Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರತ್ನಮಂಜರಿ ಬಗ್ಗೆ ನಿರ್ಮಾಪಕ ಸಂದೀಪ್ ಹೇಳಿದ ರೋಚಕ ಸ್ಟೋರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರತ್ನಮಂಜರಿ ಬಗ್ಗೆ ನಿರ್ಮಾಪಕ ಸಂದೀಪ್ ಹೇಳಿದ ರೋಚಕ ಸ್ಟೋರಿ!

Bengaluru City

ರತ್ನಮಂಜರಿ ಬಗ್ಗೆ ನಿರ್ಮಾಪಕ ಸಂದೀಪ್ ಹೇಳಿದ ರೋಚಕ ಸ್ಟೋರಿ!

Public TV
Last updated: May 2, 2019 4:41 pm
Public TV
Share
3 Min Read
ratnamanjari 3
SHARE

ಬೆಂಗಳೂರು: ಈಗ ಪ್ರೇಕ್ಷಕ ವಲಯವನ್ನು ಹಾಡುಗಳಿಂದಲೇ ಆವರಿಸಿಕೊಂಡು ಥೇಟರಿನತ್ತ ಮುಖ ಮಾಡಿರುವ ಚಿತ್ರ ರತ್ನ ಮಂಜರಿ. ಪ್ರಸಿದ್ಧ್ ನಿರ್ದೇಶನ ಮಾಡಿರೋ ಈ ಚಿತ್ರವನ್ನು ಮೂವರು ಸಮಾನ ಮನಸ್ಕ ಎನ್ ಆರ್ ಐಗಳು ಸೇರಿ ನಿರ್ಮಾಣ ಮಾಡಿದ್ದಾರೆ. ಇದರಲ್ಲಿ ಎಸ್ ಸಂದೀಪ್ ಕುಮಾರ್ ಕೂಡಾ ಒಬ್ಬರು. ಐಟಿ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರೋ ಅವರು ಎರಡು ಸಾಫ್ಟ್‍ವೇರ್ ಕಂಪೆನಿಗಳ ಮಾಲೀಕರು. ಆದರೂ ಕನ್ನಡತನ ಮತ್ತು ಸಿನಿಮಾ ವ್ಯಾಮೋಹವೆಂಬುದು ರತ್ನಮಂಜರಿಯೆಂಬ ವಿಭಿನ್ನ ಚಿತ್ರವೊಂದನ್ನು ನಿರ್ಮಾಣ ಮಾಡಲು ಅವರನ್ನು ಪ್ರೇರೇಪಿಸಿದೆ.

RATNAMANJARAI

ಎಸ್ ಸಂದೀಪ್ ವಿದೇಶಗಳಲ್ಲಿ ಎರಡು ಸಾಫ್ಟ್ ವೇರ್ ಕಂಪೆನಿಗಳ ಒಡೆಯ. ಬೇರೆ ದೇಶಗಳಲ್ಲಿ ಬದುಕೋ ಬಹುತೇಕ ಕನ್ನಡಿಗರಂತೆ ಸದಾ ತಾಯ್ನೆಲದ ಧ್ಯಾನ ಹೊಂದಿರೋ ಅವರ ಪಾಲಿಗೆ ಆರಂಭದಿಂದಲೂ ಕೂಡಾ ಸಿನಿಮಾ ಕ್ಷೇತ್ರ ಸೆಳೆದುಕೊಂಡಿತ್ತು. ತಾಯ್ನಾಡಿನ ಜನರೊಂದಿಗೆ ಮುಖಾಮುಖಿಯಾಗಲು ಸಿನಿಮಾ ಪರಿಣಾಮಕಾರಿ ಮಾಧ್ಯಮ ಎಂದೂ ಅವರಿಗನ್ನಿಸಿತ್ತು. ಆದರೆ ಬಹು ಕಾಲದ ನಂತರ ಎನ್ ಆರ್ ಐಗಳ ಕೂಟದಿಂದಲೇ ಅವರ ಕನಸು ನನಸಾಗಿದೆ. ಅದರ ಫಲವಾಗಿಯೇ ಸಂದೀಪ್ ನಿರ್ಮಾಪಕರಲ್ಲೊಬ್ಬರಾಗಿರೋ ರತ್ನಮಂಜರಿ ತೆರೆ ಕಾಣಲು ರೆಡಿಯಾಗಿದೆ.

