Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

Cricket

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

Public TV
Last updated: July 16, 2017 4:21 pm
Public TV
Share
3 Min Read
Ravi Shastri Salary 1
SHARE

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ.

ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ.

ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. ಜಾಸ್ತಿ ಇರಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರವಿಶಾಸ್ತ್ರಿ ಈ ಹಿಂದೆ ಮಾರ್ಗದರ್ಶಕರಾಗಿದ್ದಾಗಲೂ ಅವರಿಗೆ ಸಂಬಳ 7.5 ಕೋಟಿ ರೂ. ಒಳಗಡೆ ಇತ್ತು. ಭಾರತ ಎ ತಂಡ ಮತ್ತು 19 ವರ್ಷದ ಒಳಗಿನ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ಮೊದಲ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಿದ್ದರೆ ಎರಡನೇ ವರ್ಷ 4.5 ಕೋಟಿ ರೂ. ಸಂಭಾವನೆ ನೀಡಲಾಗಿತ್ತು. ಈಗ ವಿದೇಶದಲ್ಲಿ ನಡೆಯುವ ಪಂದ್ಯಗಳಿಗೆ ದ್ರಾವಿಡ್ ಅವರನ್ನು ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಿಸಲಾಗಿದೆ.

ಬೌಲಿಂಗ್ ಕೋಚ್ ಆಗಿ ನೇಮಕವಾಗಿರುವ ಜಹೀರ್ ಖಾನ್ ಅವರಿಗೆ ಎಷ್ಟು ಸಂಭಾವನೆ ಎನ್ನುವುದು ನಿಗದಿಯಾಗಿಲ್ಲ. ಅವರು ಎಷ್ಟು ದಿನ ತಂಡದ ಜೊತೆ ಇರುತ್ತಾರೆ ಆ ಅವಧಿಗೆ ಸಂಬಳ ನೀಡಲು ಬಿಸಿಸಿಐ ಮುಂದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಜಹೀರ್ ಖಾನ್ ಅವರು 100 ದಿನಕ್ಕೆ ವಾರ್ಷಿಕವಾಗಿ 4 ಕೋಟಿ ರೂ. ಸಂಭಾವನೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಬಿಸಿಸಿಐ ತಿರಸ್ಕರಿಸಿತ್ತು.

ಬ್ಯಾಟಿಂಗ್ ಕೋಚ್, ಆಟಗಾರರಿಗೆ ಸಂಬಳ ಎಷ್ಟು?
ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ. ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಮಾರ್ಚ್ ನಲ್ಲಿ ಇವರ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿತ್ತು.

ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದರು.

ಮಾರ್ಚ್ ತಿಂಗಳಿನಲ್ಲಿ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

ಎಷ್ಟಿತ್ತು? ಈಗ ಎಷ್ಟು ಆಗಿದೆ?
`ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈಗ ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಎ ದರ್ಜೆ:
ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

ಬಿ ದರ್ಜೆ:
ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

ಸಿ ದರ್ಜೆ:
ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.

 

UPDATE: @RaviShastriOfc appointed as the Head Coach of the Indian Cricket Team till ICC World Cup 2019 pic.twitter.com/DwjEjRdFMd

— BCCI (@BCCI) July 11, 2017

TAGGED:bccicoachcricketindiamumbaiRavi ShastrisalaryTeam indiaಕೋಚ್ಕ್ರಿಕೆಟ್ಬಿಸಿಸಿಐಮುಂಬೈರವಿಶಾಸ್ತ್ರಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
18 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
52 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?