‘ಗೋಮಾಂಸ ನನಗಿಷ್ಟ’ ಎಂದು ಹೇಳಿದ್ದ ರಣಬೀರ್ ಕಪೂರ್ ಸಿನಿಮಾಗೆ ಎದುರಾಯ್ತು ಸಂಕಷ್ಟ

Public TV
1 Min Read
ranbir kapoor 1

ಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್ ಗೆ ಬರಲು ಸಿದ್ಧತೆ ಮಾಡಿಕೊಂಡಿದೆ. ಆಲಿಯಾ ಭಟ್ ಗರ್ಭಿಣಿ ಆಗಿದ್ದರೂ, ಸಿನಿಮಾದ ಪ್ರಚಾರಕ್ಕಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗುತ್ತಿದ್ದಾರೆ. ರಣಬೀರ್ ಕೂಡ ನಾನಾ ರಾಜ್ಯಗಳ ಪ್ರವಾಸ ಮಾಡಿ, ಈ ಚಿತ್ರದ ಪ್ರಚಾರಕ್ಕೆ ಮುನ್ನುಡಿ ಬರೆದಿದ್ದಾರೆ. ಈ ಸಮಯದಲ್ಲಿ ಹಲವು ವರ್ಷಗಳಿ ಹಿಂದೆ ಸಂದರ್ಶನದಲ್ಲಿ ಹೇಳಿದ್ದ ಹೇಳಿ ಬ್ರಹ್ಮಾಸ್ತ್ರ ಸಿನಿಮಾಗೆ ಸಂಕಷ್ಟ ತಂದಿದೆ.

RANBIR

ತಮ್ಮದು ಮಾಂಸಪ್ರಿಯ ಕುಟುಂಬ. ಗೋಮಾಂಸ ಸೇರಿದಂತೆ ನಾನಾ ರೀತಿಯ ನಾನ್ ವೆಜ್ ತಿನ್ನುತ್ತೇವೆ. ಅದರಲ್ಲೂ ನನಗೆ ಗೋಮಾಂಸ ಅಂದರೆ ಇಷ್ಟ ಎಂದು ಹೇಳಿಕೊಂಡಿದ್ದಾರೆ. ಈ ಮಾತೇ ಅವರಿಗೆ ಮುಳುವಾಗಿದೆ. ಗೋವನ್ನು ದೇವರೆಂದು ಪೂಜಿಸುವವರು ಈ ಮಾತನ್ನು ಕೇಳಲು ಸಿದ್ಧರಿಲ್ಲ. ಹಾಗಾಗಿ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

Ranbir 2

ಇದು ಹತ್ತು ವರ್ಷಗಳ ಹಿಂದಿನ ವಿಡಿಯೋವಾಗಿದ್ದರೂ, ಆಗಿನ್ನೂ ಗೋಮಾಂಸ ನಿಷೇಧ ಇಲ್ಲದೇ ಇದ್ದರೂ ಈಗ ಆ ವಿಡಿಯೋವನ್ನು ವೈರಲ್ ಮಾಡಲಾಗುತ್ತಿದೆ. ಹಿಂದೂ ವಿರೋಧಿಗಳ ಸಿನಿಮಾವನ್ನು ನೋಡಬೇಡಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಲ್ಲದೇ, ಈ ಹಿಂದೆ ಆಲಿಯಾ ಭಟ್ ಆಡಿದ ಮಾತುಗಳು ಕೂಡ ಬೆಂಕಿಯಲ್ಲಿ ತುಪ್ಪು ಸುರಿದಂತಾಗಿವೆ. ಒಟ್ಟಿನಲ್ಲಿ ಬ್ರಹ್ಮಾಸ್ತ್ರ ಸಿನಿಮಾಗೆ ಎಲ್ಲ ಕಡೆಯಿಂದಲೂ ವಿಘ್ನ ಎದುರಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *