Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

Latest

ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

Public TV
Last updated: May 4, 2024 1:36 pm
Public TV
Share
2 Min Read
RAHUL SIDDARAMAIAH
SHARE

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸುದೀರ್ಘ ಪತ್ರ ಬರೆದಿದ್ದಾರೆ.

ಪ್ರಜ್ವಲ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕರನ್ನ ಕ್ರೂರವಾಗಿ ಪ್ರಜ್ವಲ್ ನಡೆಸಿಕೊಂಡಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿವಾಸಕ್ಕೆ ಎಸ್‍ಐಟಿ ತಂಡ – ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು

PRAJWAL REVANNA 2 1

ಹಾಸನದ ಹಾಲಿ ಸಂಸದರು ನಡೆಸಿದ ಭೀಕರ ಲೈಂಗಿಕ ದೌರ್ಜನ್ಯದ ಬಗ್ಗೆ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಪ್ರಜ್ವಲ್ ರೇವಣ್ಣ ಹಲವಾರು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ಚಿತ್ರೀಕರಿಸಿದ್ದಾರೆ. ಅವರನ್ನು ಸಹೋದರ ಮತ್ತು ಮಗನಂತೆ ನೋಡುತ್ತಿದ್ದ ಅನೇಕರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ನಮ್ಮ ತಾಯಂದಿರು ಮತ್ತು ಸಹೋದರಿಯರ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಸಂಭವನೀಯ ಶಿಕ್ಷೆ ಆಗಬೇಕಿದೆ ಎಂದು ತಿಳಿಸಿದ್ದಾರೆ.

ಇನ್ನೂ ಆಘಾತಕಾರಿ ಸಂಗತಿಯೆಂದರೆ, ಈ ಭೀಕರ ಆರೋಪಗಳನ್ನು ಬಿಜೆಪಿಯ ಹಿರಿಯ ನಾಯಕತ್ವದ ಗಮನಕ್ಕೆ ತಂದರೂ, ಪ್ರಧಾನಿ ಸಾಮೂಹಿಕ ಅತ್ಯಾಚಾರಿಗಾಗಿ ಪ್ರಚಾರ ಮಾಡಿದರು. ಅರ್ಥಪೂರ್ಣ ತನಿಖೆಯನ್ನು ಹಳಿತಪ್ಪಿಸಲು ಭಾರತದಿಂದ ಪಲಾಯನ ಮಾಡಲು ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಅವಕಾಶ ನೀಡಿದೆ. ಈ ಅಪರಾಧಗಳ ಆಳವಾದ ವಿಕೃತ ಸ್ವರೂಪ ತಿಳಿದೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರು ಸಹಾಯ ಮಾಡುವುದು ಖಂಡನಾರ್ಯವಾಗಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ

h.d.revanna prajwal revanna

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಈ ಪ್ರಮಾಣದಲ್ಲಿ ಮೌನವಾಗಿರುವ ಜನಪ್ರತಿನಿಧಿಯನ್ನು ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ನೋಡಿಲ್ಲ. ಹರಿಯಾಣದ ನಮ್ಮ ಕುಸ್ತಿಪಟುಗಳಿಂದ ಹಿಡಿದು ಮಣಿಪುರದ ನಮ್ಮ ಸಹೋದರಿಯರವರೆಗೂ ಭಾರತೀಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಪ್ರಧಾನಿಯವರು ಮೌನವಾಗಿರುವ ಮೂಲಕ ಅಪರಾಧಿಗಳಿಗೆ ಬೆಂಬಲದ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನ್ಯಾಯಕ್ಕಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದಾಗಿದೆ. ಗಂಭೀರ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿ ಅವರನ್ನು ಶೀಘ್ರವಾಗಿ ಭಾರತಕ್ಕೆ ಹಸ್ತಾಂತರಿಸುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಬೇಕು‌ ಎಂದು ಪತ್ರದಲ್ಲಿ ಬರೆದಿದ್ದಾರೆ.

TAGGED:prajwal revannaRahul Gandhisiddaramaiahಪ್ರಜ್ವಲ್ ರೇವಣ್ಣರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories

You Might Also Like

udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
8 hours ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
8 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
8 hours ago
Janardhana Reddy
Bellary

ರಾಜಶೇಖರ್ ಸಾವು ಆಕಸ್ಮಿಕ ಅಲ್ಲ, ಉದ್ದೇಶಪೂರ್ವಕ ಕೊಲೆ: ಜನಾರ್ದನ ರೆಡ್ಡಿ

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 08-01-2026

Public TV
By Public TV
9 hours ago
pm modi pejawar seer
Latest

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ನಿಲ್ಲಿಸಲು ಕ್ರಮವಹಿಸಿ: ಮೋದಿಗೆ ಪೇಜಾವರ ಶ್ರೀ ಪತ್ರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?