Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

Districts

ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

Public TV
Last updated: June 25, 2017 10:37 am
Public TV
Share
2 Min Read
UDP 4
SHARE

– ಮುಸ್ಲಿಮರಿಗೆ ಇಫ್ತಾರ್ ಕೂಟ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ ಮುಸ್ಲಿಮರು ಶ್ರೀಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳಿಂದ ಕರ್ಜೂರ ಪಡೆದು ತಿಂಗಳ ಉಪವಾಸಕ್ಕೆ ತೆರೆ ಎಳೆದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ 800 ವರ್ಷಗಳಿಂದ ನಿರಂತರ ಕೃಷ್ಣನ ಪೂಜೆ-ಭಜನೆ ಆರಾಧನೆ ನಡೆಯುತ್ತಾನೆ ಬಂದಿದೆ. ಆದ್ರೆ ಇಂದು ಕೃಷ್ಣನ ಪೂಜೆಯ ಜೊತೆ ಅಲ್ಲಾಹ್‍ನ ಆರಾಧನೆಯೂ ನಡೆಯಿತು. ರಂಜಾನ್ ತಿಂಗಳ ಉಪವಾಸ ಮುಗಿಸಿದ ಮುಸ್ಲಿಮರು ಕೃಷ್ಣಮಠದ ಅನ್ನಬ್ರಹ್ಮ ಛತ್ರದಲ್ಲಿ ಕೊನೆಯ ನಮಾಜ್ ಮಾಡಿ ಉಪವಾಸ ಅಂತ್ಯ ಮಾಡಿದರು. ಕೃಷ್ಣ ಮಠದ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟವನ್ನು ಪೇಜಾವರಶ್ರೀ ಆಯೋಜನೆ ಮಾಡಿದ್ದರು.

UDP 3

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಿಂದೂ- ಮುಸಲ್ಮಾನರು ಸೌಹಾರ್ದವಾಗಿ ಬಾಳಬೇಕು, ಬದುಕಬೇಕು. ಆದ್ರೆ ಇತ್ತೀಚೆಗೆ ಹಿಂಸೆಯ ಮಾರ್ಗದಲ್ಲಿ ಸಮಾಜ ನಡೆಯುತ್ತಿದೆ. ಹೀಗಾಗಿ ಸೌಹಾರ್ದದ ಕಾರ್ಯಕ್ರಮವನ್ನು ಮಠದಲ್ಲಿ ಇಟ್ಟುಕೊಳ್ಳಲಾಗಿದೆ. ಮಂಗಳೂರು- ಕಾಸರಗೋಡು- ಭಟ್ಕಳದಲ್ಲಿ ನಡೆದ ಇಸ್ಲಾಂ ಸಮ್ಮೇಳನಗಳಲ್ಲಿ ಕರೆಸಿ ನನ್ನನ್ನು ಆತ್ಮೀಯತೆಯಿಂದ ನೋಡಿಕೊಂಡಿದ್ದಾರೆ. ಪರ್ಯಾಯ ಸಂದರ್ಭ ಹೊರೆಕಾಣಿಕೆ ನೀಡಿದ್ದರು. ಕೃಷ್ಣ ಮಠಕ್ಕೆ ಮುತ್ತಿಗೆ ಹಾಕಲು ಬರುತ್ತೇವೆ ಎಂದಾಗ ಅದಕ್ಕೆ ವಿರುದ್ಧ ನಿಂತವರಲ್ಲಿ ಮುಸ್ಲಿಮರೂ ಇದ್ದರು. ಹಿಂದೂಗಳಿಗೆ ಹಿಂಸೆಯಾದಾಗ ಮುಸ್ಲಿಮರು- ಮುಸ್ಲಿಮರಿಗೆ ಸಮಸ್ಯೆಯಾದಾಗ ಹಿಂದೂಗಳು ಸಹಾಯಕ್ಕೆ ಮುಂದಾಗಬೇಕು ಎಂದು ಕರೆ ನಿಡಿದರು. ಭಾರತ ಶಾಂತಿಯ- ಸೌಹಾರ್ದತೆಯ ತಾಣವಾಗಬೇಕು. ಕರಾವಳಿಯಲ್ಲಿ ಶಾಂತಿ ಬೆಳೆಯುವ-ಬೆಳೆಸುವ ಅಗತ್ಯವಿದೆ. ನಮಃ- ನಮಾಜ್ ಒಂದೇ ಎಂದು ಶ್ರೀಗಳು ಹೇಳಿದರು.

ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉಪವಾಸವಿದ್ದ ಮುಸ್ಲಿಮರಿಗೆ ಕರ್ಜೂರ ನೀಡಿ ಉಪವಾಸ ಬಿಡಿಸಿದರು. ನಂತರ ಸ್ವತಃ ಸ್ವಾಮೀಜಿ ಫಲಾಹಾರವನ್ನ ಬಡಿಸಿದರು. ಅನ್ನಬ್ರಹ್ಮ ಛತ್ರದಲ್ಲಿ ಹಣ್ನು ಹಂಪಲು-ಸಮೋಸ ನೀಡಿ ಉಪವಾಸ ಬಿಡುವ ಕ್ರಮ ನಡೆಯಿತು. ಇದಾಗಿ ಎಲ್ಲಾ ಮುಸ್ಲಿಮರಿಗೆ ಛತ್ರದಲ್ಲೇ ಸಾಮೂಹಿಕ ನಮಾಜ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಛತ್ರದಲ್ಲೇ ಸಾಮೂಹಿಕ ನಮಾಜ್ ಮಾಡಿದ ಮುಸ್ಲಿಂ ಧರ್ಮೀಯರಿಗೆ ಆದೇಶ ಬಂದಿತ್ತು. ಕಾರವಾರ ಜಿಲ್ಲೆಯ ಭಟ್ಕಳದಲ್ಲಿ ಚಂದ್ರ ಕಾಣಿಸಿಕೊಂಡ ಕಾರಣ ನಾಳೆಯೇ ಈದುಲ್ ಫಿತ್ರ್ ಎಂದು ಖಾಜಿಯವರು ಘೋಷಿಸಿದ್ದಾರೆ. ಈ ಎರಡು ಸಂತಸಗಳು ಒಟ್ಟೊಟ್ಟಿಗೆ ಆದವು.

UDP 1 1

ಮುಸ್ಲಿಂ ಸಮುದಾಯದ ಮುಖಂಡ ರಹೀಂ ಉಚ್ಚಿಲ ಮಾತನಾಡಿ, ಪೇಜಾವರಶ್ರೀ ಇಡೀ ವಿಶ್ವಕ್ಕೆ ಸ್ವಾಮೀಜಿ, ಇದು ಉಡುಪಿ ಕೃಷ್ಣಮಠದಿಂದ ವಿಶ್ವಕ್ಕೆ ಸಂದೇಶ ರವಾನೆಯಾಗಿದೆ. ಇಂದಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಇಫ್ತಾರ್‍ಗಳಿಗೆ ರಾಜಕೀಯ ಬಣ್ಣ ಬರುತ್ತಿದೆ. ಆದ್ರೆ ಮಠದಲ್ಲಿ ನಡೆದ ಇಫ್ತಾರ್ ವಿಭಿನ್ನ. ಮಾನವ ಜನಾಂಗ ಬೆಸೆಯುವ ಕೆಲಸ ಉಡುಪಿ ಮಠದಲ್ಲಿ ಆಗಿದೆ. ಸ್ವಾಮೀಜಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ದೇಶ ಮೂಲೆ ಮೂಲೆಗೆ ಇಂತಹ ಶಾಂತಿ ಸಂದೇಶ ತಲುಪಬೇಕು. ರಂಜಾನ್ ತಿಂಗಳ ಉಪವಾಸದ ಕೊನೆಯ ಉಪವಾಸವನ್ನು ಮಠದಲ್ಲಿ ಬಿಟ್ಟಿದ್ದೇವೆ ಎಂಬೂದು ದೈವೇಚ್ಛೆ. ಸಮಸ್ತ ಮುಸಲ್ಮಾನ ಸಮುದಾಯದಿಂದ ಪೇಜಾವರ ಮಠಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ದಲಿತ ಕೇರಿಗೆ ಭೇಟಿ ಕೊಡುವುದನ್ನು ಆರಂಭಿಸಿದ ಪೇಜಾವರಶ್ರೀಗೆ ತಮ್ಮದೇ ಸಮಾಜದಲ್ಲಿ ವಿರೋಧ ವ್ಯಕ್ತವಾಗಿತ್ತು. ಆದ್ರೆ ಹಿರಿಯ ಗುರುಗಳು ಅಂತ ಯಾರೂ ಬಹಿರಂಗವಾಗಿ ಈ ಬಗ್ಗೆ ಚಕಾರ ಎತ್ತಲ್ಲ. ಇದೀಗ ಪೇಜಾವರಶ್ರೀಗಳು ಕೃಷ್ಣಮಠದಲ್ಲೇ ಇಫ್ತಾರ್ ಕೂಟ ಏರ್ಪಡಿಸಿದ್ದಾರೆ. ಈ ಬಗ್ಗೆ ಹಿಂದೂ-ಮುಸ್ಲಿಂ ಸಮುದಾಯದಲ್ಲಿ ಏನೆಲ್ಲಾ ಅಭಿಪ್ರಾಯ ಬರುತ್ತೋ,..!? ಪ್ರಗತಿಪರರು ಈ ಬಗ್ಗೆ ಏನೆಂದು ಟೀಕಿಸುತ್ತಾರೋ ಎಂಬ ಕುತೂಹಲವಿದೆ.

UDP 2

UDP 7

UDP

vlcsnap 2017 06 25 09h54m36s222

vlcsnap 2017 06 25 09h55m43s131

 

TAGGED:iftharkalladkakrishna mattpublictvudupiಇಫ್ತಾರ್ಉಡುಪಿಕಲ್ಲಡ್ಕಕೃಷ್ಣ ಮಠಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
15 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
27 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?