ಕಿರುತೆರೆ ನಟ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರ್ (Ravinder Chandrasekaran) ಮದುವೆಯಾದ ನಂತರ ದಿನಕ್ಕೊಂದು ಸುದ್ದಿ ಹೊರ ಬರುತ್ತಿವೆ. ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಮಾಡಿದ್ದ ನೆಟ್ಟಿಗರೇ ಇದೀಗ ಪತ್ನಿ ಮಹಾಲಕ್ಷ್ಮಿಗೆ ಉಡುಗೊರೆಯಾಗಿ ಕೊಟ್ಟ ಚಿನ್ನದ (Gold) ಬಗ್ಗೆ ಕೇಳಿ ಶಾಕ್ ಆಗಿದ್ದರೆ. ಮದುವೆಗಾಗಿ ರವೀಂದರ್ ಬರೋಬ್ಬರಿ ಒಂದೂವರೆ ಕೆಜಿ ತೂಕದ ಒಡೆವೆಗಳನ್ನು ಮಾಡಿಸಿದ್ದರು ಎನ್ನುವುದು ಬ್ರೇಕಿಂಗ್ ನ್ಯೂಸ್. ಅದರಲ್ಲಿ ಕೆಲವು ಒಡವೆಗಳನ್ನು ಮಾತ್ರ ಮಹಾಲಕ್ಷ್ಮಿ ಮದುವೆ ದಿನ ಹಾಕಿದ್ದರಂತೆ.
ರವೀಂದರ್ ಮತ್ತು ಮಹಾಲಕ್ಷ್ಮಿ (Mahalakshmi) ಒಂದೇ ಸೀರಿಯಲ್ ನಲ್ಲಿ ಕೆಲಸ ಮಾಡಿದವರು. ಮಹಾಲಕ್ಷ್ಮಿ ನಟಿಯಾಗಿ ಕಾಣಿಸಿಕೊಂಡಿದ್ದರೆ, ರವೀಂದರ್ ಆ ಸೀರಿಯಲ್ ನಿರ್ಮಾಪಕರು. ಹೀಗೆ ಪರಿಚಯವಾದವರು, ನಂತರ ಪ್ರೀತಿಸಿ ಇದೀಗ ಹೊಸ ಜೀವನಕ್ಕೆ (Marriage) ಕಾಲಿಟ್ಟಿದ್ದಾರೆ. ಮಹಾಲಕ್ಷ್ಮಿಯನ್ನು ಅಪಾರವಾಗಿ ಪ್ರೀತಿಸುವ ರವೀಂದರ್, ಆ ಪ್ರೀತಿಗಾಗಿ ಅವರು ಸಾಕಷ್ಟು ಉಡುಗೊರೆಯನ್ನೇ ಕೊಟ್ಟಿದ್ದಾರಂತೆ. ಈ ಹಿಂದೆ ಅವರು ನೂರಾರು ಸೀರೆಗಳನ್ನು ಕೊಟ್ಟಿದ್ದು ಕೂಡ ಸುದ್ದಿ ಆಗಿತ್ತು.
ನಟಿ ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಯೂಟ್ಯೂಬ್ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್
ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.
ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ (Non Veg) ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.