆ ಸಾವನ್ನಪ್ಪಿದ ರೋಗಿಯ ಮನೆಯವರಿಗೆ ಹಣದ ಅಗತ್ಯ ಇದ್ದಲ್ಲಿ ಹಣ ನೀಡಬೇಕು ಎಂಬುದು. ಮುಖ್ಯ ನ್ಯಾಯಾಧೀಶರು ತಕ್ಷಣ ಆದೇಶ ನೀಡಿದರು. ನಮಗೆ ಇನ್ನೊಬ್ಬರ ಸಾವಿನ ಬಗ್ಗೆ ಕರುಣೆಯೇ ಇಲ್ಲದಂತಾಗಿದೆ ಎಂದರು. ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

ಇದೇ ರೀತಿ ಎಲ್ಲ ಪಕ್ಷಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ನಾಯಕರು ಇದ್ದಾರೆ. ಹೀಗಾಗಿ ಇವರು ಪೋಷಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಇದಕ್ಕೆ ವ್ಯಾಪಕ ಚಳುವಳಿಯ ಅಗತ್ಯವಿದೆ. ನಾವು ಕೇಳಬೇಕಾಗಿರುವುದು ಇಷ್ಟೇ, ದೆಹಲಿಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಆಗಿದ್ದು ನಮ್ಮಲ್ಲಿ ಯಾಕೆ ಸಾಧ್ಯವಿಲ್ಲ? ನಮ್ಮ ನಾಯಕರಲ್ಲಿ ಇಷ್ಟನ್ನೇ ಕೇಳಬೇಕಿದೆ. ನನಗೆ ದೇಶ, ಜನ ಮುಖ್ಯ, ಹಾಗಾಗಿ ಒಳ್ಳೆಯದನ್ನು ಬೆಂಬಲಿಸುತ್ತಿದ್ದೇನೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೊಳಿಸಬೇಕು. ಫೀಸ್ ಹೆಚ್ಚಳವನ್ನು ಪ್ರಶ್ನಿಸಬೇಕು. ಇದಕ್ಕಾಗಿ ನಿರಾಶರಾಗದೆ ಹೋರಾಡಬೇಕು. ಆಮ್ ಆದ್ಮಿ ಪಾರ್ಟಿಯ ಸಂಗಾತಿಗಳ ಬಗ್ಗೆ ನನಗೆ ಹೆಮ್ಮೆ ಇದೆ. ಕಮಿಷನ್ ಗಾಗಿ ಟೊಪಿ ಹಾಕಿಕೊಂಡು ಪಾರ್ಟಿಯನ್ನು ಸೇರಿಲ್ಲ. ನೀವು ಭಾರತೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದೀರಿ. ನಾನು ಇಲ್ಲಿಗೆ ಬಂದಿರುವುದು ಆಮ್ ಆದ್ಮಿಯ ಜೊತೆಗೆ ಇರುಲು. ಪಾರ್ಟಿ ಯಾವುದೇ ಆದರೂ ಆಮ್ ಆದ್ಮಿಯ ಸೇವೆ ಮಾಡಬೇಕು ಎಂದರು.

TAGGED:aapPublic TVRamesh Kumarಎಎಪಿಪಬ್ಲಿಕ್ ಟಿವಿರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

SATISH JARKIHOLI 1
Districts

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

Public TV
By Public TV
7 minutes ago
Air India Flight
Latest

ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Public TV
By Public TV
14 minutes ago
Yellow Line
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

Public TV
By Public TV
35 minutes ago
Haveri Bus Accident
Crime

ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

Public TV
By Public TV
1 hour ago
Delhi Judge House Fire
Latest

ನ್ಯಾ.ವರ್ಮಾ ವಾಗ್ದಂಡನೆ ಪ್ರಕ್ರಿಯೆಗೆ 200 ಹೆಚ್ಚು ಸಂಸದರ ಸಹಿ – ವಜಾ ಹೇಗೆ ಮಾಡಲಾಗುತ್ತೆ?

Public TV
By Public TV
1 hour ago
Nimisha Priya
Crime

ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?