ಐಟಿ ವಲಯದಲ್ಲಿಯೇ ಇರುವ ನಟರಾಜ್ ಹಳೇಬೀಡು, ಡಾ. ನವೀನ್ ಜೊತೆ ಸೇರಿ ಸಂದೀಪ್ ಅವರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇವರೆಲ್ಲರೂ ನಿರ್ದೇಶಕ ಪ್ರಸಿದ್ಧ್ ಅವರ ಸಂಪರ್ಕಕ್ಕೆ ಬಂದ ನಂತರ ರತ್ನಮಂಜರಿ ಎಂಬ ಕಥೆ ಹೊಳಪು ಪಡೆದುಕೊಂಡಿದ್ದೇ ಒಂದು ಸೋಜಿಗ!

Ratnamanjarii

ಅಮೆರಿಕದಲ್ಲಿ ದಶಕಗಳ ಹಿಂದೆ ನಡೆದೊಂದು ಕಥೆಯ ಬೇಸಿನಲ್ಲಿ ರತ್ನಮಂಜರಿ ಚಿತ್ರದ ಕಥೆ ರೂಪುಗೊಂಡಿದೆ. ಅದು ಸಂದೀಪ್ ಸೇರಿದಂತೆ ನಿರ್ಮಾಪಕರೆಲ್ಲರ ಇಷಾರೆಯೊಂದಿಗೇ ರೆಡಿಯಾಗಿರೋ ಕಥೆ. ನಂತರ ಈ ಚಿತ್ರದ ಐವತ್ತರಷ್ಟು ಭಾಗದ ಕಥೆಯನ್ನು ಯುಎಸ್ ನಲ್ಲಿ ಮತ್ತುಳಿದ ಅರ್ಧ ಭಾಗವನ್ನು ಮಡಿಕೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆಯೇ ಇಡೀ ಚಿತ್ರೀಕರಣವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಲಾಗಿದೆ.

ratnamanjari 2

ಪ್ರತಿಯೊಂದು ವಿಚಾರದಲ್ಲಿಯೂ ಕೂಡಾ ಹೊಸತನವೇ ತುಂಬಿಕೊಳ್ಳಬೇಕೆಂಬುದು ಸಂದೀಪ್ ಅವರ ಇರಾದೆಯಾಗಿತ್ತು. ತಮ್ಮಂತೆಯೇ ಕಲೆಯ ಗುಂಗು ಹೊಂದಿದ್ದ ಹೊರನಾಡ ಕನ್ನಡಿಗರಿಗೂ ಅವಕಾಶ ಮಾಡಿಕೊಡಬೇಕೆಂಬ ಆಲೋಚನೆಯೂ ಅವರಲ್ಲಿತ್ತು. ಆದ್ದರಿಂದಲೇ ಈ ಚಿತ್ರದ ಪಾತ್ರಕ್ಕಾಗಿ ವಿದೇಶದಲ್ಲಿ ಆಡಿಷನ್ ಕರೆದಾಗ ಸಾವಿರಕ್ಕೂ ಹೆಚ್ಚು ಆಸಕ್ತರು ಮುಂದೆ ಬಂದಿದ್ದರು. ಕಡೆಗೂ ಅವರಲ್ಲಿ ಹತ್ತು ಮಂದಿಯನ್ನು ಆಯ್ಕೆ ಮಾಡಿ ನಟಿಸಲು ಅವಕಾಶ ಮಾಡಿ ಕೊಡಲಾಗಿದೆ. ಅವರೆಲ್ಲರೂ ವಿದೇಶದಲ್ಲಿಯೇ ರಂಗಭೂಮಿಯ ಸಖ್ಯ ಹೊಂದಿದ್ದವರು.

ratnamanjari

ಕಳೆದ ಆಗಸ್ಟ್ ತಿಂಗಳಲ್ಲಿಯೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಾಡಿದ್ದ ಹಾಡೊಂದು ಅಕ್ಕ ಸಮ್ಮೇಳನದಲ್ಲಿ ಬಿಡುಗಡೆಯಾಗಿತ್ತು. ಈ ಮೂಲಕ ವಿದೇಶದಲ್ಲಿ ಆಡಿಯೋ ಲಾಂಚ್ ಮಾಡಿದ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ ರತ್ನಮಂಜರಿ ಪಾತ್ರವಾಗಿದೆ. ಇನ್ನು ಮಡಿಕೇರಿಯ ತಲಕಾವೇರಿಯಲ್ಲಿ ಚಿತ್ರೀಕರಣ ಮಾಡಿದ ಕಡೆಯ ಚಿತ್ರವಾಗಿಯೂ ರತ್ನಮಂಜರಿ ದಾಖಲಾಗಿದೆ. ಯಾಕೆಂದರೆ ಈ ಚಿತ್ರದ ಚಿತ್ರೀಕರಣವಾದ ಎರಡು ದಿನಗಳಲ್ಲಿಯೇ ರಾಜ್ಯ ಸರ್ಕಾರ ಇನ್ನು ಮುಂದೆ ಅಲ್ಲಿ ಯಾವ ಚಿತ್ರೀಕರಣವೂ ನಡೆಸುವಂತಿಲ್ಲ ಎಂಬ ಆದೇಶ ನೀಡಿತ್ತು!

ratnamanjari 1

ಹೀಗೆ ಚಿತ್ರೀಕರಣವೂ ಸೇರಿದಂತೆ ಎಲ್ಲದರಲ್ಲಿಯೂ ಅಚ್ಚರಿಗಳನ್ನು ಬಚ್ಚಿಟ್ಟುಕೊಂಡಿರೋ ಈ ಚಿತ್ರವನ್ನು ಎನ್ ಆರ್ ಐಗಳೇ ಸೇರಿ ನಿರ್ಮಾಣ ಮಾಡಿರೋದರಿಂದ ಆ ಬಗ್ಗೆ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳಿವೆ. ಅದಕ್ಕೆ ತಕ್ಕುದಾಗಿಯೇ ಚಿತ್ರ ಮೂಡಿ ಬರಬೇಕೆಂಬ ಕಾರಣದಿಂದ ಸಂದೀಪ್ ಅವರ ಸಾರಥ್ಯದಲ್ಲಿ ತಾಂತ್ರಿಕವಾಗಿಯೂ ಈ ಚಿತ್ರ ಶ್ರೀಮಂತಿಕೆಯಿಂದ ಕೂಡಿದೆ. ವಿದೇಶದಲ್ಲಿಯೇ ಇದರ ಸಿಜಿ ಸೇರಿದಂತೆ ಅನೇಕ ಕಾರ್ಯಗಳು ನಡೆದಿವೆ. ಅದಕ್ಕೆ ಹಾಲಿವುಡ್ ಚಿತ್ರಗಳ ತಂತ್ರಜ್ಞರೇ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದಲೇ ರೊಮ್ಯಾಂಟಿಕ್ ಥ್ರಿಲ್ಲರ್ ಕಥಾನಕ ಹೊಂದಿರೋ ರತ್ನಮಂಜರಿ ಹಾಲಿವುಡ್ ಚಿತ್ರಗಳಿಗೇ ಸೆಡ್ಡು ಹೊಡೆಯುವಂತೆ ಮೂಡಿ ಬಂದಿದೆಯಂತೆ.

ಹೀಗೆ ಸಂದೀಪ್ ಅವರು ಸಾಲು ಸಾಲಾಗಿ ರತ್ನಮಂಜರಿಯ ವಿಶೇಷತೆಗಳನ್ನು ದಾಖಲಿಸುತ್ತಾರೆ. ಬೇರೆ ದೇಶದಲ್ಲಿ ಸಾಫ್ಟ್ ವೇರ್ ಜಗತ್ತಿನಲ್ಲಿ ದಿಗ್ಗಜರಾಗಿ ಗುರುತಿಸಿಕೊಂಡಿದ್ದರೂ ಅವರ ಪಾಲಿಗೆ ಸಿನಿಮಾ ಎಂಬುದು ದೈವೀಕ ಸೆಳೆತ. ಅವರೊಳಗೆ ಲಾಭ ನಷ್ಟದ ವ್ಯಾಪಾರಿ ಮನೋಭಾವ ಮೀರಿದೊಂದು ಸಿನಿಮಾ ಪ್ರೀತಿಯಿದೆ. ಇಂಥಾ ಮನಸ್ಥಿತಿಯಿಂದಲೇ ರೂಪುಗೊಂಡಿರೋ ರತ್ನಮಂಜರಿ ಇದೇ ಮೇ ತಿಂಗಳಲ್ಲಿ ತೆರೆ ಕಾಣಲಿದೆ.

TAGGED:Dr.NaveenKannada moviemadikeriNataraj HalebiduNRI Kannada moviesratnamanjarisandeepಎನ್‍ಆರ್‍ಐ ಕನ್ನಡ ಸಿನೆಮಾಡಾ.ನವೀನ್ನಟರಾಜ್ ಹಳೇಬೀಡುಮಡಿಕೇರಿರತ್ನಮಂಜರಿಸಂದೀಪ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
8 minutes ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
12 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
15 minutes ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
44 minutes ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
54 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?