ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ (Ambareesh) ನಿಧನ ಹೊಂದಿದ್ದಾಗ ನಟಿ ರಮ್ಯಾ ಅಂತಿಮ ದರ್ಶನಕ್ಕೆ ಬರದಿರುವುದು ಭಾರೀ ಸುದ್ದಿಯಾಗಿತ್ತು. ಅಲ್ಲದೆ ಅಂಬಿ ಅಭಿಮಾನಿಗಳು ಕೂಡ ರಮ್ಯಾ (Ramya) ವಿರುದ್ಧ ಕಿಡಿಕಾರಿದ್ದರು. ಇದೀಗ ಸ್ವತಃ ನಟಿಯೇ ಈ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಾ ಅಂಬಿ ಸಾವಿಗೆ ಬರದ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಆಗ ಟ್ಯೂಮರ್ (Tumour) ಬಂದಿತ್ತು. ನಾನು ಆಗ ಸರ್ಜರಿ (Surgery) ಮಾಡಿಸಿದ್ದೆ. ನನಗೆ ಪಬ್ಲಿಕ್ ಆಗಿ ಬಂದು ದುಃಖ ಹಂಚಿಕೊಳ್ಳೋ ಅಭ್ಯಾಸ ಇಲ್ಲ. ಬೇರೆ ಅವರು ಕ್ಯಾಮೆರಾ ಮುಂದೆ ಬಂದು ಹಂಚಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ನಾನು ಮಂಡ್ಯದವಳೇ, ಗೌಡ್ತಿ, ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ: ರಮ್ಯಾ
ನಾನು ಚಿಕ್ಕವಳಿಂದ ಸ್ವತಂತ್ರವಾಗಿ ಇದ್ದೇನೆ. ನಾನು ಏನೇ ಇದ್ದರೂ ಕೆಲಸದ ಬಗ್ಗೆ ಮಾತಾಡುತ್ತೇನೆ ಅಷ್ಟೇ. ಪರ್ಸನಲ್ ವಿಷಯಗಳನ್ನು ಮಾತನಾಡಲು ಹೋಗಲ್ಲ. ಹೀಗಾಗಿ ಎಲ್ಲರೂ ಏನೇನೋ ಹಬ್ಬಿಸುತ್ತಾರೆ. ಅಪಪ್ರಚಾರ ಮಾಡಿರುವುದು ನನಗೆ ಬೇಸರವಾಗಿದೆ. ನನಗೆ ಗೊತ್ತು ನಾನು ಯಾರು ಅಂತಾ. ನನಗೆ ತುಂಬಾ ನೋವಾಗಿ ಕೆಲವರು ತಪ್ಪು ತಿಳಿದುಕೊಂಡಿದ್ದಾರೆ. ಟ್ಯೂಮರ್ ಬಳಿಕ ನಂಗೆ ತುಂಬಾ ತೊಂದರೆ ಆಯ್ತು. ಅದರ ಬಗ್ಗೆ ಹೇಳಿ ಸಿಂಪತಿ ತೆಗೆದುಕೊಳ್ಳೋಕೆ ಇಷ್ಟ ಇಲ್ಲ ಎಂದು ತಿಳಿಸಿದರು.