ರಾಜ್ಯ ಸರ್ಕಾರದ ವಿರುದ್ಧ ರತ್ನಪ್ರಭಾ ಗಂಭೀರ ಆರೋಪ

Public TV
1 Min Read
ratnaprabha

ಕಲಬುರಗಿ: ರಾಜ್ಯ ಸರ್ಕಾರದ ವಿರುದ್ಧ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮುಧೋಳದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ ಎರಡೂ ಪಕ್ಷಗಳು ದಲಿತರ ಪರ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಆದರೆ ನಿಜಾಂಶದಲ್ಲಿ ದಲಿತರನ್ನು ಕಂಡರೆ ಎರಡೂ ಪಕ್ಷದ ನಾಯಕರ ಮನಸ್ಸಿನಲ್ಲಿಯೂ ದ್ವೇಷವಿದೆ. ನಾನು ದಲಿತೆ ಎಂಬ ಕಾರಣಕ್ಕೆ ನನ್ನನ್ನು ತುಳಿಯಲಾಗಿದೆ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ರು.

ratnaprabha

2014ರಲ್ಲಿಯೇ ನಾನು ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕವಾಗಬೇಕಿತ್ತು. ಆದ್ರೆ ನನಗೆ ಸುಳ್ಳು ಹೇಳಿ ಮೋಸ ಮಾಡಿ ಆ ಹುದ್ದೆ ನೀಡಲಿಲ್ಲ. ಕಾಟಾಚಾರ ಎನ್ನುವಂತೆ ಚುನಾವಣೆ ಇರುವಾಗ 4 ತಿಂಗಳ ಮಟ್ಟಿಗೆ ಸಿಎಸ್ ಹುದ್ದೆಗೆ ನೇಮಿಸಿದ್ದರು. ಈ ಮೂಲಕ ಹಿಂದಿನ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸಿದೆ ಎಂದು ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *