ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ತ್ರಿಸದಸ್ಯ ಸಮಿತಿ ರಚನೆ

Public TV
1 Min Read
bjp flag

ಬೆಂಗಳೂರು: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗಿದೆ. ಹೀಗಾಗಿ ಮುಖ್ಯಮಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭ್ಯರ್ಥಿ ಆಯ್ಕೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಿದ್ದಾರೆ.

ಬೃಹತ್, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸಿಎಂ ರಚಿಸಿದ ಸಮಿತಿಯ ನೇತೃತ್ವ ವಹಿಸಿಕೊಂಡಿದ್ದಾರೆ. ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ಸಿ.ಎಂ.ಉದಾಸಿ ಅವರು ಸಮಿತಿಯಲ್ಲಿದ್ದು, ಮೂವರು ನಾಯಕರು ವರದಿ ನೀಡಲಿದ್ದಾರೆ. ಈ ವರದಿಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಉಪಚುನಾವಣೆ ರಣಕಣ – ಯಾರ ವಿರುದ್ಧ ಯಾರು ಸ್ಪರ್ಧೆ? ಇಲ್ಲಿದೆ ಪೂರ್ಣ ಪಟ್ಟಿ

collage bsy r shankr

ಬಿಜೆಪಿ ನಾಯಕರು ರಾಣೆಬೆನ್ನೂರು ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ. ಸದ್ಯದ ಬೆಳವಣಿಗೆಯ ಪ್ರಕಾರ ಮಾಜಿ ಸಚಿವ ಆರ್.ಶಂಕರ್ ಅವರನ್ನು ಅಭ್ಯರ್ಥಿ ರೇಸ್‍ನಿಂದ ಹೊರಗುಳಿದಿದ್ದಾರೆ. ಬಿಜೆಪಿಯ ನಿರ್ಧಾರ ಆರ್.ಶಂಕರ್ ಅವರಿಗೆ ಶಾಕ್ ಕೊಟ್ಟಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಪರೇಷನ್ ಡಿಸಿಎಂಗೆ ಕೈ ಹಾಕಿತಾ ಕಾಂಗ್ರೆಸ್?

ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಸಜ್ಜನ್ ಜೊತೆ ಕೂಡ ಚರ್ಚಿಸುವಂತೆ ತ್ರಿ ಸದಸ್ಯ ಸಮಿತಿಗೆ ತಿಳಿಸಲಾಗಿದೆ. ಜೊತೆಗೆ ಇನ್ನೆರಡು ದಿನಗಳಲ್ಲಿ ವರದಿ ಕೊಡಲು ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

Share This Article