ಇದನ್ನ ಸರ್ಕಾರ ಅಂತಾ ಕರೀತಿವಾ..ಈ ಸೌಭಾಗ್ಯಕ್ಕೆ ಮಂತ್ರಿಯಾಗ್ಬೇಕಾ?- ಸಚಿವ ರಮೇಶ್ ಕುಮಾರ್ ಬೇಸರ

Public TV
1 Min Read
RAMESHKUMAR

ಕೋಲಾರ: ಕೆಪಿಎಂಇ ಮಸೂದೆಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಅರೋಗ್ಯ ಸಚಿವ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಣ ಖರ್ಚು ಮಾಡಿ ರೋಗಿಯ ಚಿಕಿತ್ಸೆ ಫಲಿಸದೆ ಪ್ರಾಣ ಹೋದಾಗ ಶವ ನೀಡಲು ಖಾಸಗಿ ಆಸ್ಪತ್ರೆಯವರು ಹಣ ಕೇಳ್ತಾರೆ. ಇತ್ತ ಹಣನೂ ಹೊಯ್ತು. ಜೀವವು ಹೋಯ್ತು. ಇದನ್ನ ಸರ್ಕಾರ ಅಂತಾ ಕರೆತ್ತೀವಾ? ಇದು ಒಂದು ರಾಜ್ಯನಾ? ಈ ಸೌಭಾಗ್ಯಕ್ಕೆ ನಾನು ಮಂತ್ರಿಯಾಗಿರಬೇಕಾ? ಅಂತ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಗೆ ಹೆದರಿ ಮಸೂದೆ ಹಿಂದಕ್ಕೆ ಪಡೆದ್ರೆ ಮುಂದೆ ಯಾವುದೇ ಕಾಯ್ದೆ ತರಲು ಸಾಧ್ಯವಿಲ್ಲ: ರಮೇಶ್ ಕುಮಾರ್

RAMESH KUMAR 1

ಇಂತಹ ನೋವನ್ನು ಕರ್ನಾಟಕದ ಆನೇಕ ಕುಟುಂಬಗಳು ಅನುಭವಿಸಿವೆ. ರೋಗಿಯನ್ನ ಬದುಕಿಸಿಕೊಳ್ಳಬೇಕು ಅಂತಾ ಪ್ರಾಣ ಒತ್ತೆ ಇಟ್ಟು ಸಾಲ ಮಾಡಿ ಭಿಕ್ಷೆ ಬೇಡಿ ಹಣ ಕೊಟ್ಟಿರುತ್ತೀರಾ. ಆದ್ರೆ ಶವದ ಎದುರು ಮೊದಲು ನಮ್ಮ ಹಣ ಕೊಡಿ ಎನ್ನುವುದು ಒಂದು ವೈದ್ಯ ವೃತ್ತಿನಾ? ದಯವಿಟ್ಟು ನಿಮ್ಮ ಕಾಲಿಗೆ ನಮಸ್ಕಾರ ಹಾಕುವೇ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ವೈದ್ಯ ವೃತ್ತಿಯ ಪಾವಿತ್ರತೆ ಕಾಪಾಡಿಕೊಳ್ಳಿ ಎಂದು ನೋವಿನಿಂದ ಸಚಿವರು ನುಡಿದರು.

ಇದನ್ನೂ ಓದಿ: ವಿಧೇಯಕ ಮಂಡನೆಯಾಗದಿದ್ರೆ ಸಚಿವ ಸ್ಥಾನದಲ್ಲಿ ಇರಲ್ಲ- ರಮೇಶ್ ಕುಮಾರ್

RAMESH

RAMESH 2

Share This Article
Leave a Comment

Leave a Reply

Your email address will not be published. Required fields are marked *