ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣ: ಇಂದು ಪೊಲೀಸ್ ಠಾಣೆಗೆ ಬರಲಿಲ್ಲ ನಟ

Public TV
1 Min Read
RANVEER SINGH

ಬಾಲಿವುಡ್ ನಟ ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರು ಪೊಲೀಸ್ ಠಾಣೆಗೆ ಹಾಜರಾಗಿ, ತನಿಖೆ ಎದುರಿಸಬೇಕಿತ್ತು. ಆಗಸ್ಟ್ 22 ರಂದು ಮುಂಬೈ ಠಾಣೆಗೆ ಬರುವಂತೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಆದರೆ, ರಣ್ವೀರ್ ಇವತ್ತು ಠಾಣೆಗೆ ಬಾರದೇ ತಪ್ಪಿಸಿಕೊಂಡಿದ್ದಾರೆ. ಇನ್ನೂ ಎರಡು ವಾರಗಳ ಸಮಯಾವಕಾಶವನ್ನು ಅವರು ಕೇಳಿದ್ದಾರೆ.

ranveer singh deepika padukone 5

ಮುಂಬೈ ಎನ್.ಜಿಓ ಸಂಸ್ಥೆಯೊಂದು ರಣ್ವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಪಾಲ್ಗೊಂಡಿದ್ದಕ್ಕೆ ದೂರು ದಾಖಲಿಸಿತ್ತು. ಇದೊಂದು ಮಹಿಳೆಯರಿಗೆ ಮಾಡುತ್ತಿರುವ ಅವಮಾನ ಎಂದು ದೂರಿನಲ್ಲಿ ದಾಖಲಾಗಿತ್ತು. ಈ ಸಂಬಂಧ ಆಗಸ್ಟ್ 12 ರಂದು ಮುಂಬೈ ಪೊಲೀಸರು ರಣ್ವೀರ್ ಸಿಂಗ್ ಗೆ ಸಮನ್ಸ್ ಜಾರಿ ಮಾಡಿದ್ದರು. ಠಾಣಾಧಿಕಾರಿಯ ಮುಂದೆ ಹಾಜರಾಗಬೇಕೆಂದು ತಿಳಿಸಿದ್ದರು. ಇದನ್ನೂ ಓದಿ:ಬಾಲಿವುಡ್ ರಾಧೆ ಆಲಿಯಾ ಭಟ್ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ!

RANVEER PIC

ತಾವು ಸತತವಾಗಿ ಶೂಟಿಂಗ್ ನಲ್ಲಿ ಬ್ಯುಸಿ ಆಗಿರುವ ಕಾರಣದಿಂದಾಗಿ ಪೊಲೀಸ್ ಸ್ಟೇಶನ್ ಗೆ ಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇನ್ನೂ ಎರಡು ವಾರಗಳ ಕಾಲ ಸಮಯ ಕೊಡಿ ಎಂದು ಠಾಣಾಧಿಕಾರಿಗೆ ಪತ್ರ ಬರೆದಿದ್ದಾರೆ ರಣ್ವೀರ್. ನಂತರದ ದಿನಗಳಲ್ಲಿ ಠಾಣೆಗೆ ಬರುವುದಾಗಿ ಅವರು ತಿಳಿಸಿದ್ದಾರೆ. ಈ ಫೋಟೋ ಶೂಟ್ ವೈರಲ್ ಆಗುತ್ತಿದ್ದಂತೆಯೇ ಇನ್ನೂ ಕೆಲವ ನಟರು ಇದೇ ಹಾದಿಯನ್ನು ತಿಳಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *