ರಾಮನಗರ: ಪ್ರೀತಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳ ಬಳಿ ನಡೆದಿದೆ.
ರವಿ (27) ಕೊಲೆಯಾದ ದುರ್ದೈವಿ. ಕೊಲೆಯಾದ ರವಿ ಮಾನಗಲ್ ನಿವಾಸಿಯಾಗಿದ್ದು, ಸಣ್ಣ ಮಟ್ಟದ ಕಾಮಗಾರಿಗಳ ಗುತ್ತಿಗೆದಾರನಾಗಿದ್ದನು. ರವಿ ತನ್ನ ಸಂಬಂಧಿ ಯುವತಿಯನ್ನು ಪ್ರೀತಿಸುತ್ತಿದ್ದನು. ಇವರಿಬ್ಬರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕುಟುಂಬಸ್ಥರ ವಿರೋಧದ ನಡುವೆಯೂ ಇಬ್ಬರು ತಮ್ಮ ಪ್ರೀತಿಯನ್ನು ಮುಂದುವರಿಸಿದ್ದಾರೆ.
ಯುವತಿಯ ಸಂಬಂಧಿಕರು ಭಾನುವಾರ ರಾತ್ರಿ ರವಿಯನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇಂದು ರಸ್ತೆಯಲ್ಲಿ ಯುವಕನ ಶವ ಸಾರ್ವಜನಿಕರ ಕಣ್ಣಿಗೆ ಬಿದಿದ್ದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ವಿಷಯ ತಿಳಿದು ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.