Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

Bengaluru City

ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

Public TV
Last updated: August 2, 2025 4:37 pm
Public TV
Share
3 Min Read
Prajwal Revanna 2
SHARE

-5 ಲಕ್ಷ ರೂ.ದಂಡ ವಿಧಿಸಿದ ನ್ಯಾಯಾಲಯ

ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಕೆ.ಆರ್ ನಗರದಲ್ಲಿ (KR Nagara) ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.

ಐಪಿಸಿ ಸೆಕ್ಷನ್ 376 (2) (K), 376 (2) (N) ಅಡಿಯಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಲ್ಲದೇ 5 ಲಕ್ಷ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತೆಗೂ 7 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಪ್ರಜ್ವಲ್‌ ರೇವಣ್ಣಗೆ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಇಂದಿನಿಂದಲೇ ರೇಪಿಸ್ಟ್‌ ಪ್ರಜ್ವಲ್‌ಗೆ ಜೀವನಪರ್ಯಂತ ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಶುಕ್ರವಾರ ದೋಷಿ ಎಂದು ತೀರ್ಪು ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್‌, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್‌ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟರು.

ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಅಂತ ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ. ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಅಂತ ನ್ಯಾಯಾಧೀಶರ ಎದುರು ಪ್ರಜ್ವಲ್‌ ಕಣ್ಣೀರಿಟ್ಟು ಬೇಡಿಕೊಂಡಿದ್ದರು.

ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್‌ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದರು.

ಏನಿದು ಪ್ರಕರಣ?‌
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್‌ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.

TAGGED:bengaluruhassanprajwal revannarape caseಪ್ರಜ್ವಲ್ ರೇವಣ್ಣಬೆಂಗಳೂರುರೇಪ್‌ ಕೇಸ್‌ಹಾಸನ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
11 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
23 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
59 minutes ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
1 hour ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
1 hour ago
Pakistan Cricket Team
Cricket

T20 World Cup | ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ನಿರ್ಧಾರ ಪೆಂಡಿಂಗ್‌ ಇಟ್ಟ ಪಾಕ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?