ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ ಪ್ರತಿಷ್ಠಿತ ವರ್ಷದ ಗವರ್ನರ್‌ ಪ್ರಶಸ್ತಿ

Public TV
2 Min Read
RBI Governor Shaktikanta Das

ನವದೆಹಲಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ (RBI) ಗವರ್ನರ್‌ ಶಕ್ತಿಕಾಂತ ದಾಸ್‌ (Governor Shaktikanta Das) ಅವರಿಗೆ ಪ್ರತಿಷ್ಠಿತ ʼವರ್ಷದ ಗವರ್ನರ್‌ʼ ಪ್ರಶಸ್ತಿ ಲಭಿಸಿದೆ.

ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ ಗವರ್ನರ್‌ ಪ್ರಶಸ್ತಿ (Governor of the Year Award) ನೀಡಿದೆ.

ಕೋವಿಡ್‌ 19 (Covid 19) ಉಕ್ರೇನ್‌ ಯುದ್ಧದಿಂದಾಗಿ (Russia-Ukraine War ) ಸೃಷ್ಟಿಯಾದ ಹಣದುಬ್ಬರ ಮತ್ತು ಹಲವು ಸವಾಲಿನ ಮಧ್ಯೆಯೂ ಶಕ್ತಿಕಾಂತ್‌ ದಾಸ್‌ ಅವರ ಸ್ಥಿರ ನಾಯಕತ್ವವನ್ನು ಶ್ಲಾಘಿಸಲಾಗಿದೆ.

dal price hike

ದಾಸ್ ಅವರ ನಾಯಕತ್ವದಲ್ಲಿ ಹಣದುಬ್ಬರ ನಿಯಂತ್ರಿಸಲು ಹಲವಾರು ಬಾರಿ ರೆಪೋ ದರಗಳನ್ನು ಹೆಚ್ಚಿಸುವ ಹಲವಾರು ನಿರ್ಣಾಯಕ ಸುಧಾರಣೆಗಳನ್ನು ಜಾರಿಗೆ ತಂದಿತು. ನವೀನ ಪಾವತಿ ವ್ಯವಸ್ಥೆಗಳನ್ನು ಪರಿಚಯಿಸಿತು. ತೀವ್ರವಾದ ರಾಜಕೀಯ ಒತ್ತಡ ಮತ್ತು ಆರ್ಥಿಕ ಸಂಕಷ್ಟದ ನಡುವೆಯೂ ಆರ್‌ಬಿಐಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂದು ಪ್ರಕಟಣೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಸಾರ್ವಜನಿಕ ನೀತಿ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿ ಪರಿಣತಿ ಹೊಂದಿರುವ ಹಣಕಾಸು ಪ್ರಕಾಶಕವಾಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ ಕೇಂದ್ರೀಯ ಬ್ಯಾಂಕುಗಳು ಮತ್ತು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಮೇಲೆ ಅಧ್ಯಯನ ನಡೆಸುತ್ತದೆ.

RBI reuters

ಆರ್‌ಬಿಐ ಈ ಪ್ರಶಸ್ತಿಯನ್ನು ಎರಡನೇ ಬಾರಿ ಪಡೆದಿದೆ. ಈ ಹಿಂದೆ 2015ರಲ್ಲಿ ಅಂದಿನ ಗವರ್ನರ್‌ ರಘುರಾಮ್‌ ರಾಜನ್‌ ಪಡೆದಿದ್ದರು. ಇದನ್ನೂ ಓದಿ: ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್

ಶಕ್ತಿಕಾಂತ ದಾಸ್ ಅವರ ಅಧಿಕಾರ ಅವಧಿಯನ್ನು ಕೇಂದ್ರ ಸರ್ಕಾರ 2021ರ ಅಕ್ಟೋಬರ್‌ನಲ್ಲಿ ಮೂರು ವರ್ಷಗಳಿಗೆ ವಿಸ್ತರಿಸಿದ್ದು ಅವರು 2024ರ ಡಿಸೆಂಬರ್‌ವರೆಗೂ ಆರ್‌ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ.

ಊರ್ಜಿತ್ ಪಟೇಲ್ ಅವರ ರಾಜೀನಾಮೆ ನಂತರ, ದಾಸ್ ಅವರನ್ನು ಆರ್‌ಬಿಐನ 25ನೆಯ ಗವರ್ನರ್ ಆಗಿ 2018ರ ಡಿಸೆಂಬರ್ 11ರಂದು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು 2014ರಲ್ಲಿ ಅಧಿಕಾರಕ್ಕೆ ಬಂದ ನಂತರದಲ್ಲಿ ಎರಡನೆಯ ಅವಧಿಗೆ ಗವರ್ನರ್ ಆಗಿ ನೇಮಕಗೊಂಡಿರುವ ಮೊದಲ ವ್ಯಕ್ತಿ ದಾಸ್. ಕೋವಿಡ್‌–19 ಬಿಕ್ಕಟ್ಟಿನ ಸಂದರ್ಭದಲ್ಲಿ ಅರ್ಥ ವ್ಯವಸ್ಥೆಯನ್ನು ಮುನ್ನಡೆಸುವಲ್ಲಿ ದಾಸ್ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *