Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

Cinema

ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

Public TV
Last updated: April 26, 2025 5:17 pm
Public TV
Share
3 Min Read
ravi basrur
SHARE

ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ (Veera Chandrahasa) ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18 ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು (Ravi Basrur) ಹೇಳಿದರು.

ಮಂಗಳೂರಿನ (Mangaluru) ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮರ್ಥ್ಯದವರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ, ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ

veera chandrahasa movie

ಎಲ್ಲರೂ ಇದನ್ನು ಸಿನಿಮಾ ಆಂಗಲ್‌ನಲ್ಲಿ ನೋಡುತ್ತಿದ್ದರು. ಆದರೆ ಇದು ಬರೇ ಸಿನಿಮಾ ಅಲ್ಲ, ಇದು ತುಳುನಾಡಿನ ಕಲೆ. ಆದ್ದರಿಂದ ಇದನ್ನು ಅದೇ ಶೈಲಿಯಲ್ಲಿ ನೋಡಿದರೆ, ವೀಕ್ಷಕನ ದೃಷ್ಟಿಕೋನ ಬದಲಾಗುತ್ತೆ. ಅದ್ಭುತ ಜ್ಞಾನ ಭಂಡಾರವನ್ನೇ ಹೊಂದಿರುವ ಯಕ್ಷಗಾನವನ್ನು ಯಾಕೆ ಇಷ್ಟಕ್ಕೇ ಸೀಮಿತವಾಗಿಟ್ಟುಕೊಳ್ಳಬೇಕು? ಇದನ್ನು ಪ್ರಪಂಚದ ಮುಂದೆ ತರಬೇಕು ಎನ್ನುವ ನಿಟ್ಟಿನಲ್ಲಿ ಈ ಚಿತ್ರ ರೂಪಿಸಲಾಗಿದೆ. ಬಾಹುಬಲಿಯನ್ನು ಮೀರಿಸುವ ಎಲ್ಲಾ ಲಕ್ಷಣವನ್ನು ಈ ಚಿತ್ರ ಹೊಂದಿದೆ. ಇಲ್ಲಿ ಯಕ್ಷಗಾನ ಮಾತ್ರವಲ್ಲ ಕಲಾವಿದರ ಬದುಕೂ ಕೂಡಾ ಅನಾವರಣಗೊಂಡಿದೆ. 1,500 ಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ವಿಜೃಂಭಣೆಯಿಂದ ವಿಶ್ವದ ಮುಂದೆ ಮೆರೆಸುವ ಒಂದು ಪ್ರಯತ್ನ. ಇದು ಕೇವಲ ಮನೋರಂಜನೆ ಉದ್ದೇಶವಷ್ಟೇ ಅಲ್ಲದೆ, ಭವಿಷ್ಯದ ಅನೇಕ ಚಿತ್ರಗಳಿಗೆ ದಾರಿ ತೋರುವ, ಪರಂಪರೆ ಉಳಿಸುವ, ಭವಿಷ್ಯದ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಆರಂಭ. ಇದರಲ್ಲಿ ಹೆಚ್ಚಾಗಿ ಯಕ್ಷ ಕಲಾವಿದರೇ ಅಭಿನಯಿಸಿದ್ದಾರೆ‌ ಎಂದರು ರವಿ ಬಸ್ರೂರು.

ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲಾವಿದರನ್ನೇ ಬಳಸಿ, ಯಕ್ಷಗಾನೀಯವಾಗಿ ಚಲನಚಿತ್ರವನ್ನು ಹೇಗೆ ಮಾಡಬಹುದು ಎನ್ನುವುದನ್ನು ಬಸ್ರೂರು ತೋರಿಸಿಕೊಟ್ಟಿದ್ದಾರೆ. ಕಾಂತಾರ ಚಲನಚಿತ್ರ ಬಂದ ಮೇಲೆ ದೈವಾರಾಧನೆಗೆ ವಿಶ್ವಮಟ್ಟದ ಮನ್ನಣೆ ಸಿಕ್ಕಿತು. ಅದೇ ರೀತಿ ಈ ಚಿತ್ರದಲ್ಲಿ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ಮನ್ನಣೆ ಸಿಕ್ಕಿದೆ. ಈ ಚಿತ್ರದಲ್ಲಿ ನಾನೂ ಒಂದು ಹಾಡನ್ನು ಯಕ್ಷಗಾನ ಶೈಲಿಯಲ್ಲೇ ಹಾಡಿದ್ದು ವಿಶೇಷ. ಈ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲಿಯೂ ಲೋಪ, ಅಪಚಾರ ಆಗದ ಹಾಗೆ ನೋಡಲಾಗಿದೆ. ಮುಂದಿನ ಜನಾಂಗಕ್ಕೆ ಮಾತ್ರವಲ್ಲ ಯಕ್ಷಗಾನದ ಮೇಲೆ ಆಸಕ್ತಿ ಇಲ್ಲದವನೂ ಕೂಡ ಆಸಕ್ತಿ ಬೆಳೆಸುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಸಿನಿಮಾದ ಮೂಲಕ ಯಕ್ಷಗಾನದ ಕಂಪನ್ನು ವಿಶ್ವದೆಲ್ಲೆಡೆ ರವಿ ಬಸ್ರೂರು ಪಸರಿಸಿದ್ದಾರೆ ಎಂದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಝನ್ಸಾಲೆ ಮಾತನಾಡಿ, ಆರೇಳು ಗಂಟೆ ಇರುವ ಯಕ್ಷಗಾನವನ್ನು ಎರಡೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ಆದರೆ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲೂ ಲೋಪವಾಗಿಲ್ಲ. ಅವರ ಚಿತ್ರದ ಉದ್ದೇಶ ಉತ್ತಮವಾಗಿದ್ದು, ನಾವದಕ್ಕೆ ಪ್ರೋತ್ಸಾಹಿಸೋಣ ಎಂದರು.

ರವಿ ಬಸ್ರೂರು ತಂಡದ ಪರಿಶ್ರಮದಲ್ಲಿ ಮೂಡಿಬಂದ ಈ ಚಲನಚಿತ್ರವನ್ನು ಎನ್‌.ಎಸ್‌. ರಾಜಕುಮಾರ್ ನಿರ್ಮಿಸಿದ್ದಾರೆ. ಗೀತಾ ರವಿ ಬಸ್ರೂರು, ಅನೂಪ್ ಗೌಡ, ಅನುಲ್ ಕುಮಾರ್ ಪೂವ್ವಾಡಿ ಸಹ‌ ನಿರ್ಮಾಪಕರಾಗಿ, ರವಿ ಬಸ್ರೂರು ಸಂಗೀತ, ಕಿರಣ್ ಕುಮಾರ್ ಆರ್ ಛಾಯಾಗ್ರಹಣ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್ ಕೂಡಾ ಬಣ್ಣ ಹಚ್ಚಿದ್ದು ಸುಮಾರು 900 ಕಲಾವಿದರಿದ್ದಾರೆ‌. ಖ್ಯಾತ ಭಾಗವತರುಗಳಾದ ಪಟ್ಲ ಸತೀಶ್ ಶೆಟ್ಟಿ ಮತ್ತು ರಾಘವೇಂದ್ರ ಝನ್ಸಾಲೆ ಈ ಸಿನಿಮಾದಲ್ಲಿ ಹಾಡಿದ್ದಾರೆ.

TAGGED:MangaluruRavi BasrurVeera ChandrahasaVeera Chandrahasa MovieYakshaganaಮಂಗಳೂರುಯಕ್ಷಗಾನರವಿ ಬಸ್ರೂರುವೀರ ಚಂದ್ರಹಾಸ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
1 hour ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
2 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
2 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?