Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

Bengaluru City

Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

Public TV
Last updated: December 8, 2017 9:33 pm
Public TV
Share
4 Min Read
ravi belagere sunil ff
SHARE

ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. Public Tv

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

Sunil Heggaravalli

ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

sunil heggarvali ravi 1

ವಿಳಾಸ ತಿಳಿಯಲು ಕೊರಿಯರ್ ನೆಪ:
ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

https://www.youtube.com/watch?v=tvAkOpM6ZZo

ravi belagere 5

RAVI ACCUSED

RAVI ACCUSED 1

RAVI CAR

RAVI CAR 1

RAVI CAR 2

RAVI CAR 3

SHASHIDHAR MUNDEVADA

RAVI FRIEND

RAVI TAHIR

RAVI GUN

 

sunil heggarvalli 2

sunil heggarvalli 4

sunil heggarvalli 5

 

HAI BENGALURU OFFICE RAVI BELAGERE 2

HAI BENGALURU OFFICE RAVI BELAGERE 1

TAGGED:arrestBangalurugauri lankesh murderpolicePublic TVravi belageresunil heggaravalliSupariಗೌರಿ ಲಂಕೇಶ್ ಹತ್ಯೆಪಬ್ಲಿಕ್ ಟಿವಿಪೊಲೀಸ್ಬಂಧನಬೆಂಗಳೂರುರವಿಬೆಳಗೆರೆಸುನೀಲ್ ಹೆಗ್ಗರವಳ್ಳಿಸುಪಾರಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

01 11
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-1

Public TV
By Public TV
4 hours ago
02 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-2

Public TV
By Public TV
5 hours ago
03 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-3

Public TV
By Public TV
5 hours ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
5 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
5 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?