– ಸಾಕ್ಷಿ ಇಲ್ಲವೆಂದು ಕಕ್ಷಿಗಾರನ ಬಿಡುಗಡೆಗೆ ವಕೀಲರ ಮನವಿ
ರಾಂಚಿ: ಪ್ರಕರಣವೊಂದರಲ್ಲಿ ಇಲಿಗಳೇ (Rats) ಸಾಕ್ಷ್ಯವನ್ನು ನಾಶಪಡಿಸಿರುವುದಾಗಿ ಪೊಲೀಸ್ ಅಧಿಕಾರಿಗಳು (Dhanbad Police) ಕೋರ್ಟ್ಗೆ ತನಿಖಾ ವರದಿ ಸಲ್ಲಿಸಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೌದು. ವ್ಯಕ್ತಿಯೊಬ್ಬನಿಂದ ಜಪ್ತಿ ಮಾಡಿ ಗೋದಾಮಿನಲ್ಲಿ ಇರಿಸಲಾಗಿದ್ದ ಸುಮಾರು 10 ಕೆಜಿ ಗಾಂಜಾ (Ganja ), 9 ಕೆಜಿ ಭಾಂಗ್ ಅನ್ನು ಇಲಿಗಳೇ ತಿಂದುಬಿಟ್ಟಿವೆ ಎಂದು ಜಾರ್ಖಂಡ್ನ ಧನ್ಬಾದ್ ಪೊಲೀಸರು ನ್ಯಾಯಾಲಯಕ್ಕೆ (Jharkhand Court) ತನಿಖಾ ವರದಿ ಸಲ್ಲಿಸಿದ್ದಾರೆ. 2018ರ ಡಿಸೆಂಬರ್ 14 ರಂದು ಇಲ್ಲಿನ ಪೊಲೀಸರು ನಡೆಸಿದ ದಾಳಿಯಲ್ಲಿ ಶಂಭು ಅಗರ್ವಾಲ್ ಆರೋಪಿಯಿಂದ ಗಾಂಜಾ ಮತ್ತು ಭಾಂಗ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೇ ಮಾದಕ ವಸ್ತುಗಳನ್ನು ಹೊಂದಿದ್ದಕ್ಕಾಗಿ ಆರೋಪಿಯನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: 9 ಸಾವಿರ ಲಂಚಕ್ಕೆ ಬೇಡಿಕೆ – ಲೋಕಾಯುಕ್ತಕ್ಕೆ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್
ಈ ಪ್ರಕರಣದ ವಿಚಾರಣೆ ಸಂದರ್ಭಧಲ್ಲಿ ಪ್ರಿನ್ಸಿಪಾಲ್ ಮತ್ತು ಸೆಷನ್ ನ್ಯಾಯಾಧೀಶರಾದ ರಾಮ್ ಶರ್ಮಾ ಅವರು, ಸಾಕ್ಷ್ಯಗಳನ್ನು ಕೋರ್ಟ್ಗೆ ಸಲ್ಲಿಸುವಂತೆ ತನಿಖಾಧಿಕಾರಿ ಜೈ ಪ್ರಕಾಶ್ ಪ್ರಸಾದ್ ಅವರಿಗೆ ಸೂಚಿಸಿದ್ದರು. ಆದ್ರೆ ನ್ಯಾಯಾಲಯದ ಆದೇಶದ ಹೊರತಾಗಿಯೂ ಪೊಲೀಸರು ಸಾಕ್ಷ್ಯಗಳನ್ನು ಕೋರ್ಟ್ಗೆ ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಈ ವಸ್ತುಗಳನ್ನು ಇಲಿಗಳು ಸೇವಿಸಿ ನಾಶಪಡಿಸಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದರು. ಏಪ್ರಿಲ್ 6 ರಂದು ವರದಿ ಸಲ್ಲಿಸಿದರು.
ಏತನ್ಮಧ್ಯೆ, ಶಂಭು ಅಗರ್ವಾಲ್ ಪರ ವಕೀಲರು, ತಮ್ಮ ಕಕ್ಷಿದಾರರನ್ನು ತಪ್ಪಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಕೋರ್ಟ್ಗೆ ಸಾಕ್ಷಿ ಮುಖ್ಯ, ಅದರ ಆಧಾರದ ಮೇಲೆಯೇ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಪೊಲೀಸರು ವಸ್ತುಗಳನ್ನು ಜಪ್ತಿ ಮಾಡಿರುವುದು ನಿಜವೇ ಆದಲ್ಲಿ, ಏಕೆ ಕೋರ್ಟ್ಗೆ ಸಲ್ಲಿಸಲು ಆಗಲಿಲ್ಲ. ನನ್ನ ಕಕ್ಷಿಗಾರರನ್ನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸದ್ಯ ಈ ಪ್ರಕರಣದ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕಾಲರಾ ಪತ್ತೆ ಬೆನ್ನಲ್ಲೇ ಪಿಜಿ ಅಸೋಸಿಯೇಷನ್ನಿಂದ ಪ್ರತ್ಯೇಕ ಗೈಡ್ಲೈನ್ಸ್