ಕನ್ನಡದ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ನಿರ್ದೇಶಕರಾಗಿ ಲಾಂಚ್ ಆಗಲಿದ್ದಾರೆ ಎಂದು ಮೊನ್ನೆಯಷ್ಟೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಅದೀಗ ನಿಜವಾಗಿದೆ. ಶಿವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದ ಮೂಲಕ ಅರ್ಜುನ್ ಜನ್ಯ ನಿರ್ದೇಶಕರಾಗುವುದು ಪಕ್ಕಾ ಆಗಿದೆ. ಕನ್ನಡದ ಹೆಸರಾಂತ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಅವರನ್ನು ನಿರ್ದೇಶಕನನ್ನಾಗಿ ಲಾಂಚ್ ಮಾಡುತ್ತಿದ್ದಾರೆ.
ವಿ.ಹರಿಕೃಷ್ಣ ಸಂಗೀತ ನಿರ್ದೇಶನದಿಂದ ಸಿನಿಮಾ ನಿರ್ದೇಶಕನಾಗಿ ಬದಲಾಗುತ್ತಿದ್ದಂತೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುವಲ್ಲಿ ಸಖತ್ ಬ್ಯುಸಿಯಾಗಿದ್ದರು. ಈ ನಡುವೆಯೂ ಅವರು ಸುಂದರವಾದ ಕಥೆಯೊಂದನ್ನು ಬರೆದಿದ್ದಾರಂತೆ. ತಾವೇ ಬರೆದ ಕಥೆಯನ್ನೇ ಸಿನಿಮಾ ಮಾಡುವುದಾಗಿ ಆಪ್ತರೊಂದಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ಒಲವೇ ಜೀವನ ಲೆಕ್ಕಾಚಾರ ಅಂತಿದ್ದಾರೆ ಯುವ ಜೋಡಿ
ಶಿವರಾಜ್ ಕುಮಾರ್ ಅವರಿಗಾಗಿ ಈ ಕಥೆಯನ್ನು ಅರ್ಜುನ್ ಜನ್ಯ ಬರೆದಿದ್ದು, ಶಿವಣ್ಣನಿಗೆ ಕಥೆಯನ್ನೂ ಹೇಳಿದ್ದಾರಂತೆ. ಇತ್ತೀಚೆಗೆ ಶಿವರಾಜ್ ಕುಮಾರ್ ನಟನೆಯ ಬಹುತೇಕ ಚಿತ್ರಗಳಿಗೆ ಅರ್ಜುನ್ ಜನ್ಯ ಮ್ಯೂಸಿಕ್ ಮಾಡಿದ್ದಾರೆ. ಹಿಟ್ ಹಾಡುಗಳನ್ನೂ ಕೊಟ್ಟಿದ್ದಾರೆ. ಅಲ್ಲದೇ, ಒಂದಷ್ಟು ಸಿನಿಮಾಗಳಿಗೆ ಅರ್ಜುನ್ ಬಂಡವಾಳವನ್ನೂ ಹೂಡಿದ್ದಾರೆ. ಅನೇಕ ವಿಭಾಗಗಳಲ್ಲಿ ಪರಿಣಿತಿ ಪಡೆದಿರುವುದರಿಂದ ನಿರ್ದೇಶಕರಾಗಿ ಇಲ್ಲಿಯೂ ಹೆಸರು ಮಾಡುವ ಕನಸು ಇವರದ್ದು.