Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರನ್ನು ಮೂಢರನ್ನಾಗಿಸಬೇಡಿ, ಸ್ವಂತವಾಗಿ ದುಡಿದು ಹೆಸರು ಸಂಪಾದಿಸಿ: ಸುಮಲತಾ ವಿರುದ್ಧ ಜೆಡಿಎಸ್ ಅಭಿಮಾನಿಗಳು ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರನ್ನು ಮೂಢರನ್ನಾಗಿಸಬೇಡಿ, ಸ್ವಂತವಾಗಿ ದುಡಿದು ಹೆಸರು ಸಂಪಾದಿಸಿ: ಸುಮಲತಾ ವಿರುದ್ಧ ಜೆಡಿಎಸ್ ಅಭಿಮಾನಿಗಳು ಗರಂ

Districts

ಜನರನ್ನು ಮೂಢರನ್ನಾಗಿಸಬೇಡಿ, ಸ್ವಂತವಾಗಿ ದುಡಿದು ಹೆಸರು ಸಂಪಾದಿಸಿ: ಸುಮಲತಾ ವಿರುದ್ಧ ಜೆಡಿಎಸ್ ಅಭಿಮಾನಿಗಳು ಗರಂ

Public TV
Last updated: June 13, 2019 12:03 pm
Public TV
Share
2 Min Read
sumalatha jds
SHARE

ಮಂಡ್ಯ: ಕನಗನಮರಡಿ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ತಲಾ ಎರಡು ಲಕ್ಷ ರೂ. ಪರಿಹಾರ ಬಿಡುಗಡೆಯಾದ ವಿಚಾರಕ್ಕೆ ಸಂಸದೆ ಸುಮಲತಾ ನಡೆ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಮಾನಿಗಳು ಕಿಡಿಕಾಡಿದ್ದಾರೆ.

ರವೀಂದ್ರ ಶ್ರೀಕಂಠಯ್ಯ ಸುದ್ದಿಗಳು ಹೆಸರಿನ ಫೇಸ್‍ಬುಕ್ ಪೇಜ್‍ನಿಂದ ಸುಮಲತಾರ ವಿರುದ್ಧ ಪೋಸ್ಟ್ ಮಾಡಲಾಗಿದೆ. ಕನಗನಮರಡಿ ದುರಂತ ನಡೆದಾಗ ಸುಮಲತಾ ಅವರು ಅಧಿಕಾರದಲ್ಲೇ ಇರಲಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅಂದು ಬಸ್ ದುರಂತ ನಡೆದ ಸ್ಥಳಕ್ಕೆ ಬಂದು ಸಾವಿಗೀಡಾದವರ ಕುಟುಂಬಸ್ಥರ ಸಮಸ್ಯೆ ಆಲಿಸಿದ್ದರು. ಅಂದು ಕುಮಾರಸ್ವಾಮಿ ಅವರು ಪರಿಹಾರ ವಿತರಣೆ, ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪರಿಹಾರಕ್ಕೆ ಒತ್ತಾಯ ಮಾಡಿದ್ದರು. ಈ ಕೀರ್ತಿ ಸಿಎಂ ಜೊತೆಗೆ ಜಿಲ್ಲೆಯ ಶಾಸಕರು, ಅಂದಿನ ಸಂಸದ ಎಲ್.ಆರ್.ಶಿವರಾಮೇಗೌಡ, ಮಂಡ್ಯ ಡಿಸಿ ಮಂಜುಶ್ರೀ ಅವರಿಗೆ ಸಲ್ಲಬೇಕು. ಆದರೆ ಸುಮಲತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪರಿಹಾರ ಹಣ ಬಿಡುಗಡೆ ಮಾಡಿಸಿದ್ದೇನೆಂದು ಜನರನ್ನು ಮೂಢರನ್ನಾಗಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

MND Bus Accident

ಪೋಸ್ಟ್ ನಲ್ಲಿ ಏನಿದೆ?
ಶ್ರೀಮತಿ ಸುಮಲತಾ ಅಂಬರೀಶ್ ರವರೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ 2018ರ ನವೆಂಬರ್ 24 ರಂದು ನಡೆದ ಬಸ್ ದುರಂತದಲ್ಲಿ 30 ಜನ ಮೃತರಾಗಿದ್ದರು. ಅಂದು ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿದಂತೆ ಸಂಸದರು ಸೇರಿ ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ರವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಸರ್ಕಾರದಿಂದ ನೆರವು ನೀಡಲಾಯಿತು. ಭಾರತ ಸರ್ಕಾರದಿಂದ ನೆರವು ಪಡೆಯಲು ಜಿಲ್ಲಾಧಿಕಾರಿಗಳ ಕಛೇರಿಯಿಂದ 2019ರ ಫೆ.7 ರಂದು ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಭಾರತ ಸರ್ಕಾರವು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಫೆ.12 ರಂದು ಮಂಜೂರು ಮಾಡಿರುತ್ತದೆ.

Sumalatha Ambareesh HDK

ಮಂಜೂರಾತಿ ಪ್ರತಿಯು ಫೆ.19 ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿರುತ್ತದೆ. ಜಿಲ್ಲಾಧಿಕಾರಿಗಳ ಖಾತೆಯಿಂದ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಲು ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡ ಸಂದರ್ಭದಲ್ಲಿ ಇಡೀ ದೇಶದಲ್ಲಿ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಪ್ರಕ್ರಿಯೆಯು ಸ್ಥಗಿತಗೊಂಡಿತ್ತು. ಈ ಕಾರ್ಯಕ್ಕೆ ಸಲ್ಲಬೇಕಾದ ಕೀರ್ತಿಯು ಹಿಂದಿನ ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ರವರಿಗೆ, ಸಂಸದರು, ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರಿಗೆ ಹೊರತು ಕಳೆದ ತಿಂಗಳಿನಲ್ಲಿ ಲೋಕಸಭಾ ಸದಸ್ಯರಾಗಿ ನಾನು ಮೋದಿ ಅವರನ್ನು ಭೇಟಿ ಮಾಡಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿಸಿದ್ದೇನೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿರುವ ಸುಮಲತಾರಿಗಲ್ಲ. ಸುಮಲತಾ ಅವರೇ ಸ್ವಂತವಾಗಿ ಕೆಲಸಮಾಡಿ ಹೆಸರು ಸಂಪಾದಿಸಿ.

SUMALATHA

ಸುಮ್ಮನೆ ಮಂಡ್ಯ ಜನರನ್ನು ಮೂಢರನ್ನಾಗಿಸಲು ಹೋಗದೇ ಜಾಗೃತರಾಗಿ ನಿಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಪರಿಹಾರವನ್ನು ಹಿಂದಿನ ಸಂಸದರು ಮತ್ತು ಜಿಲ್ಲಾಧಿಕಾರಿಗಳು ಮಂಜೂರು ಮಾಡಿಸಿರುವುದಕ್ಕೆ ನಾವು ದಾಖಲೆ ನೀಡುತ್ತೇವೆ. ನೀವೇ ಪರಿಹಾರ ಮಂಜೂರು ಮಾಡಿಸಿರುವುದಕ್ಕೆ ದಾಖಲೆ ನೀಡಿ ಎಂದು ಬರೆದು ಸುಮಲತಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

https://www.facebook.com/permalink.php?story_fbid=2502437746650334&id=100006523990844

TAGGED:CM Kumaraswamyfacebook postKanaganamaradi bus accidentmandyaPublic TVRavindra shrikantaiah fansSumalathaಕನಗನಮರಡಿ ಬಸ್ ದುರಂತಪಬ್ಲಿಕ್ ಟಿವಿಫೇಸ್‍ಬುಕ್ ಪೋಸ್ಟ್ಮಂಡ್ಯರವೀಂದ್ರ ಶ್ರೀಕಂಠಯ್ಯ ಅಭಿಮಾನಿಗಳುಸಿಎಂ ಕುಮಾರಸ್ವಾಮಿಸುಮಲತಾ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
4 minutes ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
11 minutes ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
15 minutes ago
Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
16 minutes ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
32 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